ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ ಯುವಕ, ಕುಣಿದು ಕುಪ್ಪಳಿಸಿದ ಯುವತಿ.

ಪ್ರೀತಿ ಯೇ ಹಾಗೆ, ಒಮ್ಮೆ ಪ್ರೀತಿಯಲ್ಲಿ ಬಿದ್ದರೆ ಈ ಜಗತ್ತೇ ಕಾಣುವುದಿಲ್ಲ. ಪ್ರೇಮಿಗಳು ತನ್ನನ್ನು ಪ್ರೀತಿಸುವ ಜೀವದ ಖುಷಿಗಾಗಿ ಏನು ಬೇಕಾದರೂ ಕೂಡ ಮಾಡಿಬಿಡುತ್ತಾರೆ. ಅದರಲ್ಲಿಯೂ ಈ ಹುಡುಗ ಪ್ರಾಮಾಣಿಕವಾಗಿ ಪ್ರೀತಿಸುತ್ತಿದ್ದರೆ ತನ್ನವಳಿಗಾಗಿ ಏನನ್ನು ಬೇಕಾದರೂ ಮಾಡಲು ಸಿದ್ಧವಿರುತ್ತಾನೆ. ಇದೀಗ ಪ್ರೇಮಿಯೊಬ್ಬನು ಮೆಟ್ರೋ ನಿಲ್ದಾಣದಲ್ಲಿ ತನ್ನ ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದು, ಈ ಬಗೆಗಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾ ದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.


Satendra prathap ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ‘ಅಖಿಲ ಭಾರತ ಖಾಂತಿ ಮರ್ದ್ ಅಸೋಸಿಯೇಶನ್ನ ರಾಷ್ಟ್ರೀಯ ಅಧ್ಯಕ್ಷನಾಗಿರುವ ನಾನುಈ ಯುವಕನ ಪುರುಷ ಪ್ರಮಾಣಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸುತ್ತೇನೆ. ಈ ಯುವಕನು ಗಂಡಸು ಜಾತಿಗೆ ಅವಮಾನ. ಈ ಪುರುಷರ ಸಂಘದಿಂದ ಈತನನ್ನು ಅಮಾನತ್ತುಗೊಳಿಸಬೇಕೆಂದು ಅಗ್ರಹಿಸುತ್ತೇನೆ. ಇಂತಹ ಯುವಕರು ನಮ್ಮ ಪುರುಷ ಸಮಾಜಕ್ಕೆ ಕಳಂಕ. ಇಂದು ಆಕೆಯ ಕಾಲಿಗೆ ನಮಸ್ಕರಿಸಿದ್ದಾನೆ. ನಾಳೆ ಆಕೆಯ ಕೈ-ಕಾಲುಗಳನ್ನು ಒತ್ತುತ್ತಾನೆ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ ಮೆಟ್ರೋ ನಿಲ್ದಾಣದ ಫ್ಲಾಟ್ ಫಾರ್ಮ್ ನಲ್ಲಿರುವ ಕಟ್ಟೆಯಲ್ಲಿ ಯುವಕನು ಕುಳಿತುಕೊಂಡಿರುವುದನ್ನು ಕಾಣಬಹುದು. ಎದುರಿಗೆ ಆತನ ಪ್ರೇಯಸಿಯೂ ನಿಂತುಕೊಂಡಿದ್ದು ಆತನು ಆಕೆಯ ಪಾದಗಳನ್ನು ಮೂರು ಸಲ ಮುಟ್ಟಿ ಕಣ್ಣಿಗೆ ಒತ್ತಿಕೊಳ್ಳುತ್ತಿರುವುದನ್ನು ಕಾಣಬಹುದು. ಆ ಬಳಿಕ ಕೆಲ ನಿಮಿಷಗಳ ಕಾಲ ಇಬ್ಬರೂ ಮಾತುಕತೆ ನಡೆಸಿದ್ದಾರೆ. ವಿಡಿಯೋದಲ್ಲಿ ಯುವತಿ ಕೈಯಲ್ಲಿ ಕ್ಯಾಂಡಿ ಹಿಡಿದುಕೊಂಡಿರುವ ಈ ಯುವತಿಯೂ ಕುಣಿಯುತ್ತಿರುವುದನ್ನು ಕಾಣಬಹುದು.

https://www.facebook.com/share/r/16QjyDmRij/

ಈ ವಿಡಿಯೋ ಈಗಾಗಲೇ 283.2 ಕೆ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ವಿಡಿಯೋ ನೋಡಿದ ಬಳಕೆದಾರrರು ಮಿಶ್ರ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಬಳಕೆದಾರರೊಬ್ಬರು, ‘ಈಗಲೇ ಈ ಯುವಕನ ಪರಿಸ್ಥಿತಿ ನೋಡಲಾಗುತ್ತಿಲ್ಲ, ಮದುವೆಯಾದ ಮೇಲೆ ಈ ಯುವಕನಿಗೆ ದೇವರೇ ಗತಿ’ ಎಂದಿದ್ದಾರೆ. ಇನ್ನೊಬ್ಬರು, ‘ಹೆಣ್ಣು ಗಂಡು ಸಮಾನರು ಎಂದ ಮೇಲೆ ಪಾದ ಮುಟ್ಟಿ ಸ್ಪರ್ಶಿಸುವುದರಲ್ಲಿ ಏನು ತಪ್ಪಿಲ್ಲ. ಪ್ರೀತಿಯಲ್ಲಿ ಇಬ್ಬರೂ ಸೋಲಬೇಕು. ಆಗ ಮಾತ್ರ ಈ ಪ್ರೀತಿಯೂ ಉಳಿಯಲು ಸಾಧ್ಯ’ ಎಂದಿದ್ದಾರೆ. ಮತ್ತೊರ್ವ ಬಳಕೆದಾರ, ‘ಅಣ್ಣ ಅವನು ಅವಳಿಗೆ ಸಂಪೂರ್ಣವಾಗಿ ಶರಣಾಗಿದ್ದಾನೆ. ಆಗಿದ್ದಾಗ ಮಾತ್ರ ಬದುಕು ಸುಂದರವಾಗಲು ಸಾಧ್ಯ. ಇಲ್ಲದಿದ್ದರೆ ದಿನಾಲೂ ಆಕೆಯೊಂದಿಗೆ ಕಿತ್ತಾಡಿ ಸಾಯಬೇಕಾಗುತ್ತದೆ’ ಎಂದು ಕಾಮೆಂಟ್ ಮಾಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!