ನಟ ದರ್ಶನ್ ಕೇಸ್ ತನಿಖಾಧಿಕಾರಿಗಳಿಗೆ ಸಂಕಷ್ಟ – ACP ಚಂದನ್, PSI ವಿನಯ್ ವಿರುದ್ಧವೇ ಸ್ನೇಹಮಯಿ ಕೃಷ್ಣ ದೂರು

ನಟ ದರ್ಶನ್ ಕೇಸ್ ತನಿಖಾಧಿಕಾರಿಗಳಿಗೆ ಸಂಕಷ್ಟ – ACP ಚಂದನ್, PSI ವಿನಯ್ ವಿರುದ್ಧವೇ ಸ್ನೇಹಮಯಿ ಕೃಷ್ಣ ದೂರು

ರೇಣುಕಾಸ್ವಾಮಿ ಕೊ* ಪ್ರಕರಣದ ತನಿಖಾಧಿಕಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಕೇಸ್​ನ ತನಿಖಾಧಿಕಾರಿಗಳಾದ PSI ವಿನಯ್ ಹಾಗೂ ACP ಚಂದನ್ ಇಬ್ಬರನ್ನೂ ಆರೋಪಿಗಳಾಗಿ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಹಿ ಕೃಷ್ಣ, ADGP ಹಿತೇಂದ್ರ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ರೇಣುಕಾಸ್ವಾಮಿ ಕೊ* ಪ್ರಕರಣದಲ್ಲಿ ಸರ್ವಾಧಿಕಾರಿಗಳಂತೆ PSI ವಿನಯ್ ಹಾಗೂ ACP ಚಂದನ್ ನಡೆದುಕೊಂಡಿದ್ದಾರೆ. ಅಲ್ಲದೇ ಹಲವಾರು ಅಫರಾಧ ಕೃತ್ಯಗಳಲ್ಲಿ ಭಾಗಿಯಾಗಿ, ಸುಳ್ಳು ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಇಬ್ಬರನ್ನೂ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಬೇಕು, ಅಲ್ಲದೇ CIDಗೆ ಈ ಕೇಸ್​ನ್ನು ವರ್ಗಾಯಿಸುವಂತೆ ಸ್ನೇಹಮಹಿ ಕೃಷ್ಣ, ADGP ಹಿತೇಂದ್ರ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಕೆಲವು ಪೊಲೀಸ್ ಅಧಿಕಾರಿಗಳು ಕಾನೂನು ಮತ್ತು ತಮ್ಮ ಅಧಿಕಾರವನ್ನು ತಮ್ಮ ಆಟಿಕೆಯ ವಸ್ತುಗಳು ಎಂಬಂತೆ ಸರ್ವಾಧಿಕಾರಿಗಳ ರೀತಿಯಲ್ಲಿ ನಡೆದುಕೊಂಡು, ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಕೊ* ಕೇಸ್​ನ ತನಿಖೆ ನಡೆಸಿ, ವಿನಯ್‌ರವರನ್ನು ರಕ್ಷಣೆ ಮಾಡುವ ಸಲುವಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ನೈಜ ಸಾಕ್ಷಾಧಾರಗಳನ್ನು ಮುಚ್ಚಿಟ್ಟು ತನಿಖಾಧಿಕಾರಿಗಳಾದ ಗಿರಿಶ್ ನಾಯಕ್ ಹಾಗೂ ಚಂದನ್‌ಕುಮಾರ್ ಸುಳ್ಳು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಅವರ ವಿರುದ್ಧ ಪ್ರತ್ಯೇಕ ಮೊಕದ್ದಮೆ ದಾಖಲಿಸಿ, ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸ್ನೇಹಮಹಿ ಕೃಷ್ಣ ಪತ್ರ ಬರೆದಿದ್ದಾರೆ.

  • Related Posts

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

      ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

      ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!