ಆಸ್ತಿ ತೆರಿಗೆ ಪಾವತಿದಾರರಿಗೆ ಅಕ್ಷಯ ತೃತೀಯದಂದು ಬಿಬಿಎಂಪಿ ಗುಡ್ ನ್ಯೂಸ್.

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗೆ 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆ ಏಪ್ರಿಲ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿತ್ತು. ಆದರೆ ಇದೀಗ ಶೇ.5ರಷ್ಟು ವಿನಾಯಿತಿ ಜೊತೆ ತೆರಿಗೆ ಪಾವತಿ ಅವಧಿವನ್ನು ಮೇ 30ರವರೆಗೆ ವಿಸ್ತರಣೆ ಮಾಡಿದೆ. ಆ ಮೂಲಕ ಸಿಲಿಕಾನ್ ಸಿಟಿಯಲ್ಲಿ ಆಸ್ತಿ ತೆರಿಗೆ ಪಾವತಿದಾರರಿಗೆ ಬಿಬಿಎಂಪಿ ಗುಡ್ ನ್ಯೂಸ್ ನೀಡಿದೆ. ಆದಾಯ ಹೆಚ್ಚಿಸಿಕೊಳ್ಳಲು ಬಿಬಿಎಂಪಿ ಈ ಪ್ಲ್ಯಾನ್ ರೂಪಿಸಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಏಪ್ರಿಲ್ 30ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿತ್ತು.


ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿದೆ. ಹಾಗಾಗಿ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ.
2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿ ತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡುವ ಸಂಬಂಧ ಸರ್ಕಾರದ ಆದೇಶ ಕೋರಿ ಪ್ರಸ್ತಾವನೆ ಮಂಡಿಸಲಾಗಿದೆ. ಆ ಮೂಲಕ ಆದೇಶ ನೀಡಿ ಅಧಿಸೂಚನ ಹೊರಡಿಸಲಾಗಿದೆ.
ಸರ್ಕಾರದ ಆದೇಶ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು