ನಟ ಧ್ರುವ ಸರ್ಜಾ ವಿರುದ್ಧ ವಂಚನೆ ಆರೋಪ ಪ್ರಕರಣ ದಾಖಲು

ನಟ ಧ್ರುವ ಸರ್ಜಾ ಅವರು ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಡೈರೆಕ್ಟರ್ ರಾಘವೇಂದ್ರ ಹೆಗಡೆಯಿಂದ ಕೋಟಿ ಕೋಟಿ ಹಣ ಪಡೆದಿರುವ ಆರೋಪ ಮಾಡಲಾಗಿದೆ.

ಧ್ರುವಾ ಸರ್ಜಾ ವಿರುದ್ಧ ನಿರ್ದೇಶಕ ರಾಘವೇಂದ್ರ ಹೆಗಡೆ ಅವರು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದಾಖಲೆ ಸಮೇತ ಪ್ರಕರಣ ದಾಖಲು ಮಾಡಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್​ಎಸ್​) ಸೆಕ್ಷನ್​ 316 (2) (ಕ್ರಿಮಿನಲ್ ನಂಬಿಕೆ ಉಲ್ಲಂಘನೆ), 318 (4) (ವಂಚನೆ) ಅಡಿ ಎಫ್​ಐಆರ್ ದಾಖಲಾಗಿದೆ.

3.5 ಕೋಟಿ ರೂಪಾಯಿಗಳನ್ನು 2018ರಲ್ಲೇ ಧ್ರುವ ಸರ್ಜಾಗೆ ನೀಡಲಾಗಿದ್ದು ಇದಕ್ಕೆ ಈವರೆಗೆ ಬಡ್ಡಿಯೊಂದಿಗೆ ನಷ್ಟವನ್ನು ಲೆಕ್ಕ ಹಾಕಿದ್ರೆ 9.58 ಕೋಟಿ ರೂಪಾಯಿಗೂ ಅಧಿಕವಾಗುತ್ತದೆ. ಇನ್ನು ನಟ ಧ್ರುವ ಸರ್ಜಾ ಅವರಿಗೆ ಹಣ ನೀಡಿರುವ ಕುರಿತು ಒಪ್ಪಂದ, ಹಣಕಾಸಿನ ದಾಖಲೆಗಳು, ಅಗ್ರಿಮೆಂಟ್ ಹಾಗೂ ಬ್ಯಾಂಕ್​ನಲ್ಲಿ ಹಣದ ವ್ಯವಹಾರ ಮಾಡಿರುವ ದಾಖಲೆಗಳನ್ನು ಹೆಗಡೆ, ಪೊಲೀಸರಿಗೆ ಸಾಕ್ಷಿಯಾಗಿ ನೀಡಿದ್ದಾರೆ. ಸದ್ಯ ತನಿಖಾಧಿಕಾರಿಗಳು ಇವುಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

V Care ಕ್ಲಿನಿಕ್‌ ನಲ್ಲಿ ನಡೀತಿದೆ ಮಹಾಮೋಸ! V Care ನಲ್ಲಿ ಇದ್ದಾರಾ ನಕಲಿ ವೈದ್ಯರು?

ಧ್ರುವ ಸರ್ಜಾ ವಿರುದ್ಧ ಕೋಟಿ ಕೋಟಿ ಹಣ ವಂಚನೆ ಆರೋಪ.. FIR ದಾಖಲು. ಮುಂಬೈನ ಅಂಬೋಲಿ ಪೊಲೀಸರಿಂದ ಎಫ್​ಐಆರ್ ದಾಖಲು.ನಿರ್ದೇಶಕನೊಂದಿಗೆ ವಂಚನೆ ಮಾಡಿದ ಆರೋಪದಲ್ಲಿ ದೂರು ದಾಖಲು. ರಾಘವೇಂದ್ರ ಹೆಗಡೆಯಿಂದ 3.15 ಕೋಟಿ ರೂಪಾಯಿ ಪಡೆದ ಆರೋಪ. ಹೆಗಡೆಯವರು 2018 ಮತ್ತು 2021ರ ನಡುವೆ ನಟನಿಗೆ ಹಣ ನೀಡಿದ್ದರು. ಹಣ ಪಡೆದ ನಂತರ ತನ್ನ ನಟನೆಯ ಬದ್ಧತೆ ಪೂರೈಸುವಲ್ಲಿ ವಿಳಂಬ. Bಯಾವುದೇ ಶೂಟಿಂಗ್​​ಗೆ ಹಾಜರಾಗಲಿಲ್ಲ ಈ ಹಿನ್ನೆಲೆ ಕೇಸ್ ಹಾಕಲಾಗಿದೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು