ಪಹಲ್ಗಾಮ್ ಭಯೋತ್ಪಾದಕರ ದಾ*ಳಿ ನಂತರ, ದೇಶದ ಪ್ರವಾಸಿ ತಾಣಗಳಲ್ಲಿ ಹೈ-ಅಲರ್ಟ್ ಘೋಷಣೆ.

ಮೈಸೂರು: ನಿನ್ನೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಮೈಸೂರಿನ ಪ್ರವಾಸಿ ತಾಣಗಳನ್ನ ಉಡೀಸ್ ಮಾಡುವುದಾಗಿ ಇ- ಮೇಲ್ ಬಂದಿದೆ. ಪಹಲ್ಗಾಮ್ ಭಯೋತ್ಪಾದಕರ ದಾಳಿ ನಂತರ, ದೇಶದ ಪ್ರವಾಸಿ ತಾಣಗಳಲ್ಲಿ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ, ಮೈಸೂರು ಪ್ರವಾಸಿ ಸ್ಥಳಗಳಿಗೂ ಗುಪ್ತಚರ ಇಲಾಖೆ ಮೊದಲೇ ಭದ್ರತೆ ಬಗ್ಗೆ ಸೂಚನೆ ನೀಡಿತ್ತು. ಆದರೆ, ಪೊಲೀಸ್ ಆಯುಕ್ತರ ಕಚೇರಿಗೆ ಮೇಲ್ ಬಂದಿರೋದು ಮತ್ತಷ್ಟು ಆತಂಕಕ್ಕೆ ತಳ್ಳಿದೆ.

ಇದರಿಂದ ಎಚ್ಚೆತ್ತ ಪೊಲೀಸರು, ಮೈಸೂರಿಗೆ ಬಂದು ಹೋಗುವ ಪ್ರವಾಸಿಗರ ಮೇಲೆ ಎಚ್ಚರಿಕೆಯ ಕಣ್ಣಿಟ್ಟಿದ್ದಾರೆ. ಹೀಗಾಗಿ ಹೋಟೆಲ್, ಕೊಠಡಿಗಳಲ್ಲಿ ರೂಮ್ ಬಾಡಿಗೆ ಪಡೆಯುವವರ ಮೇಲೆ ನಿಗಾ ಇಟ್ಟಿದ್ದಾರೆ. ಅಲ್ಲದೇ ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ, ಸಂತ ಫಿಲೋಮಿನಾ ಚರ್ಚ್, ಬೃಂದಾವನಕ್ಕೆ ಭದ್ರತೆ ಕಲ್ಪಿಸಲಾಗಿದ್ದು, ಶ್ವಾನದಳ, ಬಾಂಬ್ ಪತ್ತೆ ದಳದಿಂದ ನಿರಂತರ ತಪಾಸಣೆ ನಡೆಸಲಾಗ್ತಿದೆ.

ಇನ್ನು, ಬಾಡಿಗೆ ಮನೆ ಪಡೆಯುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಯಾವುದೇ ವ್ಯಕ್ತಿ ಮೇಲೆ ಅನುಮಾನ ಕಂಡುಬಂದರೆ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದಾರೆ. ಇ-ಮೇಲ್ ಬೆದರಿಕೆ ಕರೆ ಬೆನ್ನಲ್ಲೆ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಮೈಸೂರಿನ ರಿಂಗ್ ರಸ್ತೆಗಳಲ್ಲಿ ನಾಕಾ ಬಂದಿ ಹಾಕಲಾಗಿದೆ. ಪೊಲೀಸರು ಅನುಮಾನಾಸ್ಪದ ವ್ಯಕ್ತಿ ಹಾಗೂ ವಸ್ತುಗಳ, ಆಧಾರ್ ಕಾರ್ಡ್ಗಳ ತೀವ್ರ ತಪಾಸಣೆ ನಡೆಸ್ತಿದ್ದಾರೆ. ಮೈಸೂರಿನ ರಸ್ತೆಗಳಲ್ಲಿ ಕಮಿಷನರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸಂಚರಿಸಿ ಸಾರ್ವಜನಿಕರಿಗೆ ನಿಮ್ಮ ಜೊತೆ ನಾವಿದ್ದೀವಿ ಎಂದು ಅಭಯ ನೀಡ್ತಿದ್ದಾರೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು