ವಾಲ್ಪಾರೈ ಅರಣ್ಯ ಪ್ರದೇಶದಲ್ಲಿ ಆನೆದಂತ ಮಾರಾಟಕ್ಕೆ ಯತ್ನ: ಅರಣ್ಯ ಸಿಬ್ಬಂದಿ ಸೇರಿ ಐವರ ಬಂಧನ.

ಕೊಯಮತ್ತೂರು : ವಾಲ್ಪಾರೈ ಅರಣ್ಯ ಪ್ರದೇಶದಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಅರೆಕಾಲಿಕ ಅರಣ್ಯ ಸಿಬ್ಬಂದಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ಕೊಯಮತ್ತೂರು ಜಿಲ್ಲೆಯ ವಾಲ್ಪಾರೈನಲ್ಲಿ ಮೃತ ಆನೆಯ ದಂತವನ್ನು ಕದ್ದು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಮಣಂಪಲ್ಲಿ ಅರಣ್ಯ ಮೀಸಲು ಅಧಿಕಾರಿ ಗಿರಿಧರನ್ ಮತ್ತು ವಾಲ್ಪಾರೈ ಅರಣ್ಯ ಮೀಸಲು ಅಧಿಕಾರಿ ಸುರೇಶ್ ಕೃಷ್ಣನ್ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಅರಣ್ಯ ಅಧಿಕಾರಿಗಳ ತಂಡ ಕಾರ್ಯಾಚರಣೆ ಕೈಗೊಂಡಿತ್ತು.

ಜೂನ್ 21ರಂದು ವಾಲ್ಪಾರೈ ಬಳಿಯ ಥೈಮುಡಿ ಎನ್ಸಿ ಪ್ರದೇಶದಲ್ಲಿ, ಎರಡು ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ, ಅದೇ ಪ್ರದೇಶದ ಮಣಿಕಂಠನ್ (47), ರಾಜ (39), ಮತ್ತು ದೇವಪಾಲ (31) ಅವರನ್ನು ಬಂಧಿಸಿದ್ದಾರೆ. ಜೊತೆಗೆ ಅವರ ಬಳಿ ಇದ್ದ 5 ಅಡಿ ಉದ್ದ ಎರಡು ದಂತಗಳು ಹಾಗೂ ಕಳ್ಳಸಾಗಣೆಗಾಗಿ ಬಳಸುತ್ತಿದ್ದ ಐಷಾರಾಮಿ ಕಾರನ್ನು ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತನಿಖೆ ವೇಳೆ ಅಯ್ಯರ್ಬಾಡಿ ಬೀಟ್ನಲ್ಲಿ ತಾತ್ಕಾಲಿಕ ಅರಣ್ಯ ನೌಕರರಾಗಿ ಕೆಲಸ ಮಾಡುತ್ತಿದ್ದ ಪ್ರೇಮದಾಸ್ (29) ಮತ್ತು ರಾಮನ್ (35) ಭಾಗಿಯಾಗಿರುವುದು ತಿಳಿದುಬಂದಿದೆ. ನಂತರ, ಅಧಿಕಾರಿಗಳು ಆ ಇಬ್ಬರು ಸಿಬ್ಬಂದಿ ಸೇರಿದಂತೆ ಎಲ್ಲಾ ಐದು ಜನರನ್ನು ಬಂಧಿಸಿದ್ದಾರೆ.


ಮೃತ ಆನೆಯ ದಂತಗಳನ್ನು ಕದ್ದು ಮಾರಾಟ ಮಾಡಲು ಯತ್ನಿಸಿದ್ದಕ್ಕಾಗಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಯಿತು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.
ಆರೋಪಿ ಮಣಿಕಂಠನ್ 2021 ರಲ್ಲಿ ಇದೇ ರೀತಿಯ ಆನೆ ದಂತ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿದ್ದ.

ಪ್ರಕರಣದ ಕುರಿತು ಮಾತನಾಡಿದ ಅರಣ್ಯಾಧಿಕಾರಿ ಗಿರೀಧರನ್, “ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಅರೆಕಾಲಿಕ ಸಿಬ್ಬಂದಿ ಮತ್ತು ಬೇಟೆ ನಿಗ್ರಹ ಸಿಬ್ಬಂದಿ ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ. ಪ್ರಸ್ತುತ, ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಆದೇಶದ ಮೇರೆಗೆ, ಅಣ್ಣಾಮಲೈ ಹುಲಿ ಮೀಸಲು ಪ್ರದೇಶದ ದಟ್ಟ ಕಾಡುಗಳು ಮತ್ತು ಅನುಮಾನಾಸ್ಪದವಾಗಿ ಓಡಾಡುವ ಜನರ ಮೇಲೆ ನಿಗಾ ಇಡಲಾಗುವುದು. ಆರೋಪಿಗಳು ದಂತಗಳನ್ನು ಹೇಗೆ ಸಂಗ್ರಹಿಸಿದರು ಎಂಬುದರ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ” ಎಂದು ತಿಳಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!