ಬಾಹ್ಯಾಕಾಶ ಯಾತ್ರೆ ನಂತರ ಮೊದಲ ಬಾರಿಗೆ ತವರಿಗೆ ಬಂದ ಶುಭಾಂಶು ಶುಕ್ಲಾ !

ಯಶಸ್ವಿ ಬಾಹ್ಯಾಕಾಶ ಯಾತ್ರೆಯ ನಂತರ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಮೊದಲ ಬಾರಿಗೆ ತಮ್ಮ ತವರೂರು ಲಕ್ನೋಗೆ ಬಂದಿಳಿದಿದ್ದು, ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಮಾಡಿಕೊಳ್ಳಲಾಯಿತು.

ಸೋಮವಾರ ಬೆಳಿಗ್ಗೆ (ಆ.25) ಲಕ್ನೋ ವಿಮಾನ ನಿಲ್ದಾಣದಲ್ಲಿ ಶುಭಾಂಶು ಶುಕ್ಲಾ ಅವರು ಕಲಿತ ಹಳೆಯ ಶಾಲೆ ಸಿಟಿ ಮಾಂಟೆಸ್ಸರಿಯ ವಿದ್ಯಾರ್ಥಿಗಳು ಸ್ವಾಗತಿಸಿದರು. ಇದೇ ವೇಳೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬ್ರಜೇಶ್ ಪಾಠಕ್ ಗೌರಪೂರ್ವಕವಾಗಿ ಸ್ವಾಗತಿಸಿದರು. ನಿಲ್ದಾಣದಲ್ಲಿ ಶುಭಾಂಶು ಕುಟುಂಬಸ್ಥರು ಸೇರಿದಂತೆ ಲಕ್ನೋದ ಜನರು ಸಂಭ್ರಮದಲ್ಲಿ ವಿಜಯ ಘೋಷಣೆಗಳನ್ನು ಕೂಗಿದರು.

ಬಳಿಕ ಸಿಟಿ ಮಾಂಟೆಸ್ಸರಿ ಶಾಲೆಯ 63,000 ವಿದ್ಯಾರ್ಥಿಗಳು ವಿಮಾನ ನಿಲ್ದಾಣದಿಂದ ಜಿ20 ಚೌಕ್‌ವರೆಗೆ ವಿಜಯಯಾತ್ರೆ ನಡೆಸಿದರು. ಇದೇ ವೇಳೆ ಪತ್ರಿಕಾಗೋಷ್ಠಿಯಲ್ಲಿ ಯುಪಿ ಡಿಸಿಎಂ ಪಾಠಕ್ ಮಾತನಾಡಿ, ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಎತ್ತರಕ್ಕೆ ತಲುಪಿದೆ. ನಮ್ಮೂರಿನ ಹೆಮ್ಮೆಯ ಪುತ್ರನನ್ನು ಸ್ವಾಗತಿಸಲು ನಮಗೆ ನಿಜಕ್ಕೂ ತುಂಬಾ ಹೆಮ್ಮೆ ಎನಿಸುತ್ತದೆ. ಶುಭಾಂಶು ಶುಕ್ಲಾ ಇಡೀ ಜಗತ್ತಿಗೆ ಹೊಸ ಮಾರ್ಗವನ್ನು ತೋರಿಸಿದ್ದಾರೆ. ಈ ಹಿನ್ನೆಲೆ ರಾಜ್ಯ ಸರ್ಕಾರವು ಅವರ ಗೌರವಾರ್ಥವಾಗಿ ರಾಜ್ಯಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈ ಮೂಲಕ ಶುಭಾಂಶು ಯುವಕರಿಗೆ ಸ್ಫೂರ್ತಿಯಾಗಲಿದ್ದಾರೆ ಎಂದರು.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!