ಆಸ್ತಿ ತೆರಿಗೆ ಪಾವತಿದಾರರಿಗೆ ಅಕ್ಷಯ ತೃತೀಯದಂದು ಬಿಬಿಎಂಪಿ ಗುಡ್ ನ್ಯೂಸ್.

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗೆ 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆ ಏಪ್ರಿಲ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿತ್ತು. ಆದರೆ ಇದೀಗ ಶೇ.5ರಷ್ಟು ವಿನಾಯಿತಿ ಜೊತೆ ತೆರಿಗೆ ಪಾವತಿ ಅವಧಿವನ್ನು ಮೇ 30ರವರೆಗೆ ವಿಸ್ತರಣೆ ಮಾಡಿದೆ. ಆ ಮೂಲಕ ಸಿಲಿಕಾನ್ ಸಿಟಿಯಲ್ಲಿ ಆಸ್ತಿ ತೆರಿಗೆ ಪಾವತಿದಾರರಿಗೆ ಬಿಬಿಎಂಪಿ ಗುಡ್ ನ್ಯೂಸ್ ನೀಡಿದೆ. ಆದಾಯ ಹೆಚ್ಚಿಸಿಕೊಳ್ಳಲು ಬಿಬಿಎಂಪಿ ಈ ಪ್ಲ್ಯಾನ್ ರೂಪಿಸಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಏಪ್ರಿಲ್ 30ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿತ್ತು.


ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿದೆ. ಹಾಗಾಗಿ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ.
2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿ ತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡುವ ಸಂಬಂಧ ಸರ್ಕಾರದ ಆದೇಶ ಕೋರಿ ಪ್ರಸ್ತಾವನೆ ಮಂಡಿಸಲಾಗಿದೆ. ಆ ಮೂಲಕ ಆದೇಶ ನೀಡಿ ಅಧಿಸೂಚನ ಹೊರಡಿಸಲಾಗಿದೆ.
ಸರ್ಕಾರದ ಆದೇಶ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!