ಸಿಎಂ ತವರು ಕ್ಷೇತ್ರದಲ್ಲಿ ಅನ್ನದಾತರ ಅಹೋರಾತ್ರಿ ಧರಣಿ, ಭೂಮಿ ಕಳೆದುಕೊಂಡ ರೈತ ಕುಟುಂಬದಿಂದ ಪ್ರತಿಭಟನೆ

ಸಿಎಂ ತವರು ಕ್ಷೇತ್ರದಲ್ಲಿ ಅನ್ನದಾತರ ಅಹೋರಾತ್ರಿ ಧರಣಿ, ಭೂಮಿ ಕಳೆದುಕೊಂಡ ರೈತ ಕುಟುಂಬದಿಂದ ಪ್ರತಿಭಟನೆ

ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ‌ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆಂದು ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ರೈತರ ಕುಟುಂಬದ ಸದಸ್ಯರಿಗೆ ಕಾರ್ಖಾನೆಗಳಲ್ಲಿ ಖಾಯಂ ಕೆಲಸ ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಬಹುತೇಕ ಕಾರ್ಖಾನೆಗಳು ಉದ್ಯೋಗವನ್ನು ನೀಡಿರಲಿಲ್ಲ. ರೈತರ ಹಲವಾರು ಹೋರಾಟಗಳ ನಂತರ, ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಒಂದು ಜಿಲ್ಲಾಮಟ್ಟದ ಸಮಿತಿಯನ್ನು ರಚನೆ ಮಾಡಿದರು. ಈ ಸಮಿತಿಯ ಶಿಫರಾಸ್ಸಿನಂತೆ, ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿಯ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ.

ಹಾಗಾಗಿ ರೈತರಿಂದ ಭೂಮಿಯನ್ನು ಪಡೆದು ಕೈಗಾರಿಕೆಗಳಿಗೆ ನೀಡಿರುವ ಕೆಐಎಡಿಬಿಯ ಅಧಿಕಾರಿಗಳು ರೈತರ ಮಕ್ಕಳಿಗೆ ಕೆಲಸ ಕೊಡಿಸಬೇಕೆಂದು, ೨೯-೦೮-೨೦೨೪ರಂದು ಕೆಐಎಡಿಬಿಯ ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಹೋರಾಟವನ್ನು ಶುರು ಮಾಡಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಬಂದ ಕೆಐಎಡಿಬಿಯ ಅಧಿಕಾರಿಗಳು ೦೪-೦೯-೨೦೨೪ ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರೈತರಿಗೆ ಕೆಲಸ ನೀಡಬೇಕಿರುವ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದರು. ಆ‌ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ವಾಪಾಸ್ ತೆಗೆದುಕೊಳ್ಳಲಾಗಿತ್ತು.

ಆದರೆ ಇಂದಿನ ಸಭೆಯಲ್ಲಿ, ಭೂಮಿ ನೀಡಿದ ರೈತರ ಮಕ್ಕಳಿಗೆ ಉದ್ಯೋಗ ನೀಡುವ ಬಗ್ಗೆ ಯಾವುದೇ ತಿರ್ಮಾನವಾಗಲಿಲ್ಲ. ಹಾಗಾಗಿ ರೈತರಿಗೆ ನ್ಯಾಯ ಸಿಗುವವರೆಗೂ ಜಂಟಿ ನಿರ್ದೇಶಕರ ಕಛೇರಿಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು