ಸೂರ್ಯಕುಮಾರ್ ಸೇನೆಗೆ ಮತ್ತೊಂದು ವಿಜಯಮಾಲೆ. ಏಷ್ಯಾಕಪ್ ಫೈನಲ್ ಗೇರಿದ ಟೀಮ್ ಇಂಡಿಯಾ

ಬಾಂಗ್ಲಾದೇಶದ ವಿರುದ್ಧ ನಡೆದ ಏಷ್ಯಾಕಪ್ನ ಸೂಪರ್-4 ಪಂದ್ಯದಲ್ಲಿ ಸೂರ್ಯಕುಮಾರ್ ನೇತೃತ್ವದ ಟೀಮ್ ಇಂಡಿಯಾ 41 ರನ್ಗಳಿಂದ ಭರ್ಜರಿ ಗೆಲುವು ದಾಖಲು ಮಾಡಿದೆ. ಈ ಮೂಲಕ ಏಷ್ಯಾಕಪ್ನಲ್ಲಿ ಸತತ ಐದು ಮ್ಯಾಚ್ಗಳಲ್ಲಿ ವಿಜಯಮಾಲೆ ಧರಿಸಿದೆ.

ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿ ಟೀಮ್ ಇಂಡಿಯಾವನ್ನು ಮೊದಲ ಬ್ಯಾಟಿಂಗ್ಗೆ ಆಹ್ವಾನ ಮಾಡಿತು. ಅದರಂತೆ ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಅಭಿಷೇಕ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್ಗಳ ಟಾರ್ಗೆಟ್ ಅನ್ನು ನೀಡಿತ್ತು.

ಇದಾದ ಮೇಲೆ ಗುರಿ ಬೆನ್ನತ್ತಿದ್ದ ಬಾಂಗ್ಲಾದೇಶ ಆರಂಭದಲ್ಲೇ ದೊಡ್ಡ ಆಘಾತಕ್ಕೆ ಒಳಗಾಯಿತು. ಓಪನರ್ ತಾಂಜಿದ್ ಹಸನ್ ತಮೀಮ್ ಕೇವಲ 1 ರನ್ಗೆ ಔಟ್ ಆದರು. ಇವರ ನಂತರ ಬಂದ ಪರ್ವೇಜ್ ಹೊಸೇನ್ ಎಮನ್, ಓಪನರ್ ಸೈಫ್ ಹಸನ್ಗೆ ಉತ್ತಮ ಸಾಥ್ ಕೊಟ್ಟು 21 ರನ್ ಗಳಿಸಿ ಔಟ್ ಆದರು. ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ್ದ ಸೈಫ್ ಹಸನ್ ಅರ್ಧಶತಕ ಬಾರಿಸಿ ಪಂದ್ಯದ ಕೊನೆವರೆಗೂ ಹೋರಾಟ ನಡೆಸಿದ್ದನು.

ಸೈಫ್ ಹಸನ್ ಕೊನೆವರೆಗೆ ಹೋರಾಟ ನಡೆಸಿ 51 ಎಸೆತಗಳಲ್ಲಿ 3 ಬೌಂಡರಿ ಹಾಗೂ 5 ಸಿಕ್ಸರ್ಗಳಿಂದ 69 ರನ್ ಗಳಿಸಿದರು. ತೋಹಿದ್ ಹೃದಯ್ 7, ಕ್ಯಾಪ್ಟನ್ ಜಾಕೀರ್ ಅಲಿ 4 ರನ್ ಬಿಟ್ಟರೇ ಉಳಿದ ಯಾವ ಬ್ಯಾಟರ್ ಕೂಡ 7 ರನ್ಗಳ ಗಡಿ ದಾಟಲಿಲ್ಲ. ಹೀಗಾಗಿ 19.3 ಓವರ್ಗಳಲ್ಲಿ ಕೇವಲ 127 ರನ್ಗೆ ಬಾಂಗ್ಲಾ ಆಟಗಾರರು ಆಲೌಟ್ ಆದರು. ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಸೋಲುಂಡಿತು. ಈ ವಿಜಯಮಾಲೆಯೊಂದಿಗೆ ಟೀಮ್ ಇಂಡಿಯಾ ಏಷ್ಯಾಕಪ್ ಫೈನಲ್ಗೆ ಎಂಟ್ರಿಕೊಟ್ಟಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!