ಬಂಡೀಪುರ – ನಾಗರಹೊಳೆ ಸಫಾರಿ ಬಂದ್ ! ರಾಷ್ಟ್ರೀಯ ಉದ್ಯಾನವನದ ಸಿ ಎಫ್ ಪ್ರಭಾಕರನ್ ಎತ್ತಂಗಡಿ.

ಮೈಸೂರು ಜಿಲ್ಲೆಯ ನಂಜನಗೂಡು ಮತ್ತು ಸರಗೂರು ತಾಲೂಕಿನ ಗಡಿ ಭಾಗಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನರಭಕ್ಷಕ ವ್ಯಾಘ್ರಗಳು ನಾಲ್ಕು ಜನರ ಮೇಲೆ ದಾಳಿ ಮಾಡಿ ಮೂವರು ಮೃತಪಟ್ಟಿದ್ದಾರೆ.
ಸರಗೂರು ತಾಲೂಕಿನಲ್ಲಿ ಇಂದು ನಡೆದಿರುವ ಹುಲಿಯ ದಾಳಿಯಿಂದ ಜನರು ರೊಚ್ಚಿಗೆದ್ದಿದ್ದಾರೆ. ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಸಿಎಫ್ ಪ್ರಭಾಕರ್ ಎಂಬುವರನ್ನ ವರ್ಗಾವಣೆಗೊಳಿಸಿ ನೂತನ ಸಿಎಫ್ ಸಂಪತ್ ಕುಮಾರ್ ಎಂಬುವರನ್ನು ನಿಯೋಜನೆ ಮಾಡಿದ್ದಾರೆ.

ಹಳೆ ಹೆಗ್ಗುಡಿಲು ಗ್ರಾಮದ ದಂಡನಾಯಕ ಎಂಬ ರೈತನನ್ನು ಬಲಿ ಪಡೆದ ನರಭಕ್ಷಕ ವ್ಯಾಘ್ರವನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಅಗ್ರಹಿಸಿ ಸಾಕಷ್ಟು ಜನರ ತಂಡ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮುಗಿಬಿದ್ದಿದ್ದಾರೆ ಆಕ್ರೋಶ ವ್ಯಕ್ತಪಡಿಸಲು ಮುಂದಾಗಿದ್ದಾರೆ. ಮೊಳೆಯೂರು ಮತ್ತು ಸರಗೂರು ಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೃತ ಎಂಬ ಮಹಿಳಾ ಆರ್ ಎಫ್ ಓ ಗೆ ಛೀಮಾರಿ ಹಾಕಿ ವಾಗ್ದಾಳಿ ನಡೆಸಿ ತಳ್ಳಾಟ ನೂಕಾಟ ನಡೆಸಲಾಗಿದೆ. ಹುಲಿಯ ದಾಳಿಯಿಂದ ಮೃತಪಟ್ಟಿರುವ ರೈತ ದಂಡ ನಾಯಕ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದಂಡನಾಯಕನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲು ಗ್ರಾಮಸ್ಥರು ಮತ್ತು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಗಡಿಭಾಗದ ತಾಲೂಕಾಗಿರುವ ನಂಜನಗೂಡು ಮತ್ತು ಸರಗೂರು ಭಾಗದ ರೈತರು ಆತಂಕದಲ್ಲೇ ದಿನದೊಡುತ್ತಿದ್ದಾರೆ.

ಹುಲಿಗಳ ಸಂತತಿ ಹೆಚ್ಚಾಗಿರುವ ಹಿನ್ನೆಲೆ ಯಾವ ವೇಳೆಯಲ್ಲಿ ಯಾರ ಮೇಲೆ ದಾಳಿ ಮಾಡುತ್ತದೆ? ಯಾರ ಜೀವ ಬಲಿ ತೆಗೆದುಕೊಳ್ಳುತ್ತದೆ ಎಂದು ರೈತರಲ್ಲಿ ಜೀವ ಭಯ ಎದುರಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಎಂದು ಹಳೆ ಹೆಗ್ಗುಡಿಲು ಗ್ರಾಮದಲ್ಲಿ ಸಾರ್ವಜನಿಕರು ಮತ್ತು ರೈತರು ಆಕ್ರೋಶ ವ್ಯಕ್ತಪಡಿಸಲು ಮುಂದಾಗಿದ್ದಾರೆ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!