ಸೂರ್ಯಕುಮಾರ್ ಸೇನೆಗೆ ಮತ್ತೊಂದು ವಿಜಯಮಾಲೆ. ಏಷ್ಯಾಕಪ್ ಫೈನಲ್ ಗೇರಿದ ಟೀಮ್ ಇಂಡಿಯಾ

ಬಾಂಗ್ಲಾದೇಶದ ವಿರುದ್ಧ ನಡೆದ ಏಷ್ಯಾಕಪ್ನ ಸೂಪರ್-4 ಪಂದ್ಯದಲ್ಲಿ ಸೂರ್ಯಕುಮಾರ್ ನೇತೃತ್ವದ ಟೀಮ್ ಇಂಡಿಯಾ 41 ರನ್ಗಳಿಂದ ಭರ್ಜರಿ ಗೆಲುವು ದಾಖಲು ಮಾಡಿದೆ. ಈ ಮೂಲಕ ಏಷ್ಯಾಕಪ್ನಲ್ಲಿ ಸತತ ಐದು ಮ್ಯಾಚ್ಗಳಲ್ಲಿ ವಿಜಯಮಾಲೆ ಧರಿಸಿದೆ.

ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿ ಟೀಮ್ ಇಂಡಿಯಾವನ್ನು ಮೊದಲ ಬ್ಯಾಟಿಂಗ್ಗೆ ಆಹ್ವಾನ ಮಾಡಿತು. ಅದರಂತೆ ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಅಭಿಷೇಕ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್ಗಳ ಟಾರ್ಗೆಟ್ ಅನ್ನು ನೀಡಿತ್ತು.

ಇದಾದ ಮೇಲೆ ಗುರಿ ಬೆನ್ನತ್ತಿದ್ದ ಬಾಂಗ್ಲಾದೇಶ ಆರಂಭದಲ್ಲೇ ದೊಡ್ಡ ಆಘಾತಕ್ಕೆ ಒಳಗಾಯಿತು. ಓಪನರ್ ತಾಂಜಿದ್ ಹಸನ್ ತಮೀಮ್ ಕೇವಲ 1 ರನ್ಗೆ ಔಟ್ ಆದರು. ಇವರ ನಂತರ ಬಂದ ಪರ್ವೇಜ್ ಹೊಸೇನ್ ಎಮನ್, ಓಪನರ್ ಸೈಫ್ ಹಸನ್ಗೆ ಉತ್ತಮ ಸಾಥ್ ಕೊಟ್ಟು 21 ರನ್ ಗಳಿಸಿ ಔಟ್ ಆದರು. ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ್ದ ಸೈಫ್ ಹಸನ್ ಅರ್ಧಶತಕ ಬಾರಿಸಿ ಪಂದ್ಯದ ಕೊನೆವರೆಗೂ ಹೋರಾಟ ನಡೆಸಿದ್ದನು.

ಸೈಫ್ ಹಸನ್ ಕೊನೆವರೆಗೆ ಹೋರಾಟ ನಡೆಸಿ 51 ಎಸೆತಗಳಲ್ಲಿ 3 ಬೌಂಡರಿ ಹಾಗೂ 5 ಸಿಕ್ಸರ್ಗಳಿಂದ 69 ರನ್ ಗಳಿಸಿದರು. ತೋಹಿದ್ ಹೃದಯ್ 7, ಕ್ಯಾಪ್ಟನ್ ಜಾಕೀರ್ ಅಲಿ 4 ರನ್ ಬಿಟ್ಟರೇ ಉಳಿದ ಯಾವ ಬ್ಯಾಟರ್ ಕೂಡ 7 ರನ್ಗಳ ಗಡಿ ದಾಟಲಿಲ್ಲ. ಹೀಗಾಗಿ 19.3 ಓವರ್ಗಳಲ್ಲಿ ಕೇವಲ 127 ರನ್ಗೆ ಬಾಂಗ್ಲಾ ಆಟಗಾರರು ಆಲೌಟ್ ಆದರು. ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಸೋಲುಂಡಿತು. ಈ ವಿಜಯಮಾಲೆಯೊಂದಿಗೆ ಟೀಮ್ ಇಂಡಿಯಾ ಏಷ್ಯಾಕಪ್ ಫೈನಲ್ಗೆ ಎಂಟ್ರಿಕೊಟ್ಟಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು