ಅಧಿಕೃತವಾಗಿ ಬಾನು ಮುಷ್ತಾಕ್ ಗೆ ದಸರಾ ಉದ್ಘಾಟನೆಗೆ ಆಹ್ವಾನ…..!

ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಭಾನು ಮುಷ್ತಾಕ್ ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಇಂದು ದಸರಾ ಸಮಿತಿ ಬಾನು ಮುಷ್ತಾಕ್ ನಿವಾಸಕ್ಕೆ ಭೇಟಿಯಾಗಿ, ಅಧಿಕೃತವಾಗಿ ಆಹ್ವಾನಿಸಿದೆ.

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಚಾಮುಂಡೇಶ್ವರಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರೂಪಾ ಮತ್ತು ಮೈಸೂರು ಜಿಲ್ಲಾಡಳಿತ ನೇತೃತ್ವದ ತಂಡವು ಅಮೀರ್ ಮೊಹಲ್ಲಾದಲ್ಲಿರುವ ಭಾನು ಮುಷ್ತಾಕ್ ನಿವಾಸಕ್ಕೆ ಆಗಮಿಸಿ, ಆಹ್ವಾನ ನೀಡಿದೆ.

ಕುಟುಂಬ ಸಮೇತರಾಗಿ ದಸರಾಗೆ ಬರಬೇಕೆಂದು ಡಿ.ಸಿ ಲಕ್ಷ್ಮಿಕಾಂತರೆಡ್ಡಿ ಆಹ್ವಾನ ನೀಡಿದ್ದಾರೆ. ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಆನೆ ವಿಗ್ರಹ ನೀಡಿ ಕರೆಯೋಲೆ ಕೊಟ್ಟಿದ್ದಾರೆ. ದಸರಾ ಆಹ್ವಾನವನ್ನು ಪ್ರೀತಿಯಿಂದ ಸ್ವೀಕರಿಸಿದ ಬಾನು ಮುಷ್ತಾಕ್, ಬರುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ದಸರಾ ಉದ್ಘಾಟನೆಗೆ ತಮ್ಮನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಅವರು..

ಖಂಡಿತಾ ನನಗೆ ಖುಷಿ ವಿಚಾರ. ದಸರಾವನ್ನು ನಾವು ಹಲವು ಪ್ರಭೇದಗಳಲ್ಲಿ ನೋಡಬಹುದು. ನೀವು ಚಾಮುಂಡೇಶ್ವರಿ ತಾಯಿ ಅಂತಿರಿ, ನಿಮ್ಮ ಭಾವವನ್ನು ಗೌರವಿಸುತ್ತೇನೆ. ಅನೇಕರು ಇದನ್ನ ನಾಡಹಬ್ಬ ಅಂತಾರೆ, ಅದನ್ನು ಗೌರವಿಸುತ್ತೇನೆ. ನಾಡಹಬ್ಬ, ಚಾಮುಂಡೇಶ್ವರಿ ತಾಯಿ ಎಂದು ಪ್ರೀತಿ, ಅಭಿಮಾನದಿಂದ ಕರೀತೀರಿ. ಇದು ನಮ್ಮ ಸಂಸ್ಕೃತಿಯ ಭಾಗವೇ ಆಗಿದೆ, ನಾಡಿನ ಭಾಗವಾಗಿದೆ. ಹಾಗಾಗಿ ಇದು ನನಗೂ ಪ್ರಿಯವಾಗಿದೆ. ನಾನು ಗೌರವಿಸುವ ಹಬ್ಬವಾಗಿದೆ. ಪ್ರೀತಿಯಿಂದ ಭಾಗಿಯಾಗುವ ಹಬ್ಬವಾಗಿದೆ. ನಾನು ತಂದೆ ತಾಯಿ ಜೊತೆ ಹಲವು ಬಾರಿ ಜಂಬು ಸವಾರಿ ನೋಡಲು ಹೋಗ್ತಿದ್ದೆ. ಈಗ ನಾನೇ ದಸರಾ ಉದ್ಘಾಟನೆ ಸಂದರ್ಭದ ಆಹ್ವಾನ ಬಂದಿದೆ. ನನಗೆ ಸಂತೋಷವಾಗಿದೆ.

ಬಾನು ಮುಷ್ತಾಕ್, ಹಿರಿಯ ಸಾಹಿತಿ

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!