ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

 

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಆರು ಸರ್ಕಾರಿ ಅಧಿಕಾರಿಗಳು ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ

ಬಂಧಿತ ಆರೋಪಿಗಳನ್ನು ಉಪ ತಹಶೀಲ್ದಾರ್‌ಗಳಾದ ದೀಪಕ್ ಮತ್ತು ಎಂ.ಪಿ. ರವಿ ಕಂದಾಯ ನಿರೀಕ್ಷಕರಾದ ಕಿರಣ್ ಕುಮಾರ್ ಮತ್ತು ಅರುಣ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿಗಳಾದ ಶಿವಪ್ರಸಾದ್ ಮತ್ತು ಸತೀಶ್ ಕುಮಾರ್ ಹಾಗೂ ಫ್ರಾನ್ಸಿಸ್, ಆರೋಗ್ಯಸ್ವಾಮಿ, ಶ್ರೀನಿವಾಸು, ನರೇಂದ್ರ ಕುಮಾರ್, ಜೋಸೆಫ್ ಎಂದು ಗುರುತಿಸಲಾಗಿದೆ.100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಈ ಆರು ಎಕರೆ ಭೂಮಿ, ಕೆಂಗೇರಿಯ ಕಂಬಿಪುರ ಗ್ರಾಮದ ಸರ್ವೆ ಸಂಖ್ಯೆ 43 ರಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಒಡೆತನದ 45 ಎಕರೆ ಆಸ್ತಿಯ ಭಾಗವಾಗಿದೆ. ಇದನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅದನ್ನು ಕಬಳಿಸಲು ಯತ್ನಿಸಿದ್ದಾರೆ ಎಂದು ಅವರು ಹೇಳಿದರು.

 

ಕೆಂಗೇರಿ ಹೋಬಳಿಯ ಕಂಬಿಪುರ ಗ್ರಾಮದ ಸರ್ವೆ ನಂಬರ್ 43ರಲ್ಲಿ 45 ಎಕರೆ ಜಮೀನು ಗುತ್ತಿಗೆ ಆಧಾರದಲ್ಲಿ 2004ರಲ್ಲಿ ಕಂದಾಯ ಇಲಾಖೆಯಿಂದ ಮಂಜೂರು ಮಾಡಿಸಿಕೊಳ್ಳಲಾಗಿತ್ತು. 45 ಎಕರೆಗಳ ಪೈಕಿ 35 ಎಕರೆ ಜಾಗವನ್ನು ಶೈಕ್ಷಣಿಕ ಉದ್ದೇಶಕ್ಕಾಗಿ 2018ರಲ್ಲಿ ಸರ್ಕಾರದಿಂದ ಖರೀದಿಸಲಾಗಿತ್ತು. ಉಳಿದ 10 ಎಕರೆ ಜಾಗವನ್ನು ಗೋಶಾಲೆಗಾಗಿ ಮೀಸಲಿರಿಸಲಾಗಿತ್ತು. ಈ ವೇಳೆ ಫ್ರಾನ್ಸಿಸ್ ಎಂಬಾತ 6 ಎಕರೆ ಜಾಗವು ತನ್ನ ತಂದೆ ಆರೋಗ್ಯ ಸ್ವಾಮಿಗೆ ಸೇರಿದೆ ಎಂದು ತಕರಾರು ತೆಗೆದಿದ್ದ. ಜಮೀನಿಗೆ ವಾರಸುದಾರನಂತೆ ಬಿಂಬಿಸಿಕೊಂಡು ನಕಲಿ ಮರಣ ಪ್ರಮಾಣಪತ್ರ ಸೇರಿದಂತೆ ಇನ್ನಿತರೆ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ನ್ಯಾಯಾಲಯಕ್ಕೆ ಸುಳ್ಳು ದಾವೆ ಹೂಡಿ ಆದೇಶ ಪಡೆದುಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದಾಗ ಆರೋಪಿಗಳು ಭೂಮಿ ಕಬಳಿಸಲು ಯತ್ನಿಸಿರುವುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

ಶ್ರೀರಂಗಪಟ್ಟಣದಲ್ಲಿ ಬೃಹತ್ ಭೂ ಹಗರಣ: ಬರೋಬ್ಬರಿ 200 ಎಕರೆ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ; 9 ಜನರ ಬಂಧನ!
“ಫ್ರಾನ್ಸಿಸ್ ಆರೋಗ್ಯಸ್ವಾಮಿ ಅವರ ಮಗ ಮತ್ತು ಕಾನೂನುಬದ್ಧ ಉತ್ತರಾಧಿಕಾರಿ ಎಂದು ಹೇಳಿಕೊಂಡು ನಕಲಿ ವಂಶವೃಕ್ಷ, ಮರಣ ಪ್ರಮಾಣಪತ್ರ, ಅನುದಾನ ಪ್ರಮಾಣಪತ್ರ ಮತ್ತು ಇತರ ಕಂದಾಯ ದಾಖಲೆಗಳು ಸೇರಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ” ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಆರೋಪಿ ಫ್ರಾನ್ಸಿಸ್ ತನ್ನೊಂದಿಗೆ ತಂಡ ರಚಿಸಿಕೊಂಡು ಬೆಂಗಳೂರು ಸುತ್ತಮುತ್ತಲಿನ ಬೆಲೆಬಾಳುವ ಜಮೀನು ಕಬಳಿಸಲು ಯತ್ನಿಸಿರುವ ಶಂಕೆ ಇದೆ. ಈ ಬಗ್ಗೆ ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದುನೈರುತ್ಯ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರ್ ತಿಳಿಸಿದ್ದಾರೆ.

 

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

You Missed

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳದ ಭೀಕರ ಪ್ರವಾಹಕ್ಕೆ ಚೀನಾದ ಗಡಿ ನಿರ್ಮಾಣ ಕಾರ್ಯವೇ ಕಾರಣವೇ?

ನೇಪಾಳದ ಭೀಕರ ಪ್ರವಾಹಕ್ಕೆ ಚೀನಾದ ಗಡಿ ನಿರ್ಮಾಣ ಕಾರ್ಯವೇ ಕಾರಣವೇ?

ಈರುಳ್ಳಿ ಅಭಾವ ಮತ್ತು ಬೆಲೆ ಏರಿಕೆ ಭೀತಿ

ಈರುಳ್ಳಿ ಅಭಾವ ಮತ್ತು ಬೆಲೆ ಏರಿಕೆ ಭೀತಿ

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!