ವಿಚ್ಛೇದನಕ್ಕೆ ಮುಂದಾದ ಅಜಯ್ ರಾವ್ ದಂಪತಿ ! ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ ಪತ್ನಿ .

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಅಜಯ್ ರಾವ್ ಹಾಗೂ ಸ್ವಪ್ನ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಇಬ್ಬರೂ ಸಹ 2014 ರಲ್ಲಿ ಹೊಸೇಪಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ಇಬ್ಬರಿಗೂ ಮಗಳು ಸಹ ಇದ್ದಾಳೆ. ಮದುವೆಯಾದ 11 ವರ್ಷದ ಬಳಿಕ ಇದೀಗ ಈ ದಂಪತಿ ಬೇರಾಗುತ್ತಿದ್ದಾರೆ.ಇಬ್ಬರ ವಿಚ್ಛೇದನಕ್ಕೆ ನಿಖರ ಕಾರಣಗಳು ಇನ್ನಷ್ಟೆ ತಿಳಿಯಬೇಕಿದೆ. ಸದ್ಯ ನಟ ಅಜಯ್‌ ರಾವ್‌ ಪತ್ನಿ ಸಪ್ನಾ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮದುವೆಗೂ ಮುಂಚೆಯೇ ಅಜಯ್‌ ರಾವ್‌ ಡಿವೋರ್ಸ್‌ ಬಗ್ಗೆ ಭವಿಷ್ಯ!
ನಟ ಅಜಯ್‌ ರಾವ್‌, ಸ್ವಪ್ನ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಸದ್ಯ ಈ ದಂಪತಿಗೆ ಮುದ್ದಾದ ಮಗಳಿದ್ದಾಳೆ. ಈ ಜೋಡಿ ಅನ್ಯೋನ್ಯವಾಗಿ ಜೀವನ ಮಾಡುತ್ತಿದ್ದರು , ಆದರೆ ಮದುವೆಗೆ ಮುಂಚೆಯೇ ಇವರಿಬ್ಬರ ಡಿವೋರ್ಸ್‌ ಭವಿಷ್ಯ ನುಡಿದಿದ್ರಂತೆ.

ಈಗೆಲ್ಲಾ ಡಿವೋರ್ಸ್‌ ಟ್ರೆಂಡ್‌ ಹೆಚ್ಚಾಗಿದೆ. ಸಣ್ಣ-ಪುಟ್ಟ ಕಾರಣಗಳಿಗೆ ಮದುವೆ ಆದ ಕೆಲ ದಿನಗಳಲ್ಲೇ ಡಿವೋರ್ಸ್‌ ತೆಗೆದುಕೊಂಡಿರುವ ಸೆಲೆಬ್ರಿಟಿಗಳ ಉದಾಹರಣೆಗಳಿವೆ. ಮದುವೆ ಆದಮೇಲೆ ಡಿವೋರ್ಸ್‌ ತೆಗೆದುಕೊಳ್ಳುವುದು ಕಾಮನ್‌ ಆಗಿಬಿಟ್ಟಿದೆ. ಆದರೆ ಮದುವೆಗೆ ಮುಂಚೆಯೇ ನಟ ಅಜಯ್‌ ರಾವ್‌ ಅವರ ಡಿವೋರ್ಸ್‌ ಬಗ್ಗೆ ಒಬ್ಬರು ಭವಿಷ್ಯ ನುಡಿದಿದ್ದರಂತೆ. ಒಳ್ಳೆ ಮುಹೂರ್ತದಲ್ಲಿ ಮದುವೆಯಾಗುತ್ತಿಲ್ಲ, ಹಾಗಾಗಿ ಮದುವೆಯಾದ ಒಂದೇ ವರ್ಷದಲ್ಲಿ ಅಜಯ್‌ ರಾವ್ ಮತ್ತು ಸ್ವಪ್ನ ಅವರ ಡಿವೋರ್ಸ್‌ ಆಗಲಿದೆ ಎಂದಿದ್ದರಂತೆ.

ಅಜಯ್‌ ರಾವ್‌ ಮದುವೆ
ನಟ ಅಜಯ್‌ ರಾವ್‌ ಮತ್ತು ಸ್ವಪ್ನ ಅಜಯ್‌ ರಾವ್‌ ಅವರು 2014 ಡಿಸೆಂಬರ್‌ನಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿಯದ್ದು ಲವ್‌ ಕಂ ಅರೇಂಜ್‌ ಮ್ಯಾರೇಜ್‌. ಹೀಗೆ ಪರಿಚಯವಾಗಿ, ಆ ಪರಿಯಚಯ ಸ್ನೇಹಕ್ಕೆ ಮತ್ತು ಸ್ನೇಹ ಪ್ರೀತಿಗೆ ತಿರುಗಿ ನಂತರ ಸಪ್ತಪದಿ ತುಳಿದಿದ್ದರು. ಸದ್ಯ ಈ ಜೋಡಿಗೆ ಚೆರಿಷ್ಮಾ ಎಂಬ ಹೆಸರಿನ ಮುದ್ದಾಗ ಮಗಳಿದ್ದಾಳೆ.

ತಪ್ಪು ಮುಹೂರ್ತದಲ್ಲಿ ಮದುವೆಯಾದೆ!
ಶಾಸ್ತ್ರ ಮತ್ತು ಸಂಪ್ರದಾಯಗಳನ್ನು ನಾನು ನಂಬುತ್ತೇನೆ ಆದರೂ ನಾನು ಅದನ್ನು ಫಾಲೋ ಮಾಡಲ್ಲ. ನಾನು ಮದುವೆ ಆಗಿದ್ದು ತಪ್ಪು ಮುಹೂರ್ತದಲ್ಲಿ. ನನ್ನ ಮೊದಲನೇ ಪ್ರೊಡಕ್ಷನ್‌ ಸಿನಿಮಾ ʻಕೃಷ್ಣ ಲೀಲಾʼ ಮಾಡಿದ್ದು ತಪ್ಪು ಮುಹೂರ್ತದಲ್ಲಿ”
ಮದುವೆಯಾದ ಮುಹೂರ್ತದಲ್ಲಿ, ʻನೀವಿಬ್ಬರು ಒಂದು ವರ್ಷವೂ ಜೊತೆ ಇರಲ್ಲ, ಡಿವೋರ್ಸ್‌ ಆಗುತ್ತೆʼ ಅಂದಿದ್ದರು. ಆದರೆ ನಾನು ಯಾವ ಮುಹೂರ್ತವೂ ನೋಡಲ್ಲ. ನನಗೆ ಜ್ಯೋತಿಷ್ಯ ಓದುವುದಕ್ಕೆ ಬರುತ್ತೆ. ನಾನು ಸ್ಟಡಿ ಮಾಡಿದಾಗ, ಹೌದಲ್ವಾ ಇದು ತಪ್ಪು ಮುಹೂರ್ತ ಅನ್ನೋದು ನಂತರ ಗೊತ್ತಾಯ್ತು. ಜೀವನದಲ್ಲಿ ಏನೂ ಬಂದರೂ ನಾನು ಸ್ವೀಕರಿಸುತ್ತೇನೆ” ಎಂದಿದ್ದರು.

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!