ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೂಡಾ ನಿವೇಶನ ಹಂಚಿಕೆ : ಸ್ವಾದೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ : ಸಿಎಂ ಸ್ಪಷ್ಟನೆ

ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೂಡಾ ನಿವೇಶನ ಹಂಚಿಕೆ: ಸ್ವಾದೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ: ಸಿಎಂ ಸ್ಪಷ್ಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50: 50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು ಎಂದರು.

ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ.ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

  • Related Posts

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

    ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

      ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!