MTS ಪರೀಕ್ಷೆಗೆ ಬೇರೊಬ್ಬನನ್ನು ಕಳಿಸಿದ ಯುವಕ, ಕರ್ತವ್ಯಕ್ಕೆ ಹಾಜರಾಗುವಾಗ ಸಿಕ್ಕಿಬಿದಿದ್ದಾನೆ.

ಬೆಂಗಳೂರು : ‘ಮುನ್ನಾ ಭಾಯಿ ಎಂಬಿಬಿಎಸ್’ ಚಿತ್ರದಲ್ಲಿ ನಡೆದಂತೆ ಬಿಹಾರದ 24 ವರ್ಷದ ಯುವಕನೊಬ್ಬ ಇಂಡಿಯನ್ ಕೌನ್ಸಿಲ್ ಆಫ್ ಫಾರೆಸ್ಟ್ರಿ ರಿಸರ್ಚ್ ಅಂಡ್ ಎಜುಕೇಶನ್ – ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿಯ ಮಲ್ಟಿ-ಟಾಸ್ಕಿಂಗ್ ಸ್ಟಾಫ್  ಹುದ್ದೆಗೆ ನಡೆದ ಪರೀಕ್ಷೆಯನ್ನು ತನ್ನ ಸ್ನೇಹಿತನಿಂದ ಬರೆಸಿ, ಕರ್ತವ್ಯಕ್ಕೆ ಹಾಜರಾಗುವಾಗ ಸಿಕ್ಕಿಬಿದ್ದಿದ್ದಾನೆ.

ಬಿಹಾರದ ನಳಂದ ಜಿಲ್ಲೆಯ ನಿವಾಸಿ ಅಂಜ್ ರಾಜ್ ಪಿಯು ಪರೀಕ್ಷೆ ಮುಗಿಸಿ ಎಂಟಿಎಸ್ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದನು. ಸಂಸ್ಥೆ ಆತನಿಗೆ ಪ್ರವೇಶ ಪತ್ರ ನೀಡಿತ್ತು. ಆದರೆ, ಆತ ಮಾರ್ಚ್ 16 ರಂದು ಎಂಎಸ್ ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪರೀಕ್ಷೆ ಬರೆಯಲು ತಮ್ಮ ಸ್ನೇಹಿತನನ್ನು ಕಳುಹಿಸಿದ್ದನು. ಬಳಿಕ ಎಂಟಿಎಸ್ ಹುದ್ದೆಗೆ ಆತ ಆಯ್ಕೆಯಾಗಿದ್ದನು.

ಅದರಂತೆ ಜುಲೈ 14 ರಂದು ರಾಜ್ ಕರ್ತವ್ಯಕ್ಕೆ ಬಂದಾಗ ವಂಚನೆ ಬೆಳಕಿಗೆ ಬಂದಿದೆ. ರಾಜ್ ಅವರ ಸಹಿ, ಬೆರಳಚ್ಚು ಮತ್ತು ಛಾಯಾಚಿತ್ರ ಪರೀಕ್ಷೆಗೆ ಹಾಜರಾದ ವ್ಯಕ್ತಿಗೆ ಹೊಂದಿಕೆಯಾಗುತ್ತಿಲ್ಲ ಎಂಬುದನ್ನು ಸಿಬ್ಬಂದಿ ಗಮನಿಸಿದ್ದಾರೆ. ನಂತರ, ಮುಖದ ಲಕ್ಷಣಗಳು ಮತ್ತು ಚರ್ಮದ ಗುರುತುಗಳು ಸಹ ಭಿನ್ನವಾಗಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಐಡಬ್ಲ್ಯುಎಸ್‌ಟಿ ನಿರ್ದೇಶಕರ ಉಸ್ತುವಾರಿ ವಹಿಸಿಕೊಂಡಿರುವ ಐಎಫ್‌ಎಸ್ ಅಧಿಕಾರಿ ರಾಜೇಶ್ ಎಸ್ ಅವರು ಸದಾಶಿವನಗರ ಪೊಲೀಸರಿಗೆ ದೂರು ನೀಡಿದ್ದಾರೆ ಮತ್ತು ಬಿಎನ್‌ಎಸ್‌ನ ವಿವಿಧ ವಿಭಾಗಗಳು ಮತ್ತು ಸಾರ್ವಜನಿಕ ಪರೀಕ್ಷೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಇತ್ತೀಚೆಗೆ ಬಂಧಿಸಲಾಗಿದ್ದು, ಪರೀಕ್ಷೆ ಬರೆದಿದ್ದ ಸ್ನೇಹಿತ ಸದ್ಯ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಬಿಹಾರಕ್ಕೆ ತಂಡವನ್ನು ಕಳುಹಿಸಲಾಗಿದೆ. ಆದರೆ, ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ರಾಜ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!