‘ಕಾಂತಾರ’ ಸರಣಿಗೆ ಮತ್ತೊಂದು ಭಾಗ: ಪ್ಯಾನ್-ಇಂಡಿಯಾ ಹೀರೋ ಆಗಮನ?

‘ಕಾಂತಾರ’ ಸಿನಿಮಾ ಹಿಟ್ ಆದ ಬಳಿಕ ಈ ಚಿತ್ರಕ್ಕೆ ಪ್ರೀಕ್ವೆಲ್ ತರೋದಾಗಿ ತಂಡದವರು ಘೋಷಣೆ ಮಾಡಿದರು. ಈಗಾಗಲೇ ಸಿನಿಮಾದ ಶೂಟ್ ಕೂಡ ಪೂರ್ಣಗೊಂಡಿದ್ದು, ಅಕ್ಟೋಬರ್ 2ರಂದು ಸಿನಿಮಾ ರಿಲೀಸ್ ಆಗಲಿದೆ.
ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹೀಗಿರುವಾಗಲೇ ಸಿನಿಮಾದ ಬಗ್ಗೆ ಭರ್ಜರಿ ಅಪ್​ಡೇಟ್ ಒಂದು ಸಿಕ್ಕಿದೆ. ‘ಕಾಂತಾರ’  ಸಿನಿಮಾಗೆ ಪ್ರೀಕ್ವೆಲ್ ಮಾತ್ರವಲ್ಲ, ಸೀಕ್ವೆಲ್ ಕೂಡ ಬರಲಿದೆಯಂತೆ.

 

 

 

 

 

‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ 280ಕ್ಕೂ ಹೆಚ್ಚು ದಿನ ಶೂಟ್ ಮಾಡಲಾಗಿದೆ. ರಿಷಬ್ ಅವರು ಕಳೆದ ಮೂರು ವರ್ಷಗಳಿಂದ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
ಚಿತ್ರದ ಪಾತ್ರವರ್ಗದ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಈ ಚಿತ್ರದಲ್ಲಿ ಮೋಹನ್​ಲಾಲ್ ನಟಿಸುತ್ತಾರೆ ಎಂದು ಹೇಳಲಾಗುತ್ತಿದೆಯಾದರೂ ಆ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈಗ ಚಿತ್ರದ ಸೀಕ್ವೆಲ್ ಬಗ್ಗೆ ಚರ್ಚೆ ಶುರುವಾಗಿದೆ.

‘ಕಾಂತಾರ: ಚಾಪ್ಟರ್ 1’ಗೆ ಸಿನಿಮಾ ಪೂರ್ಣಗೊಳ್ಳುವುದಿಲ್ಲವಂತೆ. ಈ ಸಿನಿಮಾಗೆ ಸೀಕ್ವೆಲ್ ತರುವ ಆಲೋಚನೆ ಕೂಡ ಇದೆ. ಹಾಗೆ ಏನಾದರೂ ನಡೆದರೆ, ‘ಕಾಂತಾರ: ಚಾಪ್ಟರ್ 2’ ಎನ್ನುವ ಶೀರ್ಷಿಕೆ ಇಡಬಹುದು. ಈ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್ ಕೂಡ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ತಂಡದಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ರಿಷಬ್ ಶೆಟ್ಟಿ ಹಾಗೂ ಜೂನಿಯರ್ ಎನ್​ಟಿಆರ್ ಗೆಳೆತನದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇವರ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಈ ಮೊದಲು ಜೂನಿಯರ್ ಎನ್​ಟಿಆರ್ ಅವರು ತಮ್ಮ ತಾಯಿ ಜೊತೆ ಕುಂದಾಪುರಕ್ಕೆ ತೆರಳಿದ್ದರು. ಈ ವೇಳೆ ‘ಕಾಂತಾರ’ ಸಿನಿಮಾದಲ್ಲಿ ನಟಿಸುವ ಆಫರ್ ವಿಚಾರ ಚರ್ಚೆಗೆ ಬಂದಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಈಗಾಗಲೇ ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಚಿತ್ರದ ಮೂಲಕ ಹಿಂದಿಗೆ ಕಾಲಿಟ್ಟಿದ್ದಾರೆ. ಅವರು ಕನ್ನಡದಲ್ಲಿ ಹಾಡನ್ನು ಕೂಡ ಹಾಡಿದ್ದಾರೆ. ಒಂದೊಮ್ಮೆ ಅವರು ಕನ್ನಡಕ್ಕೆ ಬಂದರೆ ಅವರಿಗೆ ಭರ್ಜರಿ ಸ್ವಾಗತ ಸಿಗಲಿದೆ. ಸದ್ಯ ಅವರು ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!