ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದೀರಾ ಹುಷಾರ್ : ನಿಮ್ಮ ಮನೆ ಮುಂದೆಯೇ ಬೀಳಲಿದೆ ರಾಶಿ ರಾಶಿ ತ್ಯಾಜ್ಯ!

ಸಾಕಷ್ಟು ಜನ ಜಾಗೃತಿ ಬಳಿಕವೂ ಬೆಂಗಳೂರು ನಗರದಲ್ಲಿ ಖುಷಿ ಬಂದಂತೆ ಕಸ ಎಸೆದು ಹೋಗುವ ಪ್ರಕರಣಗಳು ನಿಂತಿಲ್ಲ. ಹೀಗಾಗಿ ಈ ವಿಚಾರದಲ್ಲಿ ಒಂದಿಷ್ಟು ಕಠಿಣ ಕ್ರಮಗಳನ್ನ ಕೈಗೊಳ್ಳಲು ಗ್ರೇಟರ್​ ಬೆಂಗಳೂರು ಪ್ರಾಧಿಕಾರ ನಿರ್ಧರಿಸಿದೆ. ಕಸ ಎಸೆಯುವವರ ಮನೆ ಬಾಗಿಲಲ್ಲೇ ಲೋಡ್​ಗಟ್ಟಲೆ ಕಸ ಸುರಿಯಲು ತೀರ್ಮಾನಿಸಿದೆ. ಜೊತೆಗೆ ದಂಡವನ್ನೂ ವಿಧಿಸಲಿದೆ.

ಬೆಂಗಳೂರು: ಎಲ್ಲೆಂದರಲ್ಲಿ ಕಸ ಎಸೆಯೋ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಿದ್ದಾರೆ ನಿಮ್ಮ ಮನೆ ಮುಂದೆಯೇ ಇನ್ನು ಲೋಡ್​ಗಟ್ಟಲೆ ಕಸ ಬಂದು ಬೀಳಲಿದೆ. ಹೌದು, ಸಾಕಷ್ಟು ಜನಜಾಗೃತಿ ಬಳಿಕವೂ ಹಲವು ಮಂದಿ ತಮಗೆ ಖುಷಿ ಬಂದಲ್ಲಿ ಕಸ ಎಸೆದು ಹೋಗುವ ಅಭ್ಯಾಸ ಮುಂದುವರಿಸಿದ್ದಾರೆ. ಇಂತಹ ಪ್ರಕರಣಗಳ ಕಡಿವಾಣಕ್ಕೆ ಮುಂದಾಗಿರುವ ಗ್ರೇಟರ್​ ಬೆಂಗಳೂರು ಪ್ರಾಧಿಕಾರ (GBA) ಇಂತಹದ್ದೊಂದು ಕಠಿಣ ಕ್ರಮಕ್ಕೆ ಮುಂದಾಗಿದೆ. ಕಸ ಎಸೆಯುವವರ ಮನೆ ಮುಂದೆಯೇ ಕಸ ಸುರಿಯುವ ಜೊತೆಗೆ ದಂಡ ವಿಧಿಸಲು ತೀರ್ಮಾನಿಸಿದೆ.

 

ಕಸ ಎಸೆದು ಹೋಗುವುದನ್ನು ಮೊದಲು ಮಾರ್ಷಲ್​ಗಳು ವಿಡಿಯೋ ಮಾಡಿಕೊಳ್ಳಲಿದ್ದಾರೆ. ಆ ಬಳಿಕ ಅಂತವರ ಮನೆಗಳನ್ನು ಶೀಘ್ರ ಪತ್ತೆಮಾಡಿ ಅವರ ಮನೆ ಮುಂದೆಯೇ ಕಸ ಸುರಿಯಲಾಗುತ್ತೆ. ಇಷ್ಟೇ ಅಲ್ಲ, ಮನೆ ಮುಂದೆ ಸರಿಯಲಾದ ಕಸದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಲೂ ತೀರ್ಮಾನಿಸಲಾಗಿದ್ದು, ಆ ಮೂಲಕ ಕಸ ಎಸೆಯುವವರನ್ನು ಜಗಜ್ಜಾಹೀರಗೊಳಿಸಲು ಜಿಬಿಎ ಮುಂದಾಗಿದೆ. ವಿಂಗಡಣೆ ಮಾಡದ ತ್ಯಾಜ್ಯ, ಪ್ಲ್ಯಾಸ್ಟಿಕ್​ ಮತ್ತು ಬಾಕ್ಸ್​ಗಳನ್ನ ಎಸೆದು ಹೋಗುವವರ ವಿಡಿಯೋಗಳನ್ನ ದಾಖಲಿಸುವ ಕೆಲಸ ಈಗಾಗಲೇ ಆರಂಭವಾಗಿದ್ದು, ಕಳೆದ ಒಂದು ವಾರದಿಂದ ಈ ಬಗ್ಗೆ ಮಾರ್ಷಲ್​ಗಳು ಕಾರ್ಯನಿರತರಾಗಿದ್ದಾರೆ. ಕಸ ಎಸೆದು ಹೋಗುವವರ ಮನೆಗಳನ್ನ ಸ್ಥಳೀಯ ಪೊಲೀಸರ ಜೊತೆಗೆ ಮಾರ್ಷಲ್​ಗಳು ತಲುಪಲಿದ್ದು, ಅವರ ಮನೆ ಬಾಗಿಲಲ್ಲೇ ಕಸದ ಲೋಡ್​ ಅನ್ನು ಹಾಕಲಾಗುತ್ತೆ. ಇದರ ಜೊತೆಗೆ ದಂಡವನ್ನೂ ವಿಧಿಸಲು ತೀರ್ಮಾನಿಸಲಾಗಿದೆ.

2-10 ಸಾವಿರ ರೂ.ವರೆಗೆ ದಂಡ
ಮನೆಮುಂದೆ ಸುರಿಯಲಾದ ಕಸವನ್ನ ಕೆಲ ಗಂಟೆಗಳ ಬಳಿಕ ತೆರವು ಮಾಡಲಾಗುತ್ತದೆ. ಆದರೆ 2 ರಿಂದ 10 ಸಾವಿರ ರೂಪಾಯಿಗಳ ವರೆಗಿನ ದಂಡವನ್ನು ಎಲ್ಲೆಂದರಲ್ಲಿ ಕಸ ಹಾಕುವವರು ಪಾವತಿಸಬೇಕು. ಈ ಬಗ್ಗೆ ತಕರಾರು, ವಾದ ಮಾಡುವಂತೆಯೂ ಇಲ್ಲ. ನಾವು ಕಸ ಎಸೆದಿಲ್ಲ ಎಂದರೂ ಮಾರ್ಷಲ್​ ಗಳು ಅದಾಗಲೇ ಸೆರೆ ಹಿಡಿದ ನೀವು ಕಸ ಎಸೆಯುವ ವಿಡಿಯೋ ತೋರಿಸಲಿದ್ದಾರೆ. ಜನ ಜಾಗೃತಿ ಕೆಲಸಗಳ ಮೂಲಕ ನಗರದಲ್ಲಿದ್ದ 869 ಬ್ಲ್ಯಾಕ್​ ಸ್ಪಾಟ್​ಗಳನ್ನ 150ಕ್ಕೆ ಇಳಿಸುವಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ ಈಗಾಗಲೇ ಸಫಲವಾಗಿದೆ. ಈ ನಡುವೆ ನಗರವನ್ನು ಸ್ವಚ್ಛವಾಗಿ ಇರಿಸುವಂತೆ ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್​ ಕೂಡ ಸೂಚನೆ ನೀಡಿದ್ದಾರೆ. ಹೀಗಾಗಿ ಕಸ ಎಸೆಯುವವರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದ್ದೇವೆ ಎಂದು BSWML ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕರೀಗೌಡ ತಿಳಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು