ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

 

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಆರು ಸರ್ಕಾರಿ ಅಧಿಕಾರಿಗಳು ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ

ಬಂಧಿತ ಆರೋಪಿಗಳನ್ನು ಉಪ ತಹಶೀಲ್ದಾರ್‌ಗಳಾದ ದೀಪಕ್ ಮತ್ತು ಎಂ.ಪಿ. ರವಿ ಕಂದಾಯ ನಿರೀಕ್ಷಕರಾದ ಕಿರಣ್ ಕುಮಾರ್ ಮತ್ತು ಅರುಣ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿಗಳಾದ ಶಿವಪ್ರಸಾದ್ ಮತ್ತು ಸತೀಶ್ ಕುಮಾರ್ ಹಾಗೂ ಫ್ರಾನ್ಸಿಸ್, ಆರೋಗ್ಯಸ್ವಾಮಿ, ಶ್ರೀನಿವಾಸು, ನರೇಂದ್ರ ಕುಮಾರ್, ಜೋಸೆಫ್ ಎಂದು ಗುರುತಿಸಲಾಗಿದೆ.100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಈ ಆರು ಎಕರೆ ಭೂಮಿ, ಕೆಂಗೇರಿಯ ಕಂಬಿಪುರ ಗ್ರಾಮದ ಸರ್ವೆ ಸಂಖ್ಯೆ 43 ರಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಒಡೆತನದ 45 ಎಕರೆ ಆಸ್ತಿಯ ಭಾಗವಾಗಿದೆ. ಇದನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅದನ್ನು ಕಬಳಿಸಲು ಯತ್ನಿಸಿದ್ದಾರೆ ಎಂದು ಅವರು ಹೇಳಿದರು.

 

ಕೆಂಗೇರಿ ಹೋಬಳಿಯ ಕಂಬಿಪುರ ಗ್ರಾಮದ ಸರ್ವೆ ನಂಬರ್ 43ರಲ್ಲಿ 45 ಎಕರೆ ಜಮೀನು ಗುತ್ತಿಗೆ ಆಧಾರದಲ್ಲಿ 2004ರಲ್ಲಿ ಕಂದಾಯ ಇಲಾಖೆಯಿಂದ ಮಂಜೂರು ಮಾಡಿಸಿಕೊಳ್ಳಲಾಗಿತ್ತು. 45 ಎಕರೆಗಳ ಪೈಕಿ 35 ಎಕರೆ ಜಾಗವನ್ನು ಶೈಕ್ಷಣಿಕ ಉದ್ದೇಶಕ್ಕಾಗಿ 2018ರಲ್ಲಿ ಸರ್ಕಾರದಿಂದ ಖರೀದಿಸಲಾಗಿತ್ತು. ಉಳಿದ 10 ಎಕರೆ ಜಾಗವನ್ನು ಗೋಶಾಲೆಗಾಗಿ ಮೀಸಲಿರಿಸಲಾಗಿತ್ತು. ಈ ವೇಳೆ ಫ್ರಾನ್ಸಿಸ್ ಎಂಬಾತ 6 ಎಕರೆ ಜಾಗವು ತನ್ನ ತಂದೆ ಆರೋಗ್ಯ ಸ್ವಾಮಿಗೆ ಸೇರಿದೆ ಎಂದು ತಕರಾರು ತೆಗೆದಿದ್ದ. ಜಮೀನಿಗೆ ವಾರಸುದಾರನಂತೆ ಬಿಂಬಿಸಿಕೊಂಡು ನಕಲಿ ಮರಣ ಪ್ರಮಾಣಪತ್ರ ಸೇರಿದಂತೆ ಇನ್ನಿತರೆ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ನ್ಯಾಯಾಲಯಕ್ಕೆ ಸುಳ್ಳು ದಾವೆ ಹೂಡಿ ಆದೇಶ ಪಡೆದುಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದಾಗ ಆರೋಪಿಗಳು ಭೂಮಿ ಕಬಳಿಸಲು ಯತ್ನಿಸಿರುವುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

ಶ್ರೀರಂಗಪಟ್ಟಣದಲ್ಲಿ ಬೃಹತ್ ಭೂ ಹಗರಣ: ಬರೋಬ್ಬರಿ 200 ಎಕರೆ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ; 9 ಜನರ ಬಂಧನ!
“ಫ್ರಾನ್ಸಿಸ್ ಆರೋಗ್ಯಸ್ವಾಮಿ ಅವರ ಮಗ ಮತ್ತು ಕಾನೂನುಬದ್ಧ ಉತ್ತರಾಧಿಕಾರಿ ಎಂದು ಹೇಳಿಕೊಂಡು ನಕಲಿ ವಂಶವೃಕ್ಷ, ಮರಣ ಪ್ರಮಾಣಪತ್ರ, ಅನುದಾನ ಪ್ರಮಾಣಪತ್ರ ಮತ್ತು ಇತರ ಕಂದಾಯ ದಾಖಲೆಗಳು ಸೇರಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ” ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಆರೋಪಿ ಫ್ರಾನ್ಸಿಸ್ ತನ್ನೊಂದಿಗೆ ತಂಡ ರಚಿಸಿಕೊಂಡು ಬೆಂಗಳೂರು ಸುತ್ತಮುತ್ತಲಿನ ಬೆಲೆಬಾಳುವ ಜಮೀನು ಕಬಳಿಸಲು ಯತ್ನಿಸಿರುವ ಶಂಕೆ ಇದೆ. ಈ ಬಗ್ಗೆ ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದುನೈರುತ್ಯ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರ್ ತಿಳಿಸಿದ್ದಾರೆ.

 

Related Posts

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

You Missed

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ!

KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ!

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್