ಕೇರಳದಲ್ಲಿ ಆಟ್ಟುಕಲ್ ಪೊಂಗಾಲ ಉತ್ಸವ – ಲಕ್ಷಾಂತರ ಮಹಿಳೆಯರು ಭಾಗಿ

ತಿರುವನಂತಪುರಂ: ಕೇರಳದ ಸ್ತ್ರೀಯರ ಶಬರಿಮಲೆ ಖ್ಯಾತಿಯ 2026ರ ಆಟ್ಟುಕಲ್ ಪೊಂಗಾಲ (Attukal Pongala) ಉತ್ಸವದಲ್ಲಿ ಲಕ್ಷಾಂತರ ಮಹಿಳೆಯರು ಭಾಗಿಯಾಗಿ ಪೊಂಗಲ್ ತಯಾರಿಸಿದರು.

`ಆಟ್ಟುಕಲ್ ಪೊಂಗಾಲ’ ಕೇರಳದ ತಿರುವನಂತಪುರಂದ ಆಟ್ಟುಕಲ್ ಭಗವತಿ ದೇವಸ್ಥಾನದಲ್ಲಿ ಫೆಬ್ರವರಿ-ಮಾರ್ಚ್ನ ಆಚರಿಸಲಾಗುವ 10 ದಿನಗಳ ಉತ್ಸವವಾಗಿದ್ದು, ಒಂಬತ್ತನೇ ದಿನ ಮಹಿಳಾ ಭಕ್ತರು ಬೃಹತ್ ಸಂಖ್ಯೆಯಲ್ಲಿ ಆಗಮಿಸಿ, ದೇವಸ್ಥಾನದಲ್ಲಿ ಅಕ್ಕಿ, ಬೆಲ್ಲ ಮತ್ತು ಬಾಳೆಹಣ್ಣಿನಿಂದ ಮಣ್ಣಿನ ಮಡಕೆಗಳಲ್ಲಿ ಪೊಂಗಲ್ ತಯಾರಿಸಿ, ಆಟ್ಟುಕಲ್ ಭಗವತಿಗೆ ಅರ್ಪಿಸುತ್ತಾರೆ.

ಈ ಆಟ್ಟುಕಲ್ ಭಗವತಿ ದೇವಸ್ಥಾನವು `ಸ್ತೀಯರ ಶಬರಿಮಲೆ’ ಎಂದು ಖ್ಯಾತಿ ಹೊಂದಿದ್ದು, ಪೊಂಗಲ್ ಹಬ್ಬಕ್ಕೆ ಹೆಸರುವಾಸಿಯಾಗಿದೆ. ಪೊಂಗಲ್ ಹಬ್ಬದ ಸಮಯದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸುತ್ತಾರೆ. ಈ ವರ್ಷ ಪೊಂಗಲ್ ಆಚರಣೆಯಲ್ಲಿ 40 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

2009ರಲ್ಲಿ 2.5 ಮಿಲಿಯನ್ ಮಹಿಳಾ ಭಕ್ತರು ಭಾಗವಹಿಸಿ ಗಿನ್ನೀಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ಈ ಉತ್ಸವ ಸ್ಥಾನ ಪಡೆದುಕೊಂಡಿದೆ.

ಈ ಕುರಿತು ತಿರುವನಂತಪುರಂ ಮೇಯರ್ ವಿ.ವಿ ರಾಜೇಶ್ ಮಾತನಾಡಿ, ಹಬ್ಬದ ಸಮಯದಲ್ಲಿ ಲಕ್ಷಾಂತರ ಭಕ್ತರು ಸೇರುವುದರಿಂದ ಉತ್ಸವವನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಅಗತ್ಯ ಸೌಲಭ್ಯಗಳ ಕುರಿತು ಯಾವುದೇ ಸಮಸ್ಯೆಗಳಿಲ್ಲ ಮತ್ತು ಯಾವುದೇ ಹೆಚ್ಚುವರಿ ಅವಶ್ಯಕತೆಗಳನ್ನು ಪೂರೈಸಲು ಅಧಿಕಾರಿಗಳು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ ಎಂದು ಹೇಳಿದರು.

ಎಲ್ಲಾ ವಾರ್ಡ್‌ಗಳಲ್ಲಿ 52 ಟ್ಯಾಂಕರ್‌ಗಳನ್ನು ಇರಿಸಿದ್ದೇವೆ, ಪ್ರತಿ ವಾರ್ಡ್‌ಗೆ ಒಂದು ಟ್ಯಾಂಕರ್, ಮತ್ತು ಆಟ್ಟುಕಲ್ ದೇವಾಲಯದ ಸುತ್ತಲೂ 8 ಟ್ಯಾಂಕರ್‌ಗಳಲ್ಲಿ ನೀರು ತುಂಬಿಸಲಾಗಿದೆ. ಯಾವುದೇ ಹೆಚ್ಚಿನ ಬೇಡಿಕೆಗಳನ್ನು ಅಗತ್ಯವಿರುವಂತೆ ಪರಿಹರಿಸಲಾಗುವುದು. ಸಾರಿಗೆ ವಿಷಯದಲ್ಲಿ, ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಭಕ್ತರ ಸಂಚಾರಕ್ಕೆ ಅನುಕೂಲವಾಗುವಂತೆ ಸಾಕಷ್ಟು ಬಸ್‌ಗಳ ವ್ಯವಸ್ಥೆ ಮಾಡಿದೆ. ಯಾವುದೇ ಸಮಸ್ಯೆ ಇಲ್ಲ ಎಂದರು.

 

 

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು