ಸಂಭ್ರಮದಲ್ಲೂ ಅಪ್ಪು ಮರೆತಿಲ್ಲ ಅನುಶ್ರೀ …

ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಅವರು ತಾವು ಮದುವೆಯಾಗುತ್ತಿರುವ ಮಂಟಪದಲ್ಲಿ ಅಪ್ಪು ಫೋಟೋವನ್ನು ರಾರಾಜಿಸುವಂತೆ ಮಾಡಿದ್ದಾರೆ.

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10:56ರ ಶುಭ ಮೂಹೂರ್ತದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಮದುವೆ ಮಂಟಪದಲ್ಲಿ ಅಪ್ಪು ಫೋಟೋವೊಂದನ್ನು ಇರಿಸಿ, ಸುತ್ತಲೂ ಹೂವುಗಳಿಂದ ಅಲಂಕಾರ ಮಾಡಿದ್ದಾರೆ. ಈ ಮೂಲಕ ಅಪ್ಪು ಮೇಲಿನ ಪ್ರೀತಿಯನ್ನು ತೋರ್ಪಡಿಸಿದ್ದಾರೆ. ಈ ಹಿಂದೆಯೂ ಅಪ್ಪು ಬಗ್ಗೆ ನಟಿ ಅನುಶ್ರೀ ಮಾತನಾಡಿದ್ದರು. ಅಪ್ಪು ಸರ್ ನನಗೆ ತುಂಬಾ ಹತ್ತಿರ. ಸಿನಿಮಾ ಇಷ್ಟ ಪಡಲು ಶುರುವಾಗಿದ್ದ ದಿನದಿಂದ ಅವರು ನನಗೆ ತುಂಬಾ ಹತ್ತಿರವಾಗಿದ್ದಾರೆ. ನಾನು ಇಷ್ಟ ಪಡುವ ಏಕೈಕ ನಟ ಅಂದ್ರೆ ಅಪ್ಪು ಸರ್. ಅವರನ್ನು ಭೇಟಿಯಾದ ಮೇಲೆ ಅವರ ಗುಣ, ವ್ಯಕ್ತಿತ್ವಕ್ಕೆ ನಾನು ಅಭಿಮಾನಿಯಾದೆ ಎಂದು ಹಲವು ಭಾರೀ ಭಾವುಕರಾಗಿದ್ದರು.

ಗುರುವಾರ ಬೆಂಗಳೂರಿನ ಕಗ್ಗಲಿಪುರ ಬಳಿಯ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ನೆರವೇರಿದ್ದು, ನಟ ಶರಣ್, ಹಿರಿಯ ನಟಿ ಪ್ರೇಮ, ಡಾಲಿ ಧನಂಜಯ್, ಚೈತ್ರಾ ಆಚಾರ್, ನಾಗಭೂಷಣ, ಗಾಯಕ ವಿಜಯಪ್ರಕಾಶ್, ನಟ ವಿಜಯ ರಾಘವೇಂದ್ರ ಸೇರಿದಂತೆ ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!