‘ಕೂಲಿ’ ಸಿನಿಮಾ ಬಗ್ಗೆ ವಿಷಾದ ವ್ಯಕ್ತಪಡಿಸಿದ ನಟ ಆಮಿರ್ ಖಾನ್

ನಟ ಆಮಿರ್ ಖಾನ್ ಅವರು ತಮಿಳಿನ ‘ಕೂಲಿ’ ಸಿನಿಮಾದಲ್ಲಿ ಒಂದು ಅತಿಥಿ ಪಾತ್ರ ಮಾಡಿದ್ದರು. ಆದರೆ ಆ ಸಿನಿಮಾ ಮಾಡಿದ್ದಕ್ಕೆ ಅವರು ಈಗ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಆ ಕುರಿತು ಪತ್ರಿಕೆಯೊಂದರಲ್ಲಿ ವರದಿ ಆದ ಬಳಿಕ ಆಮಿರ್ ಖಾನ್ ತಂಡದ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ.

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ ‘ಕೂಲಿ’ ಸಿನಿಮಾ ಆಗಸ್ಟ್ 14ರಂದು ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ಹಲವು ಕಲಾವಿದರು ನಟಿಸಿದರು. ಉಪೇಂದ್ರ, ರಚಿತಾ ರಾಮ್, ಸೌಬಿನ್ ಶಾಹಿರ್, ಆಮಿರ್ ಖಾನ್ (Aamir Khan), ನಾಗಾರ್ಜುನ, ಶ್ರುತಿ ಹಾಸನ್, ಪೂಜಾ ಹೆಗ್ಡೆ ಮುಂತಾದವರು ಅಭಿನಯಿಸಿದರು. ಬಾಕ್ಸ್ ಆಫೀಸ್​​ನಲ್ಲಿ ಈ ಚಿತ್ರಕ್ಕೆ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಇತ್ತೀಚೆಗೆ ಒಂದು ಸುದ್ದಿ ಪ್ರಕಟ ಆಯಿತು. ಆಮಿರ್ ಖಾನ್ ಅವರು ‘ಕೂಲಿ’ (Coolie) ಸಿನಿಮಾದಲ್ಲಿ ನಟಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಲಾಯಿತು. ಆ ಬಗ್ಗೆ ಅವರ ತಂಡದವರಿಂದ ಪ್ರತಿಕ್ರಿಯೆ ಬಂದಿದೆ.

ಅಂದಹಾಗೆ, ಆಮಿರ್ ಖಾನ್ ಅವರು ‘ಕೂಲಿ’ ಸಿನಿಮಾದಲ್ಲಿ ಮಾಡಿದ್ದು ಅತಿಥಿ ಪಾತ್ರ. ಅದನ್ನು ಆಮಿರ್ ಖಾನ್ ಅವರೇ ಮಾಡಬೇಕು ಎಂಬುದೇನೂ ಇರಲಿಲ್ಲ. ರಜನಿಕಾಂತ್ ಅವರ ಮೇಲಿನ ಪ್ರೀತಿ, ಗೌರವದ ಕಾರಣಕ್ಕೆ ಅವರು ಆ ಪಾತ್ರವನ್ನು ಮಾಡಲು ಒಪ್ಪಿಕೊಂಡರು. ಆದರೆ ಈಗ ‘ಯಾಕಾದ್ರೂ ರಜನಿ ಜೊತೆ ಕೂಲಿ ಸಿನಿಮಾ ಮಾಡಿದ್ನೋ’ ಎಂದು ಆಮಿರ್ ಖಾನ್ ಬೇಸರ ಮಾಡಿಕೊಂಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಟ್ವಿಸ್ಟ್ ಏನೆಂದರೆ ಆಮಿರ್ ಖಾನ್ ಅವರು ಯಾವ ಪತ್ರಿಕೆಗೂ ಆ ರೀತಿಯ ಹೇಳಿಕೆ ನೀಡಿಲ್ಲ! ಈ ಕುರಿತು ಅವರ ಟೀಮ್ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ. ‘ಆಮಿರ್ ಖಾನ್ ಅವರು ಇಂಥ ಯಾವುದೇ ಸಂದರ್ಶನ ನೀಡಿಲ್ಲ. ಕೂಲಿ ಸಿನಿಮಾ ಬಗ್ಗೆ ಅವರು ನೆಗೆಟಿವ್ ಆಗಿ ಮಾತನಾಡಿಲ್ಲ’ ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ.

ರಜನಿಕಾಂತ್ ಬಗ್ಗೆ ಆಮಿರ್ ಖಾನ್ ಅವರಿಗೆ ಬಹಳ ಗೌರವ ಇದೆ. ನಿರ್ದೇಶಕ ಲೋಕೇಶ್ ಕನಗರಾಜ್ ಮತ್ತು ಇಡೀ ಕೂಲಿ ಸಿನಿಮಾ ತಂಡದ ಬಗ್ಗೆ ಅವರಿಗೆ ಆ ಗೌರವ ಇದೆ. ಬಾಕ್ಸ್​ ಆಫೀಸ್​​ನಲ್ಲಿ ಈ ಸಿನಿಮಾ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಸಿನಿಮಾ ಬಗ್ಗೆ ಈ ಗಳಿಕೆಯೇ ಎಲ್ಲವನ್ನೂ ಹೇಳುತ್ತಿದೆ’ ಎಂದು ಆಮಿರ್ ಖಾನ್ ತಂಡದವರು ಪ್ರತಿಕ್ರಿಯಿಸಿದ್ದಾರೆ.

‘ಕೂಲಿ’ ಸಿನಿಮಾಗೆ ಅಂದಾಜು 400 ಕೋಟಿ ರೂಪಾಯಿ ಬಂಡವಾಳ ಸುರಿಯಲಾಗಿತ್ತು. ಅದಕ್ಕೆ ಹೋಲಿಸಿದರೆ 500 ಕೋಟಿ ರೂಪಾಯಿ ಕಲೆಕ್ಷನ್ ಏನೇನೂ ಅಲ್ಲ. ಅಲ್ಲದೇ ವಿಮರ್ಶೆ ದೃಷ್ಟಿಯಿಂದಲೂ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ಒಟಿಟಿಯಲ್ಲೂ ವೀಕ್ಷಣೆಗೆ ಲಭ್ಯವಿದೆ. ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ಆಮಿರ್ ಖಾನ್ ಇನ್ನೊಂದು ಸಿನಿಮಾ ಮಾಡಬೇಕಿತ್ತು. ಆದರೆ ಈ ಚಿತ್ರ ಸೆಟ್ಟೇರುವುದು ಅನುಮಾನ ಎನ್ನಲಾಗುತ್ತಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!