ಮೈಸೂರಲ್ಲಿ ಬಾಲ್ಯವಿವಾಹ ತಡೆಗೆ ನಾಳೆಯಿಂದ ಫೀಲ್ಡ್‌ಗಿಳಿಯಲಿದೆ ಅಕ್ಕ ಪಡೆ!

ಮೈಸೂರು ಸೇರಿ ಮೂರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗೆ ಆ.15ರಿಂದ ‘ಅಕ್ಕ ಪಡೆ’ ಫೀಲ್ಡ್ ಗಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಾಕಿವೆ ಲಕ್ಷ್ಮಿ ಆರ್.ಹೆಬ್ಬಾಳ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶೋತ್ತರ ವೇಳೆಯಲ್ಲಿ ಸಿ.ಬಿ . ಸುರೇಶ್ ಬಾಬು ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಆಗಸ್ಟ್ 15ರಂದು ಮೈಸೂರು. ಬೆಳಗಾವಿ, ಮಂಗಳೂರಿನಲ್ಲಿ ‘ಅಕ್ಕ ಪಡೆ’ ಕಾರ್ಯ ಆರಂಭವಾಗಲಿದೆ. ಪಡೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ, ಎನ್ ಸಿಸಿ ಹಿರಿಯ ಕೇಡರ್ ಇರಲಿದ್ದು, ಇಲಾಖೆ ವಾಹನ ನೀಡಲಾಗುವುದು, ತಂಡ ಮೊದಲ ಹಂತದಲ್ಲಿ ಕಾಲೇಜು ಬಿಟ್ಟವರ ಮಾಹಿತಿ ಪಡೆಯಲಿದೆ ಎಂದರು.

ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹವನ್ನು ಪರಿಣಾಮಕಾರಿಯಾಗಿ ತಡೆಯಲು ಹತ್ತು ಇಲಾಖೆಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಇದನ್ನು ಬೇರು ಕಿತ್ತೊಗೆಯಬೇಕಿದೆ. ಬಾಲ್ಯ ವಿವಾಹ ತಡೆ ತಿದ್ದುಪಡಿ ವಿಧೇಯಕ ತರುತ್ತಿದ್ದೇವೆ ಎಂದರು. ರಾಜ್ಯದಲ್ಲಿ ಬಾಲಗರ್ಭಿಣಿ ಪ್ರಕರಣಗಳು 2022-23ರಲ್ಲಿ 405, 2023-24ರಲ್ಲಿ 709, 2024-25ರಲ್ಲಿ 685 ಸರ್ಕಾರದ ಗಮನಕ್ಕೆ ಬಂದಿದೆ. ಜಿಲ್ಲೆಗೊಂದು ಮಕ್ಕಳ ರಕ್ಷಣಾ ಸಮಿತಿ ಇರಲಿದೆ, ಸಾಮಾಜಿಕ ಮಾಧ್ಯಮಕ್ಕೂ ಕಡಿವಾಣ ಹಾಕಬೇಕಿದೆ, ಕೆಲವು ಸಮುದಾಯಗಳಲ್ಲಿ ಬಾಲ್ಯ ವಿವಾಹ ಆಚರಣೆಯಲ್ಲಿದ್ದು, ಕಡಿವಾಣ ಹಾಕಲಾಗುತ್ತಿದೆ.

66% ಮಕ್ಕಳ ಸಹಾಯವಾಣಿ 1098, 24 ಗಂಟೆ ಕಾರ್ಯನಿರ್ವಹಿಸಲ್ಲಿದೆ . ಸಂಕಷ್ಟದಲ್ಲಿರುವ ಮಕ್ಕಳು ಹಾಗೂ ಸಂತ್ರಸ್ತರು ಯಾವುದೇ ಸಮಯದಲ್ಲಿ ಕರೆ ಮಾಡಿದರೂ ಮಕ್ಕಳ ರಕ್ಷಣೆಗೆ ಇಲಾಖೆ ಮುಂದಾಗಲಿದೆ . ರಾಜ್ಯದಲ್ಲಿ 26 ಸಾವಿರ ಬಾಲ ಗರ್ಭಿಣಿಯರು ಇರುವ ಮಾಹಿತಿ ಇದೆ . 4 ತಿಂಗಳಲ್ಲಿ 900ಕ್ಕೂ ಹೆಚ್ಚು ಬಾಲಕಿಯರ ಮೇಲೆ ಅತ್ಯಾಚಾರವಾಗಿದೆ. ಆರೋಗ್ಯ, ಪೊಲೀಸ್, ಶಿಕ್ಷಣ, ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಸಮನ್ವಯತೆಯಿಂದ ಈ ಪಿಡುಗನ್ನು ನಿಯಂತ್ರಿಸಬೇಕಿದೆ. ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು .

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!