‘ಕೂಲಿ’ ಸಿನಿಮಾ ಬಗ್ಗೆ ವಿಷಾದ ವ್ಯಕ್ತಪಡಿಸಿದ ನಟ ಆಮಿರ್ ಖಾನ್

ನಟ ಆಮಿರ್ ಖಾನ್ ಅವರು ತಮಿಳಿನ ‘ಕೂಲಿ’ ಸಿನಿಮಾದಲ್ಲಿ ಒಂದು ಅತಿಥಿ ಪಾತ್ರ ಮಾಡಿದ್ದರು. ಆದರೆ ಆ ಸಿನಿಮಾ ಮಾಡಿದ್ದಕ್ಕೆ ಅವರು ಈಗ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಆ ಕುರಿತು ಪತ್ರಿಕೆಯೊಂದರಲ್ಲಿ ವರದಿ ಆದ ಬಳಿಕ ಆಮಿರ್ ಖಾನ್ ತಂಡದ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ.

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ ‘ಕೂಲಿ’ ಸಿನಿಮಾ ಆಗಸ್ಟ್ 14ರಂದು ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ಹಲವು ಕಲಾವಿದರು ನಟಿಸಿದರು. ಉಪೇಂದ್ರ, ರಚಿತಾ ರಾಮ್, ಸೌಬಿನ್ ಶಾಹಿರ್, ಆಮಿರ್ ಖಾನ್ (Aamir Khan), ನಾಗಾರ್ಜುನ, ಶ್ರುತಿ ಹಾಸನ್, ಪೂಜಾ ಹೆಗ್ಡೆ ಮುಂತಾದವರು ಅಭಿನಯಿಸಿದರು. ಬಾಕ್ಸ್ ಆಫೀಸ್​​ನಲ್ಲಿ ಈ ಚಿತ್ರಕ್ಕೆ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಇತ್ತೀಚೆಗೆ ಒಂದು ಸುದ್ದಿ ಪ್ರಕಟ ಆಯಿತು. ಆಮಿರ್ ಖಾನ್ ಅವರು ‘ಕೂಲಿ’ (Coolie) ಸಿನಿಮಾದಲ್ಲಿ ನಟಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಲಾಯಿತು. ಆ ಬಗ್ಗೆ ಅವರ ತಂಡದವರಿಂದ ಪ್ರತಿಕ್ರಿಯೆ ಬಂದಿದೆ.

ಅಂದಹಾಗೆ, ಆಮಿರ್ ಖಾನ್ ಅವರು ‘ಕೂಲಿ’ ಸಿನಿಮಾದಲ್ಲಿ ಮಾಡಿದ್ದು ಅತಿಥಿ ಪಾತ್ರ. ಅದನ್ನು ಆಮಿರ್ ಖಾನ್ ಅವರೇ ಮಾಡಬೇಕು ಎಂಬುದೇನೂ ಇರಲಿಲ್ಲ. ರಜನಿಕಾಂತ್ ಅವರ ಮೇಲಿನ ಪ್ರೀತಿ, ಗೌರವದ ಕಾರಣಕ್ಕೆ ಅವರು ಆ ಪಾತ್ರವನ್ನು ಮಾಡಲು ಒಪ್ಪಿಕೊಂಡರು. ಆದರೆ ಈಗ ‘ಯಾಕಾದ್ರೂ ರಜನಿ ಜೊತೆ ಕೂಲಿ ಸಿನಿಮಾ ಮಾಡಿದ್ನೋ’ ಎಂದು ಆಮಿರ್ ಖಾನ್ ಬೇಸರ ಮಾಡಿಕೊಂಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಟ್ವಿಸ್ಟ್ ಏನೆಂದರೆ ಆಮಿರ್ ಖಾನ್ ಅವರು ಯಾವ ಪತ್ರಿಕೆಗೂ ಆ ರೀತಿಯ ಹೇಳಿಕೆ ನೀಡಿಲ್ಲ! ಈ ಕುರಿತು ಅವರ ಟೀಮ್ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ. ‘ಆಮಿರ್ ಖಾನ್ ಅವರು ಇಂಥ ಯಾವುದೇ ಸಂದರ್ಶನ ನೀಡಿಲ್ಲ. ಕೂಲಿ ಸಿನಿಮಾ ಬಗ್ಗೆ ಅವರು ನೆಗೆಟಿವ್ ಆಗಿ ಮಾತನಾಡಿಲ್ಲ’ ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ.

ರಜನಿಕಾಂತ್ ಬಗ್ಗೆ ಆಮಿರ್ ಖಾನ್ ಅವರಿಗೆ ಬಹಳ ಗೌರವ ಇದೆ. ನಿರ್ದೇಶಕ ಲೋಕೇಶ್ ಕನಗರಾಜ್ ಮತ್ತು ಇಡೀ ಕೂಲಿ ಸಿನಿಮಾ ತಂಡದ ಬಗ್ಗೆ ಅವರಿಗೆ ಆ ಗೌರವ ಇದೆ. ಬಾಕ್ಸ್​ ಆಫೀಸ್​​ನಲ್ಲಿ ಈ ಸಿನಿಮಾ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಸಿನಿಮಾ ಬಗ್ಗೆ ಈ ಗಳಿಕೆಯೇ ಎಲ್ಲವನ್ನೂ ಹೇಳುತ್ತಿದೆ’ ಎಂದು ಆಮಿರ್ ಖಾನ್ ತಂಡದವರು ಪ್ರತಿಕ್ರಿಯಿಸಿದ್ದಾರೆ.

‘ಕೂಲಿ’ ಸಿನಿಮಾಗೆ ಅಂದಾಜು 400 ಕೋಟಿ ರೂಪಾಯಿ ಬಂಡವಾಳ ಸುರಿಯಲಾಗಿತ್ತು. ಅದಕ್ಕೆ ಹೋಲಿಸಿದರೆ 500 ಕೋಟಿ ರೂಪಾಯಿ ಕಲೆಕ್ಷನ್ ಏನೇನೂ ಅಲ್ಲ. ಅಲ್ಲದೇ ವಿಮರ್ಶೆ ದೃಷ್ಟಿಯಿಂದಲೂ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ಒಟಿಟಿಯಲ್ಲೂ ವೀಕ್ಷಣೆಗೆ ಲಭ್ಯವಿದೆ. ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ಆಮಿರ್ ಖಾನ್ ಇನ್ನೊಂದು ಸಿನಿಮಾ ಮಾಡಬೇಕಿತ್ತು. ಆದರೆ ಈ ಚಿತ್ರ ಸೆಟ್ಟೇರುವುದು ಅನುಮಾನ ಎನ್ನಲಾಗುತ್ತಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!