ನಟ ದರ್ಶನ್ ಕೇಸ್ ತನಿಖಾಧಿಕಾರಿಗಳಿಗೆ ಸಂಕಷ್ಟ – ACP ಚಂದನ್, PSI ವಿನಯ್ ವಿರುದ್ಧವೇ ಸ್ನೇಹಮಯಿ ಕೃಷ್ಣ ದೂರು

ನಟ ದರ್ಶನ್ ಕೇಸ್ ತನಿಖಾಧಿಕಾರಿಗಳಿಗೆ ಸಂಕಷ್ಟ – ACP ಚಂದನ್, PSI ವಿನಯ್ ವಿರುದ್ಧವೇ ಸ್ನೇಹಮಯಿ ಕೃಷ್ಣ ದೂರು

ರೇಣುಕಾಸ್ವಾಮಿ ಕೊ* ಪ್ರಕರಣದ ತನಿಖಾಧಿಕಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಕೇಸ್​ನ ತನಿಖಾಧಿಕಾರಿಗಳಾದ PSI ವಿನಯ್ ಹಾಗೂ ACP ಚಂದನ್ ಇಬ್ಬರನ್ನೂ ಆರೋಪಿಗಳಾಗಿ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಹಿ ಕೃಷ್ಣ, ADGP ಹಿತೇಂದ್ರ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ರೇಣುಕಾಸ್ವಾಮಿ ಕೊ* ಪ್ರಕರಣದಲ್ಲಿ ಸರ್ವಾಧಿಕಾರಿಗಳಂತೆ PSI ವಿನಯ್ ಹಾಗೂ ACP ಚಂದನ್ ನಡೆದುಕೊಂಡಿದ್ದಾರೆ. ಅಲ್ಲದೇ ಹಲವಾರು ಅಫರಾಧ ಕೃತ್ಯಗಳಲ್ಲಿ ಭಾಗಿಯಾಗಿ, ಸುಳ್ಳು ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಇಬ್ಬರನ್ನೂ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಬೇಕು, ಅಲ್ಲದೇ CIDಗೆ ಈ ಕೇಸ್​ನ್ನು ವರ್ಗಾಯಿಸುವಂತೆ ಸ್ನೇಹಮಹಿ ಕೃಷ್ಣ, ADGP ಹಿತೇಂದ್ರ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಕೆಲವು ಪೊಲೀಸ್ ಅಧಿಕಾರಿಗಳು ಕಾನೂನು ಮತ್ತು ತಮ್ಮ ಅಧಿಕಾರವನ್ನು ತಮ್ಮ ಆಟಿಕೆಯ ವಸ್ತುಗಳು ಎಂಬಂತೆ ಸರ್ವಾಧಿಕಾರಿಗಳ ರೀತಿಯಲ್ಲಿ ನಡೆದುಕೊಂಡು, ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಕೊ* ಕೇಸ್​ನ ತನಿಖೆ ನಡೆಸಿ, ವಿನಯ್‌ರವರನ್ನು ರಕ್ಷಣೆ ಮಾಡುವ ಸಲುವಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ನೈಜ ಸಾಕ್ಷಾಧಾರಗಳನ್ನು ಮುಚ್ಚಿಟ್ಟು ತನಿಖಾಧಿಕಾರಿಗಳಾದ ಗಿರಿಶ್ ನಾಯಕ್ ಹಾಗೂ ಚಂದನ್‌ಕುಮಾರ್ ಸುಳ್ಳು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಅವರ ವಿರುದ್ಧ ಪ್ರತ್ಯೇಕ ಮೊಕದ್ದಮೆ ದಾಖಲಿಸಿ, ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸ್ನೇಹಮಹಿ ಕೃಷ್ಣ ಪತ್ರ ಬರೆದಿದ್ದಾರೆ.

  • Related Posts

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

    You Missed

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

    ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

    ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

    ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್