ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ ಯುವಕ, ಕುಣಿದು ಕುಪ್ಪಳಿಸಿದ ಯುವತಿ.

ಪ್ರೀತಿ ಯೇ ಹಾಗೆ, ಒಮ್ಮೆ ಪ್ರೀತಿಯಲ್ಲಿ ಬಿದ್ದರೆ ಈ ಜಗತ್ತೇ ಕಾಣುವುದಿಲ್ಲ. ಪ್ರೇಮಿಗಳು ತನ್ನನ್ನು ಪ್ರೀತಿಸುವ ಜೀವದ ಖುಷಿಗಾಗಿ ಏನು ಬೇಕಾದರೂ ಕೂಡ ಮಾಡಿಬಿಡುತ್ತಾರೆ. ಅದರಲ್ಲಿಯೂ ಈ ಹುಡುಗ ಪ್ರಾಮಾಣಿಕವಾಗಿ ಪ್ರೀತಿಸುತ್ತಿದ್ದರೆ ತನ್ನವಳಿಗಾಗಿ ಏನನ್ನು ಬೇಕಾದರೂ ಮಾಡಲು ಸಿದ್ಧವಿರುತ್ತಾನೆ. ಇದೀಗ ಪ್ರೇಮಿಯೊಬ್ಬನು ಮೆಟ್ರೋ ನಿಲ್ದಾಣದಲ್ಲಿ ತನ್ನ ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದು, ಈ ಬಗೆಗಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾ ದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.


Satendra prathap ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ‘ಅಖಿಲ ಭಾರತ ಖಾಂತಿ ಮರ್ದ್ ಅಸೋಸಿಯೇಶನ್ನ ರಾಷ್ಟ್ರೀಯ ಅಧ್ಯಕ್ಷನಾಗಿರುವ ನಾನುಈ ಯುವಕನ ಪುರುಷ ಪ್ರಮಾಣಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸುತ್ತೇನೆ. ಈ ಯುವಕನು ಗಂಡಸು ಜಾತಿಗೆ ಅವಮಾನ. ಈ ಪುರುಷರ ಸಂಘದಿಂದ ಈತನನ್ನು ಅಮಾನತ್ತುಗೊಳಿಸಬೇಕೆಂದು ಅಗ್ರಹಿಸುತ್ತೇನೆ. ಇಂತಹ ಯುವಕರು ನಮ್ಮ ಪುರುಷ ಸಮಾಜಕ್ಕೆ ಕಳಂಕ. ಇಂದು ಆಕೆಯ ಕಾಲಿಗೆ ನಮಸ್ಕರಿಸಿದ್ದಾನೆ. ನಾಳೆ ಆಕೆಯ ಕೈ-ಕಾಲುಗಳನ್ನು ಒತ್ತುತ್ತಾನೆ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ ಮೆಟ್ರೋ ನಿಲ್ದಾಣದ ಫ್ಲಾಟ್ ಫಾರ್ಮ್ ನಲ್ಲಿರುವ ಕಟ್ಟೆಯಲ್ಲಿ ಯುವಕನು ಕುಳಿತುಕೊಂಡಿರುವುದನ್ನು ಕಾಣಬಹುದು. ಎದುರಿಗೆ ಆತನ ಪ್ರೇಯಸಿಯೂ ನಿಂತುಕೊಂಡಿದ್ದು ಆತನು ಆಕೆಯ ಪಾದಗಳನ್ನು ಮೂರು ಸಲ ಮುಟ್ಟಿ ಕಣ್ಣಿಗೆ ಒತ್ತಿಕೊಳ್ಳುತ್ತಿರುವುದನ್ನು ಕಾಣಬಹುದು. ಆ ಬಳಿಕ ಕೆಲ ನಿಮಿಷಗಳ ಕಾಲ ಇಬ್ಬರೂ ಮಾತುಕತೆ ನಡೆಸಿದ್ದಾರೆ. ವಿಡಿಯೋದಲ್ಲಿ ಯುವತಿ ಕೈಯಲ್ಲಿ ಕ್ಯಾಂಡಿ ಹಿಡಿದುಕೊಂಡಿರುವ ಈ ಯುವತಿಯೂ ಕುಣಿಯುತ್ತಿರುವುದನ್ನು ಕಾಣಬಹುದು.

https://www.facebook.com/share/r/16QjyDmRij/

ಈ ವಿಡಿಯೋ ಈಗಾಗಲೇ 283.2 ಕೆ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ವಿಡಿಯೋ ನೋಡಿದ ಬಳಕೆದಾರrರು ಮಿಶ್ರ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಬಳಕೆದಾರರೊಬ್ಬರು, ‘ಈಗಲೇ ಈ ಯುವಕನ ಪರಿಸ್ಥಿತಿ ನೋಡಲಾಗುತ್ತಿಲ್ಲ, ಮದುವೆಯಾದ ಮೇಲೆ ಈ ಯುವಕನಿಗೆ ದೇವರೇ ಗತಿ’ ಎಂದಿದ್ದಾರೆ. ಇನ್ನೊಬ್ಬರು, ‘ಹೆಣ್ಣು ಗಂಡು ಸಮಾನರು ಎಂದ ಮೇಲೆ ಪಾದ ಮುಟ್ಟಿ ಸ್ಪರ್ಶಿಸುವುದರಲ್ಲಿ ಏನು ತಪ್ಪಿಲ್ಲ. ಪ್ರೀತಿಯಲ್ಲಿ ಇಬ್ಬರೂ ಸೋಲಬೇಕು. ಆಗ ಮಾತ್ರ ಈ ಪ್ರೀತಿಯೂ ಉಳಿಯಲು ಸಾಧ್ಯ’ ಎಂದಿದ್ದಾರೆ. ಮತ್ತೊರ್ವ ಬಳಕೆದಾರ, ‘ಅಣ್ಣ ಅವನು ಅವಳಿಗೆ ಸಂಪೂರ್ಣವಾಗಿ ಶರಣಾಗಿದ್ದಾನೆ. ಆಗಿದ್ದಾಗ ಮಾತ್ರ ಬದುಕು ಸುಂದರವಾಗಲು ಸಾಧ್ಯ. ಇಲ್ಲದಿದ್ದರೆ ದಿನಾಲೂ ಆಕೆಯೊಂದಿಗೆ ಕಿತ್ತಾಡಿ ಸಾಯಬೇಕಾಗುತ್ತದೆ’ ಎಂದು ಕಾಮೆಂಟ್ ಮಾಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!