‘ಕಾಂತಾರ’ ಸರಣಿಗೆ ಮತ್ತೊಂದು ಭಾಗ: ಪ್ಯಾನ್-ಇಂಡಿಯಾ ಹೀರೋ ಆಗಮನ?

‘ಕಾಂತಾರ’ ಸಿನಿಮಾ ಹಿಟ್ ಆದ ಬಳಿಕ ಈ ಚಿತ್ರಕ್ಕೆ ಪ್ರೀಕ್ವೆಲ್ ತರೋದಾಗಿ ತಂಡದವರು ಘೋಷಣೆ ಮಾಡಿದರು. ಈಗಾಗಲೇ ಸಿನಿಮಾದ ಶೂಟ್ ಕೂಡ ಪೂರ್ಣಗೊಂಡಿದ್ದು, ಅಕ್ಟೋಬರ್ 2ರಂದು ಸಿನಿಮಾ ರಿಲೀಸ್ ಆಗಲಿದೆ.
ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹೀಗಿರುವಾಗಲೇ ಸಿನಿಮಾದ ಬಗ್ಗೆ ಭರ್ಜರಿ ಅಪ್​ಡೇಟ್ ಒಂದು ಸಿಕ್ಕಿದೆ. ‘ಕಾಂತಾರ’  ಸಿನಿಮಾಗೆ ಪ್ರೀಕ್ವೆಲ್ ಮಾತ್ರವಲ್ಲ, ಸೀಕ್ವೆಲ್ ಕೂಡ ಬರಲಿದೆಯಂತೆ.

 

 

 

 

 

‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ 280ಕ್ಕೂ ಹೆಚ್ಚು ದಿನ ಶೂಟ್ ಮಾಡಲಾಗಿದೆ. ರಿಷಬ್ ಅವರು ಕಳೆದ ಮೂರು ವರ್ಷಗಳಿಂದ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
ಚಿತ್ರದ ಪಾತ್ರವರ್ಗದ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಈ ಚಿತ್ರದಲ್ಲಿ ಮೋಹನ್​ಲಾಲ್ ನಟಿಸುತ್ತಾರೆ ಎಂದು ಹೇಳಲಾಗುತ್ತಿದೆಯಾದರೂ ಆ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈಗ ಚಿತ್ರದ ಸೀಕ್ವೆಲ್ ಬಗ್ಗೆ ಚರ್ಚೆ ಶುರುವಾಗಿದೆ.

‘ಕಾಂತಾರ: ಚಾಪ್ಟರ್ 1’ಗೆ ಸಿನಿಮಾ ಪೂರ್ಣಗೊಳ್ಳುವುದಿಲ್ಲವಂತೆ. ಈ ಸಿನಿಮಾಗೆ ಸೀಕ್ವೆಲ್ ತರುವ ಆಲೋಚನೆ ಕೂಡ ಇದೆ. ಹಾಗೆ ಏನಾದರೂ ನಡೆದರೆ, ‘ಕಾಂತಾರ: ಚಾಪ್ಟರ್ 2’ ಎನ್ನುವ ಶೀರ್ಷಿಕೆ ಇಡಬಹುದು. ಈ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್ ಕೂಡ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ತಂಡದಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ರಿಷಬ್ ಶೆಟ್ಟಿ ಹಾಗೂ ಜೂನಿಯರ್ ಎನ್​ಟಿಆರ್ ಗೆಳೆತನದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇವರ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಈ ಮೊದಲು ಜೂನಿಯರ್ ಎನ್​ಟಿಆರ್ ಅವರು ತಮ್ಮ ತಾಯಿ ಜೊತೆ ಕುಂದಾಪುರಕ್ಕೆ ತೆರಳಿದ್ದರು. ಈ ವೇಳೆ ‘ಕಾಂತಾರ’ ಸಿನಿಮಾದಲ್ಲಿ ನಟಿಸುವ ಆಫರ್ ವಿಚಾರ ಚರ್ಚೆಗೆ ಬಂದಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಈಗಾಗಲೇ ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಚಿತ್ರದ ಮೂಲಕ ಹಿಂದಿಗೆ ಕಾಲಿಟ್ಟಿದ್ದಾರೆ. ಅವರು ಕನ್ನಡದಲ್ಲಿ ಹಾಡನ್ನು ಕೂಡ ಹಾಡಿದ್ದಾರೆ. ಒಂದೊಮ್ಮೆ ಅವರು ಕನ್ನಡಕ್ಕೆ ಬಂದರೆ ಅವರಿಗೆ ಭರ್ಜರಿ ಸ್ವಾಗತ ಸಿಗಲಿದೆ. ಸದ್ಯ ಅವರು ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು