85 ಮೆಟ್ರೋ ಸ್ಟೇಷನ್​ಗಳಲ್ಲೂ ಅಪರ್ಣಾದ್ದೇ ಧ್ವನಿ! ಯೆಲ್ಲೋ ಲೈನ್ ಗೂ ಬಂತು ಖ್ಯಾತ ನಿರೂಪಕಿ ಕಂಠ..

ಅಪರ್ಣಾ, ಯಾರಿಗೆತಾನೇ ಗೊತ್ತಿಲ್ಲ ಹೇಳಿ , ನಟಿ ಹಾಗೂ ನಿರೂಪಕಿಯಾಗಿ ಜಯಪ್ರಿಯತೆ ಪಡೆದವರು , ಅವರ ಸುಮಧುರ ಧ್ವನಿಯು ಬೆಂಗಳೂರಿನ ಹಸಿರು ಮತ್ತು ನೇರಳೆ ಮೆಟ್ರೋ ಮಾರ್ಗಗಳಲ್ಲಿ ಜನಪ್ರಿಯವಾಗಿತ್ತು. ಇದೀಗ ಹೊಸದಾಗಿ ಉದ್ಘಾಟನೆಯಾದ ಹಳದಿ ಮೆಟ್ರೋ ಮಾರ್ಗದಲ್ಲಿ ಸಹ ಇವರ ಧ್ವನಿಯನ್ನು ಬಳಸಲಾಗಿದೆ. ಅಪರ್ಣಾ ಕ್ಯಾನ್ಸರ್‌ನಿಂದ ಬಳಲುತ್ತಿದ್ದರೂ ತಮ್ಮ ಕೊನೆಯ ದಿನಗಳಲ್ಲಿ ಯೆಲ್ಲೋ ಲೈನ್ ನ ಮೆಟ್ರೋ ಅನ್ನೊನ್ಸಮೆಂಟ್ ರೆಕಾರ್ಡಿಂಗ್‌ ಮಾಡಿದ್ದರು. 2024ರ ಏಪ್ರಿಲ್-ಮೇ ನಲ್ಲಿ ಮೆಟ್ರೋದ ತಾಂತ್ರಿಕ ತಂಡ ಅಪರ್ಣಾ ಬಳಿ ತೆರೆಳಿ ಅವರ ಧ್ವನಿಯನ್ನು ರೆಕಾರ್ಡಿಂಗ್ ಮಾಡಿಕೊಂಡಿತ್ತು.

ಕಳೆದ ವರ್ಷ ಜುಲೈನಲ್ಲಿ ನಿಧನ ಹೊಂದಿದ್ದ ನಿರೂಪಕಿ ಅಪರ್ಣಾ ಅನಾರೋಗ್ಯ ದಿಂದ ಬಳಲುತ್ತಿದ್ದರು . ಕ್ಯಾನ್ಸರ್ ಮಧ್ಯೆಯೂ ಅಪರ್ಣಾ ತಮ್ಮ ಧ್ವನಿ ನೀಡಿ ಕರ್ತವ್ಯ ಮೆರೆದಿದ್ದಾರೆ.

ಹಳದಿ ಬಣ್ಣದ ಮಾರ್ಗ ಭಾನುವಾರ (ಆಗಸ್ಟ್ 10) ಉದ್ಘಾಟನೆಗೊಂಡಿತು. ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಆರ್​ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಈ ರೈಲು ಸಂಪರ್ಕ ಕಲ್ಪಿಸುತ್ತದೆ. ಒಟ್ಟೂ 16 ನಿಲ್ದಾಣಗಳನ್ನು ಈ ಮೆಟ್ರೋ ರೈಲು ಹಾದು ಹೋಗುತ್ತದೆ. ಈ ಮಾರ್ಗದಲ್ಲಿ ಅಪರ್ಣಾ ಧ್ವನಿ ಪ್ರತಿಧ್ವನಿಸಲಿದೆ.

 

ಅಪರ್ಣಾ ಧ್ವನಿ ತುಂಬಾನೇ ಸುಮಧುರವಾಗಿತ್ತು. ಅವರು ಆ್ಯಂಕರಿಂಗ್​ಗೆ ನಿಂತರೆ ಬಾಯಿಯಿಂದ ಮುತ್ತುಗಳು ಉದುರುತ್ತಿವೆ ಎಂದನಿಸುತ್ತಿತ್ತು. ಹಸಿರು ಹಾಗೂ ಪರ್ಪಲ್ ಲೈನ್ ಮೆಟ್ರೋಗೆ ಅಪರ್ಣಾ ಅವರೇ ಧ್ವನಿ ನೀಡಿದ್ದರು. ಇದು ಮೆಟ್ರೋದ ಹೈಲೈಟ್ ಕೂಡ ಆಗಿತ್ತು. ಹಳದಿ ಬಣ್ಣದ ಮೆಟ್ರೋಗೂ ಅವರದ್ದೇ ಧ್ವನಿ ಇರಬೇಕು ಎಂಬುದು ಕನ್ನಡಿಗರ ಆಸೆ ಆಗಿತ್ತು. ‘ಹಳೆಯ ಮಾರ್ಗದಲ್ಲಿ ಅಪರ್ಣಾ ಧ್ವನಿ ಮುಂದುವರಿಸುತ್ತೇವೆ. ಹಳದಿ ಬಣ್ಣಕ್ಕೆ ಕಷ್ಟ’ ಎಂದು ಮೆಟ್ರೋ ಅಧಿಕಾರಿಗಳು ಈ ಮೊದಲು ಹೇಳಿದ್ದರು. ಆದರೆ , ಇದೀಗ ಹಳದಿ ಲೈನ್ ಮೆಟ್ರೋಗೂ ಅಪರ್ಣಾ ಅವರ ಧ್ವನಿ ಮುಂದುವರೆದಿರುವುದು ಕನ್ನಡಿಗರಲ್ಲಿ ಸಂತಸ ತಂದಿದೆ .

ಸದ್ಯ ಹಸಿರು ಬಣ್ಣದ ಲೈನ್​ ನಾಗಸಂದ್ರದಿಂದ ಸಿಲ್ಕ್ ಇನ್ಸ್​ಟಿಟ್ಯೂಟ್​ವರೆಗೆ ಕಾರ್ಯ ನಿರ್ವಹಿಸುತ್ತಿದ್ದು, 32 ಮೆಟ್ರೋ ಸ್ಟೇಷನ್​ಗಳು ಇವೆ. ಪರ್ಪಲ್ ಲೈನ್​ ವೈಟ್ ಫೀಲ್ಡ್​​ನಿಂದ ಚೆಲ್ಲಘಟ್ಟದವರೆಗೆ ಕಾರ್ಯ ನಿರ್ವಹಿಸುತ್ತಿದ್ದು 37 ಮೆಟ್ರೋ ಸ್ಟೇಷನ್​ಗಳು ಇವೆ. ಈಗ ಹಳದಿ ಮೆಟ್ರೋ ಸೇರಿದರೆ 85 ಸ್ಟೇಷನ್​ಗಳಿದ್ದು , ಎಲ್ಲಾ ಸ್ಟೇಷನ್ ಗಳಲ್ಲೂ ಅಪರ್ಣಾ ಅವರದ್ದೇ ಧ್ವನಿ ಇರಲಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!