ನಟ ದರ್ಶನ್ ಜಾಮೀನು ರದ್ದು ಹಿನ್ನೆಲೆ : ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ ಎಂದ ರೇಣುಕಾಸ್ವಾಮಿ ತಂದೆ..

ಚಿತ್ರದುರ್ಗ: ಪುತ್ರ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪಿಗೆ ತಂದೆ ಕಾಶಿನಾಥ್ ಶಿವನಗೌಡ ಸಂತೋಷ ವ್ಯಕ್ತಪಡಿಸಿದ್ದಾರೆ.

ತೀರ್ಪಿನ ನಂತರ ಮಾತನಾಡಿದ ಕಾಶಿನಾಥ್‌ ಶಿವನಗೌಡ, “ಜಾಮೀನು ದೊರಕಬಹುದೆಂಬ ಆತಂಕ ಇತ್ತು. ಈಗ ಜಾಮೀನು ರದ್ದಾದ ಕಾರಣ ನ್ಯಾಯದ ಮೇಲೆ ನಂಬಿಕೆ ಬಂದಿದೆ,” ಎಂದು ಹೇಳಿದರು. ಈ ವೇಳೆ ಅವರು ಪುತ್ರನನ್ನು ನೆನೆದು ಭಾವುಕರಾದರು.

“ಸರ್ಕಾರ ಮತ್ತು ಕಾನೂನಿನ ಮೇಲೆ ಈಗ ನಂಬಿಕೆ ಮೂಡಿದೆ. ಅಪರಾಧಿಗಳಿಗೆ ತಪ್ಪದೇ ಶಿಕ್ಷೆಯಾಗಲಿದೆ ಎಂಬ ಭರವಸೆ ಇದೆ,” ಎಂದರು. ತಮ್ಮ ಸೊಸೆಯ ಕೆಲಸದ ವಿಷಯದಲ್ಲೂ ನೋವು ವ್ಯಕ್ತಪಡಿಸಿ, ಸರ್ಕಾರದಿಂದ ತದನೂಕು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

“ಸುಪ್ರೀಂ ಕೋರ್ಟ್‌ನ ತೀರ್ಪು ನಮ್ಮಿಗೆ ನ್ಯಾಯ ದೊರಕಿಸಿದೆ. ಮಗನನ್ನು ಕಳೆದುಕೊಂಡ ನೋವಿನ ಮಧ್ಯೆ ನ್ಯಾಯಾಂಗ ಹಾಗೂ ಸರ್ಕಾರದ ಮೇಲೆ ವಿಶ್ವಾಸ ಬೆಳೆದಿದೆ. ನಾವು ಇವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ,” ಎಂದು ತಿಳಿಸಿದ್ದಾರೆ.

ಅವರು ಹೇಳುವ ಪ್ರಕಾರ, ಮೊಮ್ಮಗ ಮತ್ತು ಸೊಸೆಗೆ ಭರವಸೆ ಆಗಲೆಂದು ಪೂಜೆ ಸಲ್ಲಿಸಲಾಗಿತ್ತು. ತೀರ್ಪು ವಿಳಂಬವಾಗಬಹುದು ಎಂಬ ನಿರೀಕ್ಷೆ ಇತ್ತು, ಆದರೆ ತೀರ್ಪು ಬೇಗ ಬಂದಿದೆ. “ಇದು ಗುರುಗಳು ಹಾಗೂ ದೇವರ ಅನುಗ್ರಹದಿಂದ ಸಾಧ್ಯವಾಗಿದೆ,” ಎಂದು ಅವರು ಹೇಳಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!