ಪಹಲ್ಗಾಮ್ ಭಯೋತ್ಪಾದಕರ ದಾ*ಳಿ ನಂತರ, ದೇಶದ ಪ್ರವಾಸಿ ತಾಣಗಳಲ್ಲಿ ಹೈ-ಅಲರ್ಟ್ ಘೋಷಣೆ.

ಮೈಸೂರು: ನಿನ್ನೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಮೈಸೂರಿನ ಪ್ರವಾಸಿ ತಾಣಗಳನ್ನ ಉಡೀಸ್ ಮಾಡುವುದಾಗಿ ಇ- ಮೇಲ್ ಬಂದಿದೆ. ಪಹಲ್ಗಾಮ್ ಭಯೋತ್ಪಾದಕರ ದಾಳಿ ನಂತರ, ದೇಶದ ಪ್ರವಾಸಿ ತಾಣಗಳಲ್ಲಿ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ, ಮೈಸೂರು ಪ್ರವಾಸಿ ಸ್ಥಳಗಳಿಗೂ ಗುಪ್ತಚರ ಇಲಾಖೆ ಮೊದಲೇ ಭದ್ರತೆ ಬಗ್ಗೆ ಸೂಚನೆ ನೀಡಿತ್ತು. ಆದರೆ, ಪೊಲೀಸ್ ಆಯುಕ್ತರ ಕಚೇರಿಗೆ ಮೇಲ್ ಬಂದಿರೋದು ಮತ್ತಷ್ಟು ಆತಂಕಕ್ಕೆ ತಳ್ಳಿದೆ.

ಇದರಿಂದ ಎಚ್ಚೆತ್ತ ಪೊಲೀಸರು, ಮೈಸೂರಿಗೆ ಬಂದು ಹೋಗುವ ಪ್ರವಾಸಿಗರ ಮೇಲೆ ಎಚ್ಚರಿಕೆಯ ಕಣ್ಣಿಟ್ಟಿದ್ದಾರೆ. ಹೀಗಾಗಿ ಹೋಟೆಲ್, ಕೊಠಡಿಗಳಲ್ಲಿ ರೂಮ್ ಬಾಡಿಗೆ ಪಡೆಯುವವರ ಮೇಲೆ ನಿಗಾ ಇಟ್ಟಿದ್ದಾರೆ. ಅಲ್ಲದೇ ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ, ಸಂತ ಫಿಲೋಮಿನಾ ಚರ್ಚ್, ಬೃಂದಾವನಕ್ಕೆ ಭದ್ರತೆ ಕಲ್ಪಿಸಲಾಗಿದ್ದು, ಶ್ವಾನದಳ, ಬಾಂಬ್ ಪತ್ತೆ ದಳದಿಂದ ನಿರಂತರ ತಪಾಸಣೆ ನಡೆಸಲಾಗ್ತಿದೆ.

ಇನ್ನು, ಬಾಡಿಗೆ ಮನೆ ಪಡೆಯುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಯಾವುದೇ ವ್ಯಕ್ತಿ ಮೇಲೆ ಅನುಮಾನ ಕಂಡುಬಂದರೆ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದಾರೆ. ಇ-ಮೇಲ್ ಬೆದರಿಕೆ ಕರೆ ಬೆನ್ನಲ್ಲೆ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಮೈಸೂರಿನ ರಿಂಗ್ ರಸ್ತೆಗಳಲ್ಲಿ ನಾಕಾ ಬಂದಿ ಹಾಕಲಾಗಿದೆ. ಪೊಲೀಸರು ಅನುಮಾನಾಸ್ಪದ ವ್ಯಕ್ತಿ ಹಾಗೂ ವಸ್ತುಗಳ, ಆಧಾರ್ ಕಾರ್ಡ್ಗಳ ತೀವ್ರ ತಪಾಸಣೆ ನಡೆಸ್ತಿದ್ದಾರೆ. ಮೈಸೂರಿನ ರಸ್ತೆಗಳಲ್ಲಿ ಕಮಿಷನರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸಂಚರಿಸಿ ಸಾರ್ವಜನಿಕರಿಗೆ ನಿಮ್ಮ ಜೊತೆ ನಾವಿದ್ದೀವಿ ಎಂದು ಅಭಯ ನೀಡ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!