ಇಬ್ಬರಿಗೆ ‘ಅರ್ಜುನ ಆನೆ’ ವಾರ್ಷಿಕ ಪ್ರಶಸ್ತಿ ಪ್ರಕಟ: ಗಜಪಯಣದಲ್ಲಿ ಪ್ರದಾನ.

ಬೀದರ್ : ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ನಾಡಿದ್ದು (ಆ.4) ಗಜಪಯಣದ ವೇಳೆ ಮಾವುತ / ಸಿಬ್ಬಂದಿಗೆ ಪ್ರಥಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬೀದರ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ಅವರು, ನಾಡಿದ್ದು ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಗಜ ಪಯಣದ ಸಂದರ್ಭದಲ್ಲಿ ಹಾಸನ, ಸಕಲೇಶಪುರ, ಕೊಡಗು ಮೊದಲಾದ ಕಡೆಗಳಲ್ಲಿ ಆನೆ ಮತ್ತು ವನ್ಯಜೀವಿ ಸೆರೆ ಕಾರ್ಯಚರಣೆಗಳಲ್ಲಿ ಯಶಸ್ವಿಯಾಗಿ ಭಾಗಿಯಾಗಿರುವ ಭೀಮ ಆನೆಯ ಮಾವುತ ಗುಂಡ ಹಾಗೂ ಕವಾಡಿ ನಂಜುಂಡಸ್ವಾಮಿ ಅವರಿಗೆ 2025ರ ಸಾಲಿನ “ಅರ್ಜುನ ಆನೆ” ಪ್ರಶಸ್ತಿ ನೀಡಲು 2025ರ ದಸರಾ ಆನೆಗಳ ಆಯ್ಕೆ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಎಚ್.ಡಿ. ಕೋಟೆ ಶಾಸಕ ಅನಿಲ್ ಕುಮಾರ್ ಸಿ ಅವರು ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸುವ ಸಲಹೆ ನೀಡಿದ್ದರು. ಈ ಸಲಹೆ ಪುರಸ್ಕರಿಸಿ, ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ಹಾಗೂ ವನ್ಯಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಚರಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಕಾರ್ಯಚರಣೆಯನ್ನು ಯಶಸ್ವಿಗೊಳಿಸಿರುವ ಹಾಗೂ ಸೆರೆಹಿಡಿಯುವ ಆನೆಗಳನ್ನು ಪಳಗಿಸಿ ಆರೈಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಾವುತ/ಸಿಬ್ಬಂದಿಗಳನ್ನು ಗುರುತಿಸಿ ಪ್ರತಿವರ್ಷ ನಡೆಯುವ ಗಜಪಯಣದ ಸಂದರ್ಭದಲ್ಲಿ “ಅರ್ಜುನ ಆನೆ” ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದರು.

1968ರಲ್ಲಿ ಕಾಕನಕೋಟೆಯಲ್ಲಿ ನಡೆದ ಖೆಡ್ಡಾ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ 22 ಬಾರಿ ಜಂಬೂಸವಾರಿಯಲ್ಲಿ ಭಾಗಿಯಾಗಿ, 8 ಬಾರಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು, ದೇಶದ ಜನರ ಮನ ಗೆದ್ದಿದ್ದ. ಅರಣ್ಯ ಸಿಬ್ಬಂದಿಯ ಪ್ರಾಣ ಉಳಿಸಲು ಪ್ರಾಣತ್ಯಾಗ ಮಾಡಿದ ಅರ್ಜುನನ ಹೆಸರು ಚಿರಸ್ಥಾಯಿಯಾಗಿ ಉಳಿಯುವಂತೆ ಈ ಪ್ರಶಸ್ತಿ ಸ್ಥಾಪಿಸಲಾಗಿದೆ ಎಂದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!