‘ಕೂಲಿ’ ಸಿನಿಮಾ ಬಗ್ಗೆ ವಿಷಾದ ವ್ಯಕ್ತಪಡಿಸಿದ ನಟ ಆಮಿರ್ ಖಾನ್

ನಟ ಆಮಿರ್ ಖಾನ್ ಅವರು ತಮಿಳಿನ ‘ಕೂಲಿ’ ಸಿನಿಮಾದಲ್ಲಿ ಒಂದು ಅತಿಥಿ ಪಾತ್ರ ಮಾಡಿದ್ದರು. ಆದರೆ ಆ ಸಿನಿಮಾ ಮಾಡಿದ್ದಕ್ಕೆ ಅವರು ಈಗ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಆ ಕುರಿತು ಪತ್ರಿಕೆಯೊಂದರಲ್ಲಿ ವರದಿ ಆದ ಬಳಿಕ ಆಮಿರ್ ಖಾನ್ ತಂಡದ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ.

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ ‘ಕೂಲಿ’ ಸಿನಿಮಾ ಆಗಸ್ಟ್ 14ರಂದು ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ಹಲವು ಕಲಾವಿದರು ನಟಿಸಿದರು. ಉಪೇಂದ್ರ, ರಚಿತಾ ರಾಮ್, ಸೌಬಿನ್ ಶಾಹಿರ್, ಆಮಿರ್ ಖಾನ್ (Aamir Khan), ನಾಗಾರ್ಜುನ, ಶ್ರುತಿ ಹಾಸನ್, ಪೂಜಾ ಹೆಗ್ಡೆ ಮುಂತಾದವರು ಅಭಿನಯಿಸಿದರು. ಬಾಕ್ಸ್ ಆಫೀಸ್​​ನಲ್ಲಿ ಈ ಚಿತ್ರಕ್ಕೆ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಇತ್ತೀಚೆಗೆ ಒಂದು ಸುದ್ದಿ ಪ್ರಕಟ ಆಯಿತು. ಆಮಿರ್ ಖಾನ್ ಅವರು ‘ಕೂಲಿ’ (Coolie) ಸಿನಿಮಾದಲ್ಲಿ ನಟಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಲಾಯಿತು. ಆ ಬಗ್ಗೆ ಅವರ ತಂಡದವರಿಂದ ಪ್ರತಿಕ್ರಿಯೆ ಬಂದಿದೆ.

ಅಂದಹಾಗೆ, ಆಮಿರ್ ಖಾನ್ ಅವರು ‘ಕೂಲಿ’ ಸಿನಿಮಾದಲ್ಲಿ ಮಾಡಿದ್ದು ಅತಿಥಿ ಪಾತ್ರ. ಅದನ್ನು ಆಮಿರ್ ಖಾನ್ ಅವರೇ ಮಾಡಬೇಕು ಎಂಬುದೇನೂ ಇರಲಿಲ್ಲ. ರಜನಿಕಾಂತ್ ಅವರ ಮೇಲಿನ ಪ್ರೀತಿ, ಗೌರವದ ಕಾರಣಕ್ಕೆ ಅವರು ಆ ಪಾತ್ರವನ್ನು ಮಾಡಲು ಒಪ್ಪಿಕೊಂಡರು. ಆದರೆ ಈಗ ‘ಯಾಕಾದ್ರೂ ರಜನಿ ಜೊತೆ ಕೂಲಿ ಸಿನಿಮಾ ಮಾಡಿದ್ನೋ’ ಎಂದು ಆಮಿರ್ ಖಾನ್ ಬೇಸರ ಮಾಡಿಕೊಂಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಟ್ವಿಸ್ಟ್ ಏನೆಂದರೆ ಆಮಿರ್ ಖಾನ್ ಅವರು ಯಾವ ಪತ್ರಿಕೆಗೂ ಆ ರೀತಿಯ ಹೇಳಿಕೆ ನೀಡಿಲ್ಲ! ಈ ಕುರಿತು ಅವರ ಟೀಮ್ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ. ‘ಆಮಿರ್ ಖಾನ್ ಅವರು ಇಂಥ ಯಾವುದೇ ಸಂದರ್ಶನ ನೀಡಿಲ್ಲ. ಕೂಲಿ ಸಿನಿಮಾ ಬಗ್ಗೆ ಅವರು ನೆಗೆಟಿವ್ ಆಗಿ ಮಾತನಾಡಿಲ್ಲ’ ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ.

ರಜನಿಕಾಂತ್ ಬಗ್ಗೆ ಆಮಿರ್ ಖಾನ್ ಅವರಿಗೆ ಬಹಳ ಗೌರವ ಇದೆ. ನಿರ್ದೇಶಕ ಲೋಕೇಶ್ ಕನಗರಾಜ್ ಮತ್ತು ಇಡೀ ಕೂಲಿ ಸಿನಿಮಾ ತಂಡದ ಬಗ್ಗೆ ಅವರಿಗೆ ಆ ಗೌರವ ಇದೆ. ಬಾಕ್ಸ್​ ಆಫೀಸ್​​ನಲ್ಲಿ ಈ ಸಿನಿಮಾ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಸಿನಿಮಾ ಬಗ್ಗೆ ಈ ಗಳಿಕೆಯೇ ಎಲ್ಲವನ್ನೂ ಹೇಳುತ್ತಿದೆ’ ಎಂದು ಆಮಿರ್ ಖಾನ್ ತಂಡದವರು ಪ್ರತಿಕ್ರಿಯಿಸಿದ್ದಾರೆ.

‘ಕೂಲಿ’ ಸಿನಿಮಾಗೆ ಅಂದಾಜು 400 ಕೋಟಿ ರೂಪಾಯಿ ಬಂಡವಾಳ ಸುರಿಯಲಾಗಿತ್ತು. ಅದಕ್ಕೆ ಹೋಲಿಸಿದರೆ 500 ಕೋಟಿ ರೂಪಾಯಿ ಕಲೆಕ್ಷನ್ ಏನೇನೂ ಅಲ್ಲ. ಅಲ್ಲದೇ ವಿಮರ್ಶೆ ದೃಷ್ಟಿಯಿಂದಲೂ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ಒಟಿಟಿಯಲ್ಲೂ ವೀಕ್ಷಣೆಗೆ ಲಭ್ಯವಿದೆ. ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ಆಮಿರ್ ಖಾನ್ ಇನ್ನೊಂದು ಸಿನಿಮಾ ಮಾಡಬೇಕಿತ್ತು. ಆದರೆ ಈ ಚಿತ್ರ ಸೆಟ್ಟೇರುವುದು ಅನುಮಾನ ಎನ್ನಲಾಗುತ್ತಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!