ಮೈಸೂರಲ್ಲಿ ಬಾಲ್ಯವಿವಾಹ ತಡೆಗೆ ನಾಳೆಯಿಂದ ಫೀಲ್ಡ್‌ಗಿಳಿಯಲಿದೆ ಅಕ್ಕ ಪಡೆ!

ಮೈಸೂರು ಸೇರಿ ಮೂರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗೆ ಆ.15ರಿಂದ ‘ಅಕ್ಕ ಪಡೆ’ ಫೀಲ್ಡ್ ಗಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಾಕಿವೆ ಲಕ್ಷ್ಮಿ ಆರ್.ಹೆಬ್ಬಾಳ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶೋತ್ತರ ವೇಳೆಯಲ್ಲಿ ಸಿ.ಬಿ . ಸುರೇಶ್ ಬಾಬು ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಆಗಸ್ಟ್ 15ರಂದು ಮೈಸೂರು. ಬೆಳಗಾವಿ, ಮಂಗಳೂರಿನಲ್ಲಿ ‘ಅಕ್ಕ ಪಡೆ’ ಕಾರ್ಯ ಆರಂಭವಾಗಲಿದೆ. ಪಡೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ, ಎನ್ ಸಿಸಿ ಹಿರಿಯ ಕೇಡರ್ ಇರಲಿದ್ದು, ಇಲಾಖೆ ವಾಹನ ನೀಡಲಾಗುವುದು, ತಂಡ ಮೊದಲ ಹಂತದಲ್ಲಿ ಕಾಲೇಜು ಬಿಟ್ಟವರ ಮಾಹಿತಿ ಪಡೆಯಲಿದೆ ಎಂದರು.

ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹವನ್ನು ಪರಿಣಾಮಕಾರಿಯಾಗಿ ತಡೆಯಲು ಹತ್ತು ಇಲಾಖೆಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಇದನ್ನು ಬೇರು ಕಿತ್ತೊಗೆಯಬೇಕಿದೆ. ಬಾಲ್ಯ ವಿವಾಹ ತಡೆ ತಿದ್ದುಪಡಿ ವಿಧೇಯಕ ತರುತ್ತಿದ್ದೇವೆ ಎಂದರು. ರಾಜ್ಯದಲ್ಲಿ ಬಾಲಗರ್ಭಿಣಿ ಪ್ರಕರಣಗಳು 2022-23ರಲ್ಲಿ 405, 2023-24ರಲ್ಲಿ 709, 2024-25ರಲ್ಲಿ 685 ಸರ್ಕಾರದ ಗಮನಕ್ಕೆ ಬಂದಿದೆ. ಜಿಲ್ಲೆಗೊಂದು ಮಕ್ಕಳ ರಕ್ಷಣಾ ಸಮಿತಿ ಇರಲಿದೆ, ಸಾಮಾಜಿಕ ಮಾಧ್ಯಮಕ್ಕೂ ಕಡಿವಾಣ ಹಾಕಬೇಕಿದೆ, ಕೆಲವು ಸಮುದಾಯಗಳಲ್ಲಿ ಬಾಲ್ಯ ವಿವಾಹ ಆಚರಣೆಯಲ್ಲಿದ್ದು, ಕಡಿವಾಣ ಹಾಕಲಾಗುತ್ತಿದೆ.

66% ಮಕ್ಕಳ ಸಹಾಯವಾಣಿ 1098, 24 ಗಂಟೆ ಕಾರ್ಯನಿರ್ವಹಿಸಲ್ಲಿದೆ . ಸಂಕಷ್ಟದಲ್ಲಿರುವ ಮಕ್ಕಳು ಹಾಗೂ ಸಂತ್ರಸ್ತರು ಯಾವುದೇ ಸಮಯದಲ್ಲಿ ಕರೆ ಮಾಡಿದರೂ ಮಕ್ಕಳ ರಕ್ಷಣೆಗೆ ಇಲಾಖೆ ಮುಂದಾಗಲಿದೆ . ರಾಜ್ಯದಲ್ಲಿ 26 ಸಾವಿರ ಬಾಲ ಗರ್ಭಿಣಿಯರು ಇರುವ ಮಾಹಿತಿ ಇದೆ . 4 ತಿಂಗಳಲ್ಲಿ 900ಕ್ಕೂ ಹೆಚ್ಚು ಬಾಲಕಿಯರ ಮೇಲೆ ಅತ್ಯಾಚಾರವಾಗಿದೆ. ಆರೋಗ್ಯ, ಪೊಲೀಸ್, ಶಿಕ್ಷಣ, ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಸಮನ್ವಯತೆಯಿಂದ ಈ ಪಿಡುಗನ್ನು ನಿಯಂತ್ರಿಸಬೇಕಿದೆ. ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು .

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!