ಅನಾಮಿಕ ವ್ಯಕ್ತಿಯ ನಿಜಬಣ್ಣ ಬಯಲಾಗಿದೆ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೆ ಇದ್ದಾರೆ ಎಂದ ಮಾಸ್ಕ್ ಮ್ಯಾನ್!

ಧರ್ಮಸ್ಥಳದ ಮಾಸ್ಕ್ ಮ್ಯಾನ್ ನಿಜ ಹೆಸರು, ನಿಜಮುಖ, ನಿಜಬಣ್ಣ ಬಯಲಾಗಿದೆ. ಮಾಸ್ಕ್ ಮ್ಯಾನ್ ಹೆಸರು ಚಿನ್ನಯ್ಯ ಅಲಿಯಾಸ್ ಚೆನ್ನ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ ಎಂದು ಎಸ್‌ಐಟಿ ಅಧಿಕಾರಿಗಳಿಗೆ ಚಿನ್ನಯ್ಯ ಹೇಳಿದ್ದಾನೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿದ್ದ ಅನಾಮಿಕ ವ್ಯಕ್ತಿಯ ನಿಜಬಣ್ಣ ಈಗ ಬಯಲಾಗಿದೆ. ಅನಾಮಿಕ ಮೊದಲಿಗೆ ಬುರುಡೆಯೊಂದನ್ನು ತೆಗೆದುಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದ. ಇದೇ ರೀತಿ ನೂರಾರು ಶವಗಳನ್ನು ಧರ್ಮಸ್ಥಳದ ವಿವಿಧೆಡೆ ಹೂತಿರುವುದಾಗಿ ಹೇಳಿದ್ದ. ಆದರೇ, ಈ ಮಾಸ್ಕ್ ಮ್ಯಾನ್ ಹೇಳಿಕೆಯೇ ಸುಳ್ಳು ಎಂದು ಗೊತ್ತಾದ ಮೇಲೆ ಎಸ್‌ಐಟಿ ಸುಳ್ಳು ದೂರು ನೀಡಿ ಪೊಲೀಸರನ್ನು ದಿಕ್ಕು ತಪ್ಪಿಸಿದ ಹಾಗೂ ಮೊದಲ ಬುರುಡೆಯನ್ನು ಎಲ್ಲಿಂದ ತಂದಿದ್ದ ಎಂಬುದನ್ನು ಬಾಯಿ ಬಿಡದ ಕಾರಣದಿಂದ ಬಂಧಿಸಿದ್ದಾರೆ.
ಈಗ ಅನಾಮಿಕ ವ್ಯಕ್ತಿಯ ನಿಜ ಬಣ್ಣ ಬಯಲಾಗಿದೆ. ಈತನ ನಿಜವಾದ ಹೆಸರು ಚಿನ್ನಯ್ಯ ಅಲಿಯಾಸ್ ಚೆನ್ನ. ಈತ ಮಂಡ್ಯ ಜಿಲ್ಲೆಯ ಮಂಡ್ಯ ತಾಲ್ಲೂಕಿನ ಚಿಕ್ಕಬಳ್ಳಿ ಗ್ರಾಮದವನು. ಈತನಿಗೆ ಮೂವರು ಹೆಂಡತಿಯರು. ಈ ಹಿಂದೆ ಧರ್ಮಸ್ಥಳದಲ್ಲಿ ಸಫಾಯಿ ಕರ್ಮಚಾರಿ ಕೆಲಸ ಮಾಡಿದ್ದ. ಬಳಿಕ ಅಲ್ಲಿಂದ ತಮಿಳುನಾಡಿನ ಈರೋಡ್‌ಗೆ ಹೋಗಿ ಅಲ್ಲಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈಗ ಈತ ಇದ್ದಕ್ಕಿದ್ದಂತೆ ಬಂದು ಧರ್ಮಸ್ಥಳದ ಬಗ್ಗೆ ಯಾವುದೇ ಆಧಾರ, ಸಾಕ್ಷಿ ಇಲ್ಲದೇ ಸುಳ್ಳು ದೂರು ಕೊಟ್ಟಿದ್ದೇಕೆ ? ಎಂಬ ಪ್ರಶ್ನೆ ಉದ್ಭವವಾಗಿದೆ.

ಆಮಿಷಕ್ಕೆ ಒಳಗಾಗಿ ಸುಳ್ಳು ದೂರು ಕೊಟ್ಟ ಚಿನ್ನಯ್ಯ ಅಲಿಯಾಸ್ ಚಿನ್ನ ಅಮೀಷಗಳಿಗೆ ಒಳಗಾಗಿ ಸುಳ್ಳು ಹೇಳಿದ್ದಾನೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೆ ಇದ್ದಾರೆ ಎಂದು ಚಿನ್ನಯ್ಯ ಅಲಿಯಾಸ್ ಚೆನ್ನ ಸ್ಪೋಟಕ ಮಾಹಿತಿಯನ್ನು ಎಸ್‌ಐಟಿ ಅಧಿಕಾರಿಗಳಿಗೆ ನೀಡಿದ್ದಾನೆ. ನನಗೆ ಈ ರೀತಿ ಹೇಳಲು ಹೇಳಿದರು. ನಾನು ಆ ರೀತಿ ಹೇಳಿದೆ. ಬುರುಡೆ ತೆಗೆದುಕೊಂಡು ಕೋರ್ಟ್ ಗೆ ಒಪ್ಪಿಸು ಅಂತ ಹೇಳಿದ್ರು, ಅದರಂತೆ ನಾನು ಬುರುಡೆಯನ್ನು ಕೋರ್ಟ್ ಗೆ ಒಪ್ಪಿಸಿದೆ. ಕೋರ್ಟ್ ಗೆ ಹಾಜರುಪಡಿಸಿದ ಬುರುಡೆ ಎಲ್ಲಿಂದ ಬಂತು ಎಂಬುದು ನನಗೆ ಗೊತ್ತಿಲ್ಲ ಎಂದು ಚಿನ್ನಯ್ಯ ಅಲಿಯಾಸ್ ಚೆನ್ನ ಎಸ್‌ಐಟಿ ಅಧಿಕಾರಿಗಳಿಗೆ ಹೇಳಿದ್ದಾನೆ. ತಾನು ತಂದಿದ್ದ ಬುರುಡೆ ಕುರಿತು ಎಷ್ಟೇ ವಿಚಾರಣೆ ನಡೆಸಿದರೂ ಅದರ ಮೂಲದ ಬಗ್ಗೆ ಬಾಯಿ ಬಿಡುತ್ತಿಲ್ಲ. ಮೊದಲು ನಾನು ತೋರಿಸಿದ ಜಾಗದಲ್ಲಿ ಸ್ಥಳ ಪರಿಶೋಧನೆ ನಡೆಸಿ ಎಂದು ಪಟ್ಟು ಹಿಡಿದಿದ್ದ. ಅನುಮಾನಕ್ಕೊಳಗಾದ ಎಸ್ ಐ ಟಿ ಯಿಂದ ಚಿನ್ನಯ್ಯನನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಈ ವೇಳೆ ಎಲ್ಲಾ ಮಾಹಿತಿಯನ್ನು ದೂರುದಾರ ಹಾಗೂ ಸಾಕ್ಷಿಯಾಗಿದ್ದ ಚಿನ್ನಯ್ಯ ಅಲಿಯಾಸ್ ಚೆನ್ನ ಬಿಚ್ಚಿಟ್ಟಿದ್ದಾನೆ. ಇನ್ನೂ ಮಾಸ್ಕ್ ಮ್ಯಾನ್ ಇಷ್ಟು ದಿನ ನೂರಾರು ಶವ ಹೂತ್ತಿದ್ದೆ ಎಂದು ಪೊಲೀಸರಿಗೆ ದೂರು ನೀಡಿದ್ದರಿಂದ ದೂರುದಾರ ಹಾಗೂ ಕೇಸ್ ಸಾಕ್ಷಿದಾರನಾಗಿದ್ದ. ಆದರೇ, ಈಗ ಸಾಕ್ಷಿ, ದೂರುದಾರನೇ ಆರೋಪಿಯಾಗಿದ್ದಾನೆ. ಪೊಲೀಸರಿಗೆ ಸುಳ್ಳು ದೂರು ಕೊಡುವುದು ಕೂಡ ಅಪರಾಧ. ಹೀಗಾಗಿ ಚಿನ್ನಯ್ಯ ಅಲಿಯಾಸ್ ಚಿನ್ನನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈಗ ಆರೋಪಿಯಾಗಿರುವ ಚಿನ್ನಯ್ಯ ಅಲಿಯಾಸ್ ಚಿನ್ನನಿಗೆ ಸಾಕ್ಷಿ ಸಂರಕ್ಷಣಾ ಕಾಯಿದೆಯಡಿ ರಕ್ಷಣೆ ಸಿಗಲ್ಲ. ಚೆನ್ನಯ್ಯ ಅಲಿಯಾಸ್ ಚೆನ್ನನಿಗೆ SIT ಅಧಿಕಾರಿಗಳು ಈಗ ಗುನ್ನಾ ಇಟ್ಟಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು