ರಿಷಬ್ ಶೆಟ್ಟಿ ಅವರ ‘ ಕಾಂತಾರ 1 ಚಿತ್ರಕ್ಕೆ ಮತ್ತೊಂದು ಕಂಟಕ, ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ಸಾ*ವು

ರಿಷಬ್ ಶೆಟ್ಟಿ ಅವರ ‘ಕಾಂತಾರ’ ಚಿತ್ರದ ಶೂಟಿಂಗ್ ಸಮಯದಲ್ಲಿ ಹಲವಾರು ಅಪಘಾತಗಳು ಮತ್ತು ಮರಣಗಳು ಸಂಭವಿಸಿವೆ. ಚಿತ್ರೀಕರಣದ ಸಮಯದಲ್ಲಿ ಬಸ್ ಅಪಘಾತ, ಕಲಾವಿದರ ಸಾವು ಮತ್ತು ಇತರ ಅನಾಹುತಗಳು ಸಂಭವಿಸಿವೆ. ಇದರಿಂದಾಗಿ ಚಿತ್ರತಂಡದ ಮೇಲೆ ದೈವದ ಎಚ್ಚರಿಕೆಯ ನಂಬಿಕೆ ಹೆಚ್ಚಾಗಿದೆ. ಅಕ್ಟೋಬರ್ 2ರಂದು ರಿಲೀಸ್ ಆಗಲಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಸಾಲು ಸಾಲು ಹಿನ್ನಡೆ ಆಗುತ್ತಿದೆ. ಈ ಮೊದಲು ಕಲಾವಿದರು ತೆರಳುತ್ತಿದ್ದ ಬಸ್ ಅಪಘಾತಕ್ಕೆ ಒಳಗಾಯಿತು. ಆ ಬಳಿಕ ತಂಡದ ಇಬ್ಬರು ಆರ್ಟಿಸ್ಟ್ಗಳು ಸಾವನಪ್ಪಿದರು. ಈಗ ಚಿತ್ರದ ಜೂನಿಯರ್ ಆರ್ಟಿಸ್ಟ್ ವಿಜು ವಿಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ರೀತಿಯ ಕೆಟ್ಟ ಘಟನೆಗಳು ಸಾಲು ಸಾಲಾಗಿ ನಡೆಯುತ್ತಿರುವುದನ್ನು ನೋಡಿದರೆ ದೈವದ ಎಚ್ಚರಿಕೆ ನಿಜವಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ದೈವದ ಎಚ್ಚರಿಕೆ
ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗೆ ಸಾಕಷ್ಟು ಅಡೆತಡೆಗಳು ಎದುರಾಗುತ್ತಿರುವ ಸೂಚನೆ ಸಿಕ್ಕ ಬೆನ್ನಲ್ಲೇ ಅವರು ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ ಮತ್ತು ಜಾರಂದಾಯ ದೈವದ ಉತ್ಸವದಲ್ಲಿ ಭಾಗಿ ಆಗಿದ್ದರು. ಆಗ ರಿಷಬ್ಗೆ ದೈವ ಎಚ್ಚರಿಕೆಯನ್ನು ನೀಡಿತ್ತು. ‘ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಸಂಚು ನಡೆದಿದೆ’ ಎಂದು ಎಚ್ಚರಿಸಿತ್ತು. ಅಲ್ಲದೆ, ಜಾಗೃತವಾಗಿರಲು ದೈವ ಸೂಚನೆ ನೀಡಿತ್ತು. ಈಗ ಎಚ್ಚರಿಕೆ ನಿಜವಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.
ಅದು 2024ರ ನವೆಂಬರ್ ತಿಂಗಳು. ಶೂಟಿಂಗ್ ಸಲುವಾಗಿ ಜೂನಿಯರ್ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್ ಪಲ್ಟಿ ಆಗಿತ್ತು. ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಈ ಘಟನೆ ನಡೆದಿತ್ತು. ಆರು ಮಂದಿ ಈ ಘಟನೆಯಲ್ಲಿ ಗಾಯಗೊಂಡರು.
ಮೇ ತಿಂಗಳಿಂದ ಈಚೆಗೆ ‘ಕಾಂತಾರ: ಚಾಪ್ಟರ್ 1’ ತಂಡದಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಎಂಎಫ್ ಕಪಿಲ್ ಅವರು ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಈಜಲು ಹೋಗಿ ನಿಧನ (ಮೇ) ಹೊಂದಿದ್ದರು. ‘ಆ ದಿನ ಯಾವುದೇ ಶೂಟಿಂಗ್ ಇರಲಿಲ್ಲ. ಹೀಗಾಗಿ, ಇದಕ್ಕೂ ಕಾಂತಾರ ಚಿತ್ರಕ್ಕೂ ಯಾವುದೇ ಲಿಂಕ್ ಮಾಡಬೇಡಿ’ ಎಂದು ತಂಡ ಕೇಳಿಕೊಂಡಿತ್ತು.  ಇದಾದ ಕೆಲವೇ ದಿನ ಅಂದರೆ ಮೇ 12ರಂದು ‘ಕಾಂತಾರ’ ಚಿತ್ರದ ಕಲಾವಿದ ರಾಕೇಶ್ ಪೂಜಾರಿ ಹೃದಯಾಘಾತದಿಂದ ಮೃತಪಟ್ಟರು. ಇವರು ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಈಗ ಮತ್ತೊಂದು ಅವಘಡ ಸಂಭವಿಸಿದೆ. ಕೇರಳದ ತ್ರಿಶೂರ್ನ ವಿಜು ವಿಕೆ ಎಂಬುವವರು ‘ಕಾಂತಾರ’ ಸಿನಿಮಾ ಶೂಟ್ಗಾಗಿ ಕರ್ನಾಟಕಕ್ಕೆ ಬಂದಿದ್ದರು. ಆಗುಂಬೆಯ ಸಮೀಪದ ಹೋಂ ಸ್ಟೇನಲ್ಲಿ ಉಳಿದುಕೊಂಡಿದ್ದರು. ಜೂನ್ 11ರಂದು ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಹೃದಯಾಘಾತ ಆಗಿದೆ.
ವಿಜು ಅವರ ಮೃತದೇಹವನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅವರ ಕುಟುಂಬಸ್ಥರು ಕೇರಳದಿಂದ ಆಗಮಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!