‘ಕಾಂತಾರ’ದಲ್ಲಿ ಮಿಂಚಿದ್ದ ಅಪ್ಪು ಕೋಣ ಸಾವು : ಕಂಬಳದಲ್ಲಿ ಚಾಂಪಿಯನ್ ಆಗಿದ್ದ ಅಪ್ಪು .

ಕಾಂತಾರ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಪ್ಪು ಕೋಣ ನಿಧನ ಹೊಂದಿದೆ. ರಿಷಬ್ ಶೆಟ್ಟಿ ಅವರ ತರಬೇತಿಗೆ ಸಹಾಯ ಮಾಡಿದ ಈ ಕೋಣ, ಹಲವು ಕಂಬಳ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿತ್ತು. ಅಪ್ಪು ಕೋಣದ ಸಾವು ಕಂಬಳ ಪ್ರೇಮಿಗಳಿಗೆ ಬೇಸರ ಮೂಡಿಸಿದೆ. ಕಾಂತಾರ ಚಿತ್ರದ ಯಶಸ್ಸಿನಲ್ಲಿ ಅಪ್ಪು ಕೋಣದ ಪಾತ್ರ ಮಹತ್ವದ್ದಾಗಿತ್ತು.

‘ಕಾಂತಾರ’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಅನೇಕ ಕಲಾವಿದರು ಜನಪ್ರಿಯತೆ ಪಡೆದರು. ಈ ಸಿನಿಮಾದಲ್ಲಿ ಕರಾವಳಿಯ ಸಂಪ್ರದಾಯದ ಬಗ್ಗೆ ಹೇಳಲಾಗಿತ್ತು. ದಕ್ಷಿಣ ಕನ್ನಡದ ಜನತೆಯ ಉಸಿರಿನ ಜೊತೆ ಬೆರೆತು ಹೋದ ಕಂಬಳದ ದೃಶ್ಯಗಳೂ ಇದ್ದವು. ಈ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಸಾವನ್ನಪ್ಪಿದೆ. ಅಪ್ಪು ಕೋಣದ ಮಾಲೀಕರು ಹಾಗೂ ಕಂಬಳ ಪ್ರಿಯರಿಗೆ ಈ ವಿಚಾರ ಬೇಸರ ಮೂಡಿಸಿದೆ.

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಹೀರೋ ಆಗಿ ಮಿಂಚಿದ್ದರು. ಈ ಚಿತ್ರದ ನಿರ್ದೇಶನ ಕೂಡ ಅವರದ್ದೇ. ಅವರು ಈ ಸಿನಿಮಾಗಾಗಿ ಕಷ್ಟಪಟ್ಟು ಕಂಬಳ ಓಡಿಸೋದನ್ನು ಕಲಿತಿದ್ದರು. ಇದಕ್ಕಾಗಿ ಬೈಂದೂರು ಬೊಳಂಬಳ್ಳಿಯ ಕಂಬಳ ಪ್ರೇಮಿ ಪರಮೇಶ್ವರ ಭಟ್ ಅವರು ಸಾಕಿದ್ದ ಕೋಣ ಬಳಕೆ ಆಗಿತ್ತು. ಈ ಕೋಣಗಳಿಗೆ ಅಪ್ಪು ಹಾಗೂ ಕಾಲಾ ಎಂದು ಹೆಸರು ಇಡಲಾಗಿತ್ತು. ಈ ಪೈಕಿ ಅಪ್ಪು ಕೋಣ ನಿಧನ ಹೊಂದಿದೆ.

ಚಿತ್ರೀಕರಣಕ್ಕೂ ಮೊದಲಿನಿಂದಲೇ ಅಪ್ಪು ಮತ್ತು ಕಾಲಾ ಕೋಣಗಳ ಮೂಲಕ ರಿಷಬ್ ತಬೇತಿ ಪಡೆದಿದ್ದರು. ಇವುಗಳ ಜೊತೆ ರಿಷಬ್​ಗೆ ಆಪ್ತತೆ ಬೆಳೆದಿತ್ತು. ಆ ಬಳಿಕ ಸಿನಿಮಾಗಳಲ್ಲೂ ಕೋಣಗಳು ಕಾಣಿಸಿಕೊಂಡಿದ್ದವು. ಈ ಪೈಕಿ ಒಂದು ಕೋಣ ನಿಧನ ಹೊಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಪ್ರಶಸ್ತಿಗಳ ಸರಮಾಲೆ..
ಸಿನಿಮಾಗಳಲ್ಲಿ ಮಾತ್ರ ಅಪ್ಪು ಹಾಗೂ ಕಾಲಾ ಕೋಣಗಳು ಚಾಂಪಿಯನ್ ಅಲ್ಲ, ನಿಜ ಜೀವನದಲ್ಲೂ ಇವು ಸಾಕಷ್ಟು ಅವಾರ್ಡ್ ಗೆದ್ದಿವೆ. ನೇಗಿಲು ಜೂನಿಯರ್ ವಿಭಾಗದಲ್ಲಿ ಎರಡು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಕುಂದಾಪುರ ಭಾಗದಲ್ಲಿ ನಡೆಯುವ ಕಂಬಳದಲ್ಲಿ 5 ವರ್ಷ ಈ ಕೋಣಗಳು ಚಾಂಪಿಯನ್ ಆಗಿದ್ದವು. ಬೆಂಗಳೂರು ಕಂಬಳದಲ್ಲೂ ಕನೆಹಲಗೆ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಪಡೆದಿದ್ದವು. ಕರಾವಳಿಯ ಬಹುತೇಕ ಕಂಬಳಗಳಲ್ಲಿ ಕೀರ್ತಿ-ಬಹುಮಾನ ಸಂಪಾದಿಸಿದ್ದ ಅಪ್ಪು ಕೋಣ ಈಗ ಅಗಲಿದೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!