ಕೇರಳದಲ್ಲಿ ಆಟ್ಟುಕಲ್ ಪೊಂಗಾಲ ಉತ್ಸವ – ಲಕ್ಷಾಂತರ ಮಹಿಳೆಯರು ಭಾಗಿ

ತಿರುವನಂತಪುರಂ: ಕೇರಳದ ಸ್ತ್ರೀಯರ ಶಬರಿಮಲೆ ಖ್ಯಾತಿಯ 2026ರ ಆಟ್ಟುಕಲ್ ಪೊಂಗಾಲ (Attukal Pongala) ಉತ್ಸವದಲ್ಲಿ ಲಕ್ಷಾಂತರ ಮಹಿಳೆಯರು ಭಾಗಿಯಾಗಿ ಪೊಂಗಲ್ ತಯಾರಿಸಿದರು.

`ಆಟ್ಟುಕಲ್ ಪೊಂಗಾಲ’ ಕೇರಳದ ತಿರುವನಂತಪುರಂದ ಆಟ್ಟುಕಲ್ ಭಗವತಿ ದೇವಸ್ಥಾನದಲ್ಲಿ ಫೆಬ್ರವರಿ-ಮಾರ್ಚ್ನ ಆಚರಿಸಲಾಗುವ 10 ದಿನಗಳ ಉತ್ಸವವಾಗಿದ್ದು, ಒಂಬತ್ತನೇ ದಿನ ಮಹಿಳಾ ಭಕ್ತರು ಬೃಹತ್ ಸಂಖ್ಯೆಯಲ್ಲಿ ಆಗಮಿಸಿ, ದೇವಸ್ಥಾನದಲ್ಲಿ ಅಕ್ಕಿ, ಬೆಲ್ಲ ಮತ್ತು ಬಾಳೆಹಣ್ಣಿನಿಂದ ಮಣ್ಣಿನ ಮಡಕೆಗಳಲ್ಲಿ ಪೊಂಗಲ್ ತಯಾರಿಸಿ, ಆಟ್ಟುಕಲ್ ಭಗವತಿಗೆ ಅರ್ಪಿಸುತ್ತಾರೆ.

ಈ ಆಟ್ಟುಕಲ್ ಭಗವತಿ ದೇವಸ್ಥಾನವು `ಸ್ತೀಯರ ಶಬರಿಮಲೆ’ ಎಂದು ಖ್ಯಾತಿ ಹೊಂದಿದ್ದು, ಪೊಂಗಲ್ ಹಬ್ಬಕ್ಕೆ ಹೆಸರುವಾಸಿಯಾಗಿದೆ. ಪೊಂಗಲ್ ಹಬ್ಬದ ಸಮಯದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸುತ್ತಾರೆ. ಈ ವರ್ಷ ಪೊಂಗಲ್ ಆಚರಣೆಯಲ್ಲಿ 40 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

2009ರಲ್ಲಿ 2.5 ಮಿಲಿಯನ್ ಮಹಿಳಾ ಭಕ್ತರು ಭಾಗವಹಿಸಿ ಗಿನ್ನೀಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ಈ ಉತ್ಸವ ಸ್ಥಾನ ಪಡೆದುಕೊಂಡಿದೆ.

ಈ ಕುರಿತು ತಿರುವನಂತಪುರಂ ಮೇಯರ್ ವಿ.ವಿ ರಾಜೇಶ್ ಮಾತನಾಡಿ, ಹಬ್ಬದ ಸಮಯದಲ್ಲಿ ಲಕ್ಷಾಂತರ ಭಕ್ತರು ಸೇರುವುದರಿಂದ ಉತ್ಸವವನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಅಗತ್ಯ ಸೌಲಭ್ಯಗಳ ಕುರಿತು ಯಾವುದೇ ಸಮಸ್ಯೆಗಳಿಲ್ಲ ಮತ್ತು ಯಾವುದೇ ಹೆಚ್ಚುವರಿ ಅವಶ್ಯಕತೆಗಳನ್ನು ಪೂರೈಸಲು ಅಧಿಕಾರಿಗಳು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ ಎಂದು ಹೇಳಿದರು.

ಎಲ್ಲಾ ವಾರ್ಡ್‌ಗಳಲ್ಲಿ 52 ಟ್ಯಾಂಕರ್‌ಗಳನ್ನು ಇರಿಸಿದ್ದೇವೆ, ಪ್ರತಿ ವಾರ್ಡ್‌ಗೆ ಒಂದು ಟ್ಯಾಂಕರ್, ಮತ್ತು ಆಟ್ಟುಕಲ್ ದೇವಾಲಯದ ಸುತ್ತಲೂ 8 ಟ್ಯಾಂಕರ್‌ಗಳಲ್ಲಿ ನೀರು ತುಂಬಿಸಲಾಗಿದೆ. ಯಾವುದೇ ಹೆಚ್ಚಿನ ಬೇಡಿಕೆಗಳನ್ನು ಅಗತ್ಯವಿರುವಂತೆ ಪರಿಹರಿಸಲಾಗುವುದು. ಸಾರಿಗೆ ವಿಷಯದಲ್ಲಿ, ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಭಕ್ತರ ಸಂಚಾರಕ್ಕೆ ಅನುಕೂಲವಾಗುವಂತೆ ಸಾಕಷ್ಟು ಬಸ್‌ಗಳ ವ್ಯವಸ್ಥೆ ಮಾಡಿದೆ. ಯಾವುದೇ ಸಮಸ್ಯೆ ಇಲ್ಲ ಎಂದರು.

 

 

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!