ಅಭಿಮಾನಿಗಳಿಗೆ ಉತ್ತರ ಕೊಟ್ಟ ನಟ ವಿಜಯ್ – ಡಿವೋರ್ಸ್ ವಿವಾದದ ಬಗ್ಗೆ ಮೊದಲು ಮಾತು.

ಕಾಲಿವುಡ್ ಸ್ಟಾರ್ ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ವಿಜಯ್ ಅವರು, ಪತ್ನಿ ಸಂಗೀತಾ ಸೋರ್ನಲಿಂಗಂ ಜೊತೆಗಿನ ವಿಚ್ಛೇದನ ಪ್ರಕರಣದ ಸುದ್ದಿಗಳು ಬಹಿರಂಗವಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ವೈಯಕ್ತಿಕ ಜೀವನದ ವಿವಾದದ ಬಗ್ಗೆ ಮೌನ ಮುರಿದಿದ್ದಾರೆ.

ತಮ್ಮ ಪಕ್ಷದ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯ್, ತಮ್ಮ ಬೆಂಬಲಿಗರಿಗೆ ಇಂತಹ ಆರೋಪಗಳಿಂದ ವಿಚಲಿತರಾಗಬೇಡಿ, ಬದಲಾಗಿ ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಿ ಎಂದು ಕಿವಿಮಾತು ಹೇಳಿದ್ದಾರೆ.

ವಿಜಯ್ ಹೇಳಿದ್ದೇನು?
ಶನಿವಾರ ಮಹಿಳಾ ಕಾರ್ಯಕರ್ತರಿಂದ ತುಂಬಿದ್ದ ಸಭಾಂಗಣವನ್ನು ಉದ್ದೇಶಿಸಿ ಮಾತನಾಡಿದ ವಿಜಯ್, ‘ಇತ್ತೀಚೆಗೆ ಕೆಲವು ವಿಚಾರಗಳು ಓಡಾಡುತ್ತಿವೆ, ಅಲ್ಲವೇ?’ ಎಂದು ಪರೋಕ್ಷವಾಗಿ ತಮ್ಮ ಡಿವೋರ್ಸ್ ಬಗ್ಗೆ ಪ್ರಸ್ತಾಪಿಸಿದರು.

‘ನೀವೆಲ್ಲರೂ ಆ ಆರೋಪಗಳ ವಿರುದ್ಧ ಹೋರಾಡುತ್ತಾ, ನೋವು ಅನುಭವಿಸುತ್ತಿರುವುದನ್ನು ನಾನು ನೋಡುತ್ತಿದ್ದೇನೆ. ನಿಮಗೆ ನೋವಾಗುವುದನ್ನು ಕಂಡು ನನಗೂ ಬೇಸರವಾಗುತ್ತಿದೆ. ಅದನ್ನೆಲ್ಲಾ ನಾನು ನೋಡಿಕೊಳ್ಳುತ್ತೇನೆ. ನಾವು ಜನರ ಸಮಸ್ಯೆಗಳತ್ತ ಗಮನ ಹರಿಸೋಣ. ಆ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಅದು ತಲೆಕೆಡಿಸಿಕೊಳ್ಳುವಂತಹ ವಿಷಯವಲ್ಲ. ಧೈರ್ಯವಾಗಿರಿ, ಎಲ್ಲವೂ ಒಳ್ಳೆಯದೇ ಆಗುತ್ತದೆ ಎಂದು ವಿಜಯ್ ಹೇಳಿದ್ದಾರೆ. ಇದು ತಮ್ಮ ವೈಯಕ್ತಿಕ ಜೀವನದ ವದಂತಿಗಳಿಗೆ ನೀಡಿದ ಸ್ಪಷ್ಟನೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ವಿಜಯ್ ಮನೆಯಲ್ಲೇ ಉಳಿಯಲು ಪತ್ನಿ ಸಂಗೀತಾ ಪಟ್ಟು!
ವಿಜಯ್ ಈ ಹೇಳಿಕೆ ನೀಡಿದ ದಿನವೇ, ಅವರ ಪತ್ನಿ ಸಂಗೀತಾ ಚೆಂಗಲ್ಪಟ್ಟು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯ ವಿವರಗಳು ಹೊರಬಿದ್ದಿವೆ. ವಿಚ್ಛೇದನ ಪ್ರಕ್ರಿಯೆ ಮುಗಿಯುವವರೆಗೆ ಚೆನ್ನೈನ ಈಸ್ಟ್ ಕೋಸ್ಟ್ ರೋಡ್‌ನಲ್ಲಿರುವ (ECR) ವಿಜಯ್ ಅವರ ಮನೆಯಲ್ಲೇ (Matrimonial home) ತಮಗೆ ವಾಸಿಸಲು ಅನುಮತಿ ನೀಡಬೇಕು ಎಂದು ಕೋರಿ ಸಂಗೀತಾ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ತಾವು ಬ್ರಿಟಿಷ್ ಪ್ರಜೆಯಾಗಿದ್ದು, ಚೆನ್ನೈನಲ್ಲಿ ತಮಗೆ ಬೇರೆ ಯಾವುದೇ ವಸತಿ ಸೌಕರ್ಯಗಳಿಲ್ಲ. ಹೀಗಾಗಿ ಕೇಸ್ ಇತ್ಯರ್ಥವಾಗುವವರೆಗೆ ಅಥವಾ ವಿಜಯ್ ಅವರು ಇದೇ ದರ್ಜೆಯ ಮತ್ತೊಂದು ಮನೆಯನ್ನು ವ್ಯವಸ್ಥೆ ಮಾಡುವವರೆಗೆ ಪ್ರಸ್ತುತ ಇರುವ ಮನೆಯಲ್ಲೇ ಉಳಿಯಲು ಅವಕಾಶ ನೀಡುವಂತೆ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ವಿಜಯ್ ಅವರ ರಾಜಕೀಯ ಮತ್ತು ವೃತ್ತಿಜೀವನವನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಹಿಂದೆ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆಯಲು ಪ್ರಯತ್ನಿಸಲಾಗಿತ್ತು. ಆದರೆ ಆ ಮಾತುಕತೆ ವಿಫಲವಾಯಿತು. ಒಂದು ವೇಳೆ ಕಾನೂನು ಹೋರಾಟಕ್ಕೆ ಮುಂದಾದರೆ ಮನೆಯಿಂದ ಹೊರಹಾಕುವುದಾಗಿ ಪ್ರತಿವಾದಿಯ (ವಿಜಯ್) ವಕೀಲರು ಬೆದರಿಕೆ ಹಾಕಿದ್ದರು ಎಂದು ಸಂಗೀತಾ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನಟಿಯ ಜೊತೆ ಅಕ್ರಮ ಸಂಬಂಧ ಆರೋಪ
ಸಂಗೀತಾ ಅವರು ಶಾಶ್ವತ ಜೀವನಾಂಶ ಹಾಗೂ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 20 ರಂದು ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸುವ ನಿರೀಕ್ಷೆಯಿದೆ. ಅರ್ಜಿಯಲ್ಲಿ ವಿಜಯ್ ವಿರುದ್ಧ ಗಂಭೀರ ಆರೋಪ ಮಾಡಿರುವ ಸಂಗೀತಾ, ವಿಜಯ್ ಅವರು ನಟಿಯೊಬ್ಬಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ. ತನಗೆ ನಿರಂತರವಾಗಿ ಮಾನಸಿಕ ಹಿಂಸೆ ನೀಡಿ, ನಿರ್ಲಕ್ಷಿಸಿದ್ದಾರೆ ಎಂದು ದೂರಿದ್ದಾರೆ.

ತ್ರಿಷಾ ಜೊತೆ ಕಾಣಿಸಿಕೊಂಡಿದ್ದ ವಿಜಯ್:
ಈ ಎಲ್ಲಾ ವಿಚ್ಛೇದನ ವಿವಾದಗಳ ನಡುವೆಯೇ ಇತ್ತೀಚೆಗೆ ಚೆನ್ನೈನಲ್ಲಿ ನಡೆದ ವಿವಾಹ ಆರತಕ್ಷತೆಯೊಂದರಲ್ಲಿ ನಟ ವಿಜಯ್ ಮತ್ತು ನಟಿ ತ್ರಿಷಾ ಕೃಷ್ಣನ್ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇವರಿಬ್ಬರ ಫೋಟೋಗಳು ಮತ್ತು ವಿಡಿಯೋಗಳು ಆನ್‌ಲೈನ್‌ನಲ್ಲಿ ಭಾರಿ ವೈರಲ್ ಆಗಿದ್ದು, ಇಬ್ಬರ ನಡುವೆ ರಿಲೇಶನ್‌ಶಿಪ್ ಇದೆ ಎಂಬ ಅಭಿಮಾನಿಗಳ ಹಳೆಯ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!