ವಿಚ್ಛೇದನಕ್ಕೆ ಮುಂದಾದ ಅಜಯ್ ರಾವ್ ದಂಪತಿ ! ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ ಪತ್ನಿ .

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಅಜಯ್ ರಾವ್ ಹಾಗೂ ಸ್ವಪ್ನ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಇಬ್ಬರೂ ಸಹ 2014 ರಲ್ಲಿ ಹೊಸೇಪಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ಇಬ್ಬರಿಗೂ ಮಗಳು ಸಹ ಇದ್ದಾಳೆ. ಮದುವೆಯಾದ 11 ವರ್ಷದ ಬಳಿಕ ಇದೀಗ ಈ ದಂಪತಿ ಬೇರಾಗುತ್ತಿದ್ದಾರೆ.ಇಬ್ಬರ ವಿಚ್ಛೇದನಕ್ಕೆ ನಿಖರ ಕಾರಣಗಳು ಇನ್ನಷ್ಟೆ ತಿಳಿಯಬೇಕಿದೆ. ಸದ್ಯ ನಟ ಅಜಯ್‌ ರಾವ್‌ ಪತ್ನಿ ಸಪ್ನಾ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮದುವೆಗೂ ಮುಂಚೆಯೇ ಅಜಯ್‌ ರಾವ್‌ ಡಿವೋರ್ಸ್‌ ಬಗ್ಗೆ ಭವಿಷ್ಯ!
ನಟ ಅಜಯ್‌ ರಾವ್‌, ಸ್ವಪ್ನ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಸದ್ಯ ಈ ದಂಪತಿಗೆ ಮುದ್ದಾದ ಮಗಳಿದ್ದಾಳೆ. ಈ ಜೋಡಿ ಅನ್ಯೋನ್ಯವಾಗಿ ಜೀವನ ಮಾಡುತ್ತಿದ್ದರು , ಆದರೆ ಮದುವೆಗೆ ಮುಂಚೆಯೇ ಇವರಿಬ್ಬರ ಡಿವೋರ್ಸ್‌ ಭವಿಷ್ಯ ನುಡಿದಿದ್ರಂತೆ.

ಈಗೆಲ್ಲಾ ಡಿವೋರ್ಸ್‌ ಟ್ರೆಂಡ್‌ ಹೆಚ್ಚಾಗಿದೆ. ಸಣ್ಣ-ಪುಟ್ಟ ಕಾರಣಗಳಿಗೆ ಮದುವೆ ಆದ ಕೆಲ ದಿನಗಳಲ್ಲೇ ಡಿವೋರ್ಸ್‌ ತೆಗೆದುಕೊಂಡಿರುವ ಸೆಲೆಬ್ರಿಟಿಗಳ ಉದಾಹರಣೆಗಳಿವೆ. ಮದುವೆ ಆದಮೇಲೆ ಡಿವೋರ್ಸ್‌ ತೆಗೆದುಕೊಳ್ಳುವುದು ಕಾಮನ್‌ ಆಗಿಬಿಟ್ಟಿದೆ. ಆದರೆ ಮದುವೆಗೆ ಮುಂಚೆಯೇ ನಟ ಅಜಯ್‌ ರಾವ್‌ ಅವರ ಡಿವೋರ್ಸ್‌ ಬಗ್ಗೆ ಒಬ್ಬರು ಭವಿಷ್ಯ ನುಡಿದಿದ್ದರಂತೆ. ಒಳ್ಳೆ ಮುಹೂರ್ತದಲ್ಲಿ ಮದುವೆಯಾಗುತ್ತಿಲ್ಲ, ಹಾಗಾಗಿ ಮದುವೆಯಾದ ಒಂದೇ ವರ್ಷದಲ್ಲಿ ಅಜಯ್‌ ರಾವ್ ಮತ್ತು ಸ್ವಪ್ನ ಅವರ ಡಿವೋರ್ಸ್‌ ಆಗಲಿದೆ ಎಂದಿದ್ದರಂತೆ.

ಅಜಯ್‌ ರಾವ್‌ ಮದುವೆ
ನಟ ಅಜಯ್‌ ರಾವ್‌ ಮತ್ತು ಸ್ವಪ್ನ ಅಜಯ್‌ ರಾವ್‌ ಅವರು 2014 ಡಿಸೆಂಬರ್‌ನಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿಯದ್ದು ಲವ್‌ ಕಂ ಅರೇಂಜ್‌ ಮ್ಯಾರೇಜ್‌. ಹೀಗೆ ಪರಿಚಯವಾಗಿ, ಆ ಪರಿಯಚಯ ಸ್ನೇಹಕ್ಕೆ ಮತ್ತು ಸ್ನೇಹ ಪ್ರೀತಿಗೆ ತಿರುಗಿ ನಂತರ ಸಪ್ತಪದಿ ತುಳಿದಿದ್ದರು. ಸದ್ಯ ಈ ಜೋಡಿಗೆ ಚೆರಿಷ್ಮಾ ಎಂಬ ಹೆಸರಿನ ಮುದ್ದಾಗ ಮಗಳಿದ್ದಾಳೆ.

ತಪ್ಪು ಮುಹೂರ್ತದಲ್ಲಿ ಮದುವೆಯಾದೆ!
ಶಾಸ್ತ್ರ ಮತ್ತು ಸಂಪ್ರದಾಯಗಳನ್ನು ನಾನು ನಂಬುತ್ತೇನೆ ಆದರೂ ನಾನು ಅದನ್ನು ಫಾಲೋ ಮಾಡಲ್ಲ. ನಾನು ಮದುವೆ ಆಗಿದ್ದು ತಪ್ಪು ಮುಹೂರ್ತದಲ್ಲಿ. ನನ್ನ ಮೊದಲನೇ ಪ್ರೊಡಕ್ಷನ್‌ ಸಿನಿಮಾ ʻಕೃಷ್ಣ ಲೀಲಾʼ ಮಾಡಿದ್ದು ತಪ್ಪು ಮುಹೂರ್ತದಲ್ಲಿ”
ಮದುವೆಯಾದ ಮುಹೂರ್ತದಲ್ಲಿ, ʻನೀವಿಬ್ಬರು ಒಂದು ವರ್ಷವೂ ಜೊತೆ ಇರಲ್ಲ, ಡಿವೋರ್ಸ್‌ ಆಗುತ್ತೆʼ ಅಂದಿದ್ದರು. ಆದರೆ ನಾನು ಯಾವ ಮುಹೂರ್ತವೂ ನೋಡಲ್ಲ. ನನಗೆ ಜ್ಯೋತಿಷ್ಯ ಓದುವುದಕ್ಕೆ ಬರುತ್ತೆ. ನಾನು ಸ್ಟಡಿ ಮಾಡಿದಾಗ, ಹೌದಲ್ವಾ ಇದು ತಪ್ಪು ಮುಹೂರ್ತ ಅನ್ನೋದು ನಂತರ ಗೊತ್ತಾಯ್ತು. ಜೀವನದಲ್ಲಿ ಏನೂ ಬಂದರೂ ನಾನು ಸ್ವೀಕರಿಸುತ್ತೇನೆ” ಎಂದಿದ್ದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಮೈಸೂರು : ʻಕಾಂತಾರʼ ಸಿನಿಮಾದಲ್ಲಿರುವ ಚಾಮುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!