85 ಮೆಟ್ರೋ ಸ್ಟೇಷನ್​ಗಳಲ್ಲೂ ಅಪರ್ಣಾದ್ದೇ ಧ್ವನಿ! ಯೆಲ್ಲೋ ಲೈನ್ ಗೂ ಬಂತು ಖ್ಯಾತ ನಿರೂಪಕಿ ಕಂಠ..

ಅಪರ್ಣಾ, ಯಾರಿಗೆತಾನೇ ಗೊತ್ತಿಲ್ಲ ಹೇಳಿ , ನಟಿ ಹಾಗೂ ನಿರೂಪಕಿಯಾಗಿ ಜಯಪ್ರಿಯತೆ ಪಡೆದವರು , ಅವರ ಸುಮಧುರ ಧ್ವನಿಯು ಬೆಂಗಳೂರಿನ ಹಸಿರು ಮತ್ತು ನೇರಳೆ ಮೆಟ್ರೋ ಮಾರ್ಗಗಳಲ್ಲಿ ಜನಪ್ರಿಯವಾಗಿತ್ತು. ಇದೀಗ ಹೊಸದಾಗಿ ಉದ್ಘಾಟನೆಯಾದ ಹಳದಿ ಮೆಟ್ರೋ ಮಾರ್ಗದಲ್ಲಿ ಸಹ ಇವರ ಧ್ವನಿಯನ್ನು ಬಳಸಲಾಗಿದೆ. ಅಪರ್ಣಾ ಕ್ಯಾನ್ಸರ್‌ನಿಂದ ಬಳಲುತ್ತಿದ್ದರೂ ತಮ್ಮ ಕೊನೆಯ ದಿನಗಳಲ್ಲಿ ಯೆಲ್ಲೋ ಲೈನ್ ನ ಮೆಟ್ರೋ ಅನ್ನೊನ್ಸಮೆಂಟ್ ರೆಕಾರ್ಡಿಂಗ್‌ ಮಾಡಿದ್ದರು. 2024ರ ಏಪ್ರಿಲ್-ಮೇ ನಲ್ಲಿ ಮೆಟ್ರೋದ ತಾಂತ್ರಿಕ ತಂಡ ಅಪರ್ಣಾ ಬಳಿ ತೆರೆಳಿ ಅವರ ಧ್ವನಿಯನ್ನು ರೆಕಾರ್ಡಿಂಗ್ ಮಾಡಿಕೊಂಡಿತ್ತು.

ಕಳೆದ ವರ್ಷ ಜುಲೈನಲ್ಲಿ ನಿಧನ ಹೊಂದಿದ್ದ ನಿರೂಪಕಿ ಅಪರ್ಣಾ ಅನಾರೋಗ್ಯ ದಿಂದ ಬಳಲುತ್ತಿದ್ದರು . ಕ್ಯಾನ್ಸರ್ ಮಧ್ಯೆಯೂ ಅಪರ್ಣಾ ತಮ್ಮ ಧ್ವನಿ ನೀಡಿ ಕರ್ತವ್ಯ ಮೆರೆದಿದ್ದಾರೆ.

ಹಳದಿ ಬಣ್ಣದ ಮಾರ್ಗ ಭಾನುವಾರ (ಆಗಸ್ಟ್ 10) ಉದ್ಘಾಟನೆಗೊಂಡಿತು. ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಆರ್​ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಈ ರೈಲು ಸಂಪರ್ಕ ಕಲ್ಪಿಸುತ್ತದೆ. ಒಟ್ಟೂ 16 ನಿಲ್ದಾಣಗಳನ್ನು ಈ ಮೆಟ್ರೋ ರೈಲು ಹಾದು ಹೋಗುತ್ತದೆ. ಈ ಮಾರ್ಗದಲ್ಲಿ ಅಪರ್ಣಾ ಧ್ವನಿ ಪ್ರತಿಧ್ವನಿಸಲಿದೆ.

 

ಅಪರ್ಣಾ ಧ್ವನಿ ತುಂಬಾನೇ ಸುಮಧುರವಾಗಿತ್ತು. ಅವರು ಆ್ಯಂಕರಿಂಗ್​ಗೆ ನಿಂತರೆ ಬಾಯಿಯಿಂದ ಮುತ್ತುಗಳು ಉದುರುತ್ತಿವೆ ಎಂದನಿಸುತ್ತಿತ್ತು. ಹಸಿರು ಹಾಗೂ ಪರ್ಪಲ್ ಲೈನ್ ಮೆಟ್ರೋಗೆ ಅಪರ್ಣಾ ಅವರೇ ಧ್ವನಿ ನೀಡಿದ್ದರು. ಇದು ಮೆಟ್ರೋದ ಹೈಲೈಟ್ ಕೂಡ ಆಗಿತ್ತು. ಹಳದಿ ಬಣ್ಣದ ಮೆಟ್ರೋಗೂ ಅವರದ್ದೇ ಧ್ವನಿ ಇರಬೇಕು ಎಂಬುದು ಕನ್ನಡಿಗರ ಆಸೆ ಆಗಿತ್ತು. ‘ಹಳೆಯ ಮಾರ್ಗದಲ್ಲಿ ಅಪರ್ಣಾ ಧ್ವನಿ ಮುಂದುವರಿಸುತ್ತೇವೆ. ಹಳದಿ ಬಣ್ಣಕ್ಕೆ ಕಷ್ಟ’ ಎಂದು ಮೆಟ್ರೋ ಅಧಿಕಾರಿಗಳು ಈ ಮೊದಲು ಹೇಳಿದ್ದರು. ಆದರೆ , ಇದೀಗ ಹಳದಿ ಲೈನ್ ಮೆಟ್ರೋಗೂ ಅಪರ್ಣಾ ಅವರ ಧ್ವನಿ ಮುಂದುವರೆದಿರುವುದು ಕನ್ನಡಿಗರಲ್ಲಿ ಸಂತಸ ತಂದಿದೆ .

ಸದ್ಯ ಹಸಿರು ಬಣ್ಣದ ಲೈನ್​ ನಾಗಸಂದ್ರದಿಂದ ಸಿಲ್ಕ್ ಇನ್ಸ್​ಟಿಟ್ಯೂಟ್​ವರೆಗೆ ಕಾರ್ಯ ನಿರ್ವಹಿಸುತ್ತಿದ್ದು, 32 ಮೆಟ್ರೋ ಸ್ಟೇಷನ್​ಗಳು ಇವೆ. ಪರ್ಪಲ್ ಲೈನ್​ ವೈಟ್ ಫೀಲ್ಡ್​​ನಿಂದ ಚೆಲ್ಲಘಟ್ಟದವರೆಗೆ ಕಾರ್ಯ ನಿರ್ವಹಿಸುತ್ತಿದ್ದು 37 ಮೆಟ್ರೋ ಸ್ಟೇಷನ್​ಗಳು ಇವೆ. ಈಗ ಹಳದಿ ಮೆಟ್ರೋ ಸೇರಿದರೆ 85 ಸ್ಟೇಷನ್​ಗಳಿದ್ದು , ಎಲ್ಲಾ ಸ್ಟೇಷನ್ ಗಳಲ್ಲೂ ಅಪರ್ಣಾ ಅವರದ್ದೇ ಧ್ವನಿ ಇರಲಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು