ನಟ ಧ್ರುವ ಸರ್ಜಾ ವಿರುದ್ಧ ವಂಚನೆ ಆರೋಪ ಪ್ರಕರಣ ದಾಖಲು

ನಟ ಧ್ರುವ ಸರ್ಜಾ ಅವರು ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಡೈರೆಕ್ಟರ್ ರಾಘವೇಂದ್ರ ಹೆಗಡೆಯಿಂದ ಕೋಟಿ ಕೋಟಿ ಹಣ ಪಡೆದಿರುವ ಆರೋಪ ಮಾಡಲಾಗಿದೆ.

ಧ್ರುವಾ ಸರ್ಜಾ ವಿರುದ್ಧ ನಿರ್ದೇಶಕ ರಾಘವೇಂದ್ರ ಹೆಗಡೆ ಅವರು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದಾಖಲೆ ಸಮೇತ ಪ್ರಕರಣ ದಾಖಲು ಮಾಡಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್​ಎಸ್​) ಸೆಕ್ಷನ್​ 316 (2) (ಕ್ರಿಮಿನಲ್ ನಂಬಿಕೆ ಉಲ್ಲಂಘನೆ), 318 (4) (ವಂಚನೆ) ಅಡಿ ಎಫ್​ಐಆರ್ ದಾಖಲಾಗಿದೆ.

3.5 ಕೋಟಿ ರೂಪಾಯಿಗಳನ್ನು 2018ರಲ್ಲೇ ಧ್ರುವ ಸರ್ಜಾಗೆ ನೀಡಲಾಗಿದ್ದು ಇದಕ್ಕೆ ಈವರೆಗೆ ಬಡ್ಡಿಯೊಂದಿಗೆ ನಷ್ಟವನ್ನು ಲೆಕ್ಕ ಹಾಕಿದ್ರೆ 9.58 ಕೋಟಿ ರೂಪಾಯಿಗೂ ಅಧಿಕವಾಗುತ್ತದೆ. ಇನ್ನು ನಟ ಧ್ರುವ ಸರ್ಜಾ ಅವರಿಗೆ ಹಣ ನೀಡಿರುವ ಕುರಿತು ಒಪ್ಪಂದ, ಹಣಕಾಸಿನ ದಾಖಲೆಗಳು, ಅಗ್ರಿಮೆಂಟ್ ಹಾಗೂ ಬ್ಯಾಂಕ್​ನಲ್ಲಿ ಹಣದ ವ್ಯವಹಾರ ಮಾಡಿರುವ ದಾಖಲೆಗಳನ್ನು ಹೆಗಡೆ, ಪೊಲೀಸರಿಗೆ ಸಾಕ್ಷಿಯಾಗಿ ನೀಡಿದ್ದಾರೆ. ಸದ್ಯ ತನಿಖಾಧಿಕಾರಿಗಳು ಇವುಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

V Care ಕ್ಲಿನಿಕ್‌ ನಲ್ಲಿ ನಡೀತಿದೆ ಮಹಾಮೋಸ! V Care ನಲ್ಲಿ ಇದ್ದಾರಾ ನಕಲಿ ವೈದ್ಯರು?

ಧ್ರುವ ಸರ್ಜಾ ವಿರುದ್ಧ ಕೋಟಿ ಕೋಟಿ ಹಣ ವಂಚನೆ ಆರೋಪ.. FIR ದಾಖಲು. ಮುಂಬೈನ ಅಂಬೋಲಿ ಪೊಲೀಸರಿಂದ ಎಫ್​ಐಆರ್ ದಾಖಲು.ನಿರ್ದೇಶಕನೊಂದಿಗೆ ವಂಚನೆ ಮಾಡಿದ ಆರೋಪದಲ್ಲಿ ದೂರು ದಾಖಲು. ರಾಘವೇಂದ್ರ ಹೆಗಡೆಯಿಂದ 3.15 ಕೋಟಿ ರೂಪಾಯಿ ಪಡೆದ ಆರೋಪ. ಹೆಗಡೆಯವರು 2018 ಮತ್ತು 2021ರ ನಡುವೆ ನಟನಿಗೆ ಹಣ ನೀಡಿದ್ದರು. ಹಣ ಪಡೆದ ನಂತರ ತನ್ನ ನಟನೆಯ ಬದ್ಧತೆ ಪೂರೈಸುವಲ್ಲಿ ವಿಳಂಬ. Bಯಾವುದೇ ಶೂಟಿಂಗ್​​ಗೆ ಹಾಜರಾಗಲಿಲ್ಲ ಈ ಹಿನ್ನೆಲೆ ಕೇಸ್ ಹಾಕಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!