ಇಬ್ಬರಿಗೆ ‘ಅರ್ಜುನ ಆನೆ’ ವಾರ್ಷಿಕ ಪ್ರಶಸ್ತಿ ಪ್ರಕಟ: ಗಜಪಯಣದಲ್ಲಿ ಪ್ರದಾನ.

ಬೀದರ್ : ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ನಾಡಿದ್ದು (ಆ.4) ಗಜಪಯಣದ ವೇಳೆ ಮಾವುತ / ಸಿಬ್ಬಂದಿಗೆ ಪ್ರಥಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬೀದರ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ಅವರು, ನಾಡಿದ್ದು ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಗಜ ಪಯಣದ ಸಂದರ್ಭದಲ್ಲಿ ಹಾಸನ, ಸಕಲೇಶಪುರ, ಕೊಡಗು ಮೊದಲಾದ ಕಡೆಗಳಲ್ಲಿ ಆನೆ ಮತ್ತು ವನ್ಯಜೀವಿ ಸೆರೆ ಕಾರ್ಯಚರಣೆಗಳಲ್ಲಿ ಯಶಸ್ವಿಯಾಗಿ ಭಾಗಿಯಾಗಿರುವ ಭೀಮ ಆನೆಯ ಮಾವುತ ಗುಂಡ ಹಾಗೂ ಕವಾಡಿ ನಂಜುಂಡಸ್ವಾಮಿ ಅವರಿಗೆ 2025ರ ಸಾಲಿನ “ಅರ್ಜುನ ಆನೆ” ಪ್ರಶಸ್ತಿ ನೀಡಲು 2025ರ ದಸರಾ ಆನೆಗಳ ಆಯ್ಕೆ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಎಚ್.ಡಿ. ಕೋಟೆ ಶಾಸಕ ಅನಿಲ್ ಕುಮಾರ್ ಸಿ ಅವರು ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸುವ ಸಲಹೆ ನೀಡಿದ್ದರು. ಈ ಸಲಹೆ ಪುರಸ್ಕರಿಸಿ, ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ಹಾಗೂ ವನ್ಯಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಚರಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಕಾರ್ಯಚರಣೆಯನ್ನು ಯಶಸ್ವಿಗೊಳಿಸಿರುವ ಹಾಗೂ ಸೆರೆಹಿಡಿಯುವ ಆನೆಗಳನ್ನು ಪಳಗಿಸಿ ಆರೈಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಾವುತ/ಸಿಬ್ಬಂದಿಗಳನ್ನು ಗುರುತಿಸಿ ಪ್ರತಿವರ್ಷ ನಡೆಯುವ ಗಜಪಯಣದ ಸಂದರ್ಭದಲ್ಲಿ “ಅರ್ಜುನ ಆನೆ” ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದರು.

1968ರಲ್ಲಿ ಕಾಕನಕೋಟೆಯಲ್ಲಿ ನಡೆದ ಖೆಡ್ಡಾ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ 22 ಬಾರಿ ಜಂಬೂಸವಾರಿಯಲ್ಲಿ ಭಾಗಿಯಾಗಿ, 8 ಬಾರಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು, ದೇಶದ ಜನರ ಮನ ಗೆದ್ದಿದ್ದ. ಅರಣ್ಯ ಸಿಬ್ಬಂದಿಯ ಪ್ರಾಣ ಉಳಿಸಲು ಪ್ರಾಣತ್ಯಾಗ ಮಾಡಿದ ಅರ್ಜುನನ ಹೆಸರು ಚಿರಸ್ಥಾಯಿಯಾಗಿ ಉಳಿಯುವಂತೆ ಈ ಪ್ರಶಸ್ತಿ ಸ್ಥಾಪಿಸಲಾಗಿದೆ ಎಂದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!