ಅಪ್ಪುವಿನ ಅಪ್ಪುಗೆಯ ಫೋಟೋ ನೋಡಿ ಮದುವೆಯಲ್ಲಿ ಭಾವುಕರಾದ ಅನುಶ್ರೀ…!

ಸ್ಟಾರ್ ನಿರೂಪಕಿ ಅನುಶ್ರೀ ಬಹುಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ರೋಷನ್​ ಅವರು ಅನುಶ್ರೀ ಕೊರಳಿಗೆ ತಾಳಿ ಕಟ್ಟಿದ್ದಾರೆ.

 

ನಿರೂಪಕಿ, ನಟಿ ಅನುಶ್ರೀ ಅವರ ಮದುವೆ ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ. ಅದರಲ್ಲೂ ಒಂದು ಫೋಟೋ ಮಾತ್ರ ಅನುಶ್ರೀ ಹಾಗೂ ಅಭಿಮಾನಿಗಳು ಭಾವುಕರಾಗುವಂತೆ ಮಾಡಿದೆ. ಅದುವೆ ಪವರ್​ ಸ್ಟಾರ್​ ಪುನೀತ್ ರಾಜ್​ಕುಮಾರ್ ಫೋಟೋ.

ಹೌದು, ನಿರೂಪಕಿ ಅನುಶ್ರೀ ಆರತಕ್ಷತೆ ಕಾರ್ಯಕ್ರಮದಲ್ಲಿ ಅವರ ಸ್ನೇಹಿತರ ಗುಂಪೊಂದು ಫೋಟೋ ಫ್ರೇಮ್​ ಅನ್ನು ಕೊಟ್ಟಿದ್ದಾರೆ. ಆ ಫ್ರೇಮ್​ನಲ್ಲಿ ಅಪ್ಪು ಅವರು ಅನುಶ್ರೀ ಹಾಗೂ ರೋಷನ್​ ಅವರ ಮದುವೆ ಮಧ್ಯೆ

ನಿಂತುಕೊಂಡು ಫೋಟೋಗೆ ಫೋಸ್​ ಕೊಡುತ್ತಿರೋ ಹಾಗೇ ಕ್ರಿಯೇಟ್ ಮಾಡಲಾಗಿದೆ.

ಇದೇ ಫೋಟೋವನ್ನು ನೋಡಿದ ಅನುಶ್ರೀ ಅವರು ಕಣ್ಣೀರು ಹಾಕಿದ್ದಾರೆ. ಈ ಫೋಟೋ ಫ್ರೇಮ್​ ಅನ್ನು ಉಡುಗೊರೆ ನೀಡಿದ ಸ್ನೇಹಿತರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಇದೇ ಫೋಟೋ ನೋಡಿದ ಅಭಿಮಾನಿಗಳು ಕೂಡ ಸೋಷಿಯಲ್​ ಮೀಡಿಯಾದಲ್ಲಿ ಅಪ್ಪು ಅಜರಾಮರ, ನಗುಮುಖದ ಒಡೆಯ, ಅಪ್ಪು ಸದಾ ಜೀವಂತ ಅಂತ ಭಾವುಕರಾಗಿ ಕಾಮೆಂಟ್ಸ್​ ಮಾಡಿದ್ದಾರೆ.

ಅನುಶ್ರೀ ಮದುವೆ ಮಂಟಪದಲ್ಲಿ ಅಪ್ಪು ಫೋಟೋ..
ಅನುಶ್ರೀ ಅವರು ನಟ ಪುನೀತ್ ರಾಜ್​​ಕುಮಾರ್ ಅವರ ದೊಡ್ಡ ಅಭಿಮಾನಿ ಅಂತ ಎಲ್ಲರಿಗೂ ಗೊತ್ತಿದೆ. ಅನುಶ್ರೀ ಅವರು ಏನೇ ಶುಭ ಕಾರ್ಯ ಮಾಡಿದರೂ ಅಪ್ಪು ಅವರನ್ನು ನೆನೆಯುತ್ತಾ ಇರುತ್ತಾರೆ. ಅದರಂತೆ ತಮ್ಮ ಮದುವೆ ಸಮಾರಂಭದಲ್ಲೂ ಪುನೀತ್ ರಾಜ್​ಕುಮಾರ್ ಅವರ ಫೋಟೋವನ್ನು ಮಂಟಪದಲ್ಲಿ ಹಾಕಿಸಿ ಮೊದಲು ಅವರ ಆರ್ಶೀವಾದ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ‘ಅಪ್ಪು ಸರ್​ ರೋಷನ್ ಮತ್ತು ನನ್ನ ಸೇರಿಸಿದ್ದರು ಅಂತ ಕೂಡ ಹೇಳಿಕೊಂಡಿದ್ದರು.

ಇನ್ನೂ, ಅನುಶ್ರೀ ಅವರಿಗೆ ಗಿಫ್ಟ್ ಆಗಿ ಬಂದ ಫೋಟೋ​ದಲ್ಲಿ ಅಪ್ಪು ಅವರು ನಿಜವಾಗಲೂ ಮದುವೆಗೆ ಬಂದ ಹಾಗೇ ನೈಜತೆಯಿಂದ ಕೂಡಿದೆ. ಮುಖದಲ್ಲಿ ಅದೇ ನಗು, ಪಂಚೆ ಶರ್ಟ್ ಧರಿಸಿಕೊಂಡು ಅಪ್ಪು ಅವರು ಮಂದಹಾಸ ಬೀರುತ್ತಾ ಫೋಟೋಗೆ ಪೋಸ್​ ಕೊಟ್ಟಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು