ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಮತ್ತೊಂದು ಹೆಲಿಕಾಪ್ಟರ್ ಪತನ – 6 ಮಂದಿ ಸ*ಜೀವ ದಹನ.

ಡೆಹ್ರಾಡೂನ್: ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಗೌರಿಕುಂಡ ಬಳಿ ಪತನಗೊಂಡಿದ್ದು, ಪೈಲೆಟ್, ಮಗು ಸೇರಿ ಹೆಲಿಕಾಪ್ಟರ್ನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ.

ಹೆಲಿಕಾಪ್ಟರ್ ಪತನಗೊಳ್ಳುವ ಮೊದಲು ತ್ರಿಜುಗಿನಾರಾಯಣ ಮತ್ತು ಗೌರಿಕುಂಡ ನಡುವೆ ಸಂಪರ್ಕ ಕಡಿತಗೊಂಡು ನಾಪತ್ತೆಯಾಗಿತ್ತು ಎಂದು ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಡಾ. ವಿ. ಮುರುಗೇಶನ್ ತಿಳಿಸಿದ್ದಾರೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ.

 

ಹವಾಮಾನ ವೈಪರೀತ್ಯದದಿಂದ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ರುದ್ರಪ್ರಯಾಗ್ ಜಿಲ್ಲೆಯಲ್ಲಿ ಬೆಳಗಿನ ಜಾವ 5:20ರ ಸುಮಾರಿಗೆ ಘಟನೆ ಸಂಭವಿಸಿದ್ದು, ಹೆಲಿಕಾಪ್ಟರ್ ಹೊತ್ತಿ ಉರಿದಿದೆ.

ಘಟನೆ ಸಂಬಂಧ ಕಮೀಷನರ್ ವಿನಯ್ ಶಂಕರ್ ಪಾಂಡೆ ಪ್ರತಿಕ್ರಿಯಿಸಿ, ಹೆಲಿಕ್ಯಾಪ್ಟರ್ ದುರಂತದಲ್ಲಿ ಯಾರೊಬ್ಬರೂ ಬದುಕುಳಿದಿಲ್ಲ. ಪೈಲಟ್ ಚೌಹನ್, ಒಂದು ಮಗು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ. ಕೇದಾರನಾಥ್ ದೇವಸ್ಥಾನ ಸಮಿತಿಯ ಸದಸ್ಯರೊಬ್ಬರು ಕೂಡ ಇದೇ ಹೆಲಿಕಾಪ್ಟರ್ನಲ್ಲಿ ಇದ್ದರು. ಈ ಹೆಲಿಕಾಪ್ಟರ್ ಆರ್ಯನ್ ಕಂಪನಿಗೆ ಸೇರಿದೆ ಎಂದು ತಿಳಿಸಿದ್ದಾರೆ.

ಹೆಲಿಕಾಪ್ಟರ್ ದುರಂತದ ಬಗ್ಗೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಎಕ್ಸ್ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಘಟನೆ ನೋವು ತರಿಸಿದೆ. ಸ್ಥಳೀಯ ರಕ್ಷಣಾ ತಂಡಗಳು, ಸ್ಥಳಿಯ ಆಡಳಿತಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!