ಅಪ್ಪುವಿನ ಅಪ್ಪುಗೆಯ ಫೋಟೋ ನೋಡಿ ಮದುವೆಯಲ್ಲಿ ಭಾವುಕರಾದ ಅನುಶ್ರೀ…!

ಸ್ಟಾರ್ ನಿರೂಪಕಿ ಅನುಶ್ರೀ ಬಹುಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ರೋಷನ್​ ಅವರು ಅನುಶ್ರೀ ಕೊರಳಿಗೆ ತಾಳಿ ಕಟ್ಟಿದ್ದಾರೆ.

 

ನಿರೂಪಕಿ, ನಟಿ ಅನುಶ್ರೀ ಅವರ ಮದುವೆ ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ. ಅದರಲ್ಲೂ ಒಂದು ಫೋಟೋ ಮಾತ್ರ ಅನುಶ್ರೀ ಹಾಗೂ ಅಭಿಮಾನಿಗಳು ಭಾವುಕರಾಗುವಂತೆ ಮಾಡಿದೆ. ಅದುವೆ ಪವರ್​ ಸ್ಟಾರ್​ ಪುನೀತ್ ರಾಜ್​ಕುಮಾರ್ ಫೋಟೋ.

ಹೌದು, ನಿರೂಪಕಿ ಅನುಶ್ರೀ ಆರತಕ್ಷತೆ ಕಾರ್ಯಕ್ರಮದಲ್ಲಿ ಅವರ ಸ್ನೇಹಿತರ ಗುಂಪೊಂದು ಫೋಟೋ ಫ್ರೇಮ್​ ಅನ್ನು ಕೊಟ್ಟಿದ್ದಾರೆ. ಆ ಫ್ರೇಮ್​ನಲ್ಲಿ ಅಪ್ಪು ಅವರು ಅನುಶ್ರೀ ಹಾಗೂ ರೋಷನ್​ ಅವರ ಮದುವೆ ಮಧ್ಯೆ

ನಿಂತುಕೊಂಡು ಫೋಟೋಗೆ ಫೋಸ್​ ಕೊಡುತ್ತಿರೋ ಹಾಗೇ ಕ್ರಿಯೇಟ್ ಮಾಡಲಾಗಿದೆ.

ಇದೇ ಫೋಟೋವನ್ನು ನೋಡಿದ ಅನುಶ್ರೀ ಅವರು ಕಣ್ಣೀರು ಹಾಕಿದ್ದಾರೆ. ಈ ಫೋಟೋ ಫ್ರೇಮ್​ ಅನ್ನು ಉಡುಗೊರೆ ನೀಡಿದ ಸ್ನೇಹಿತರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಇದೇ ಫೋಟೋ ನೋಡಿದ ಅಭಿಮಾನಿಗಳು ಕೂಡ ಸೋಷಿಯಲ್​ ಮೀಡಿಯಾದಲ್ಲಿ ಅಪ್ಪು ಅಜರಾಮರ, ನಗುಮುಖದ ಒಡೆಯ, ಅಪ್ಪು ಸದಾ ಜೀವಂತ ಅಂತ ಭಾವುಕರಾಗಿ ಕಾಮೆಂಟ್ಸ್​ ಮಾಡಿದ್ದಾರೆ.

ಅನುಶ್ರೀ ಮದುವೆ ಮಂಟಪದಲ್ಲಿ ಅಪ್ಪು ಫೋಟೋ..
ಅನುಶ್ರೀ ಅವರು ನಟ ಪುನೀತ್ ರಾಜ್​​ಕುಮಾರ್ ಅವರ ದೊಡ್ಡ ಅಭಿಮಾನಿ ಅಂತ ಎಲ್ಲರಿಗೂ ಗೊತ್ತಿದೆ. ಅನುಶ್ರೀ ಅವರು ಏನೇ ಶುಭ ಕಾರ್ಯ ಮಾಡಿದರೂ ಅಪ್ಪು ಅವರನ್ನು ನೆನೆಯುತ್ತಾ ಇರುತ್ತಾರೆ. ಅದರಂತೆ ತಮ್ಮ ಮದುವೆ ಸಮಾರಂಭದಲ್ಲೂ ಪುನೀತ್ ರಾಜ್​ಕುಮಾರ್ ಅವರ ಫೋಟೋವನ್ನು ಮಂಟಪದಲ್ಲಿ ಹಾಕಿಸಿ ಮೊದಲು ಅವರ ಆರ್ಶೀವಾದ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ‘ಅಪ್ಪು ಸರ್​ ರೋಷನ್ ಮತ್ತು ನನ್ನ ಸೇರಿಸಿದ್ದರು ಅಂತ ಕೂಡ ಹೇಳಿಕೊಂಡಿದ್ದರು.

ಇನ್ನೂ, ಅನುಶ್ರೀ ಅವರಿಗೆ ಗಿಫ್ಟ್ ಆಗಿ ಬಂದ ಫೋಟೋ​ದಲ್ಲಿ ಅಪ್ಪು ಅವರು ನಿಜವಾಗಲೂ ಮದುವೆಗೆ ಬಂದ ಹಾಗೇ ನೈಜತೆಯಿಂದ ಕೂಡಿದೆ. ಮುಖದಲ್ಲಿ ಅದೇ ನಗು, ಪಂಚೆ ಶರ್ಟ್ ಧರಿಸಿಕೊಂಡು ಅಪ್ಪು ಅವರು ಮಂದಹಾಸ ಬೀರುತ್ತಾ ಫೋಟೋಗೆ ಪೋಸ್​ ಕೊಟ್ಟಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!