ಆಸ್ತಿ ತೆರಿಗೆ ವಸೂಲಿ ಮಾಡಲು ಮುಂದಾದ ಬಿಬಿಎಂಪಿ

ಬೆಂಗಳೂರು: ಆಸ್ತಿ ತೆರಿಗೆ ಪಾವತಿ ಮಾಡದೇ ಇರುವ ಸುಸ್ತಿದಾರರಿಗೆ ಬಿಬಿಎಂಪಿ (BBMP) ನೋಟಿಸ್ ನೀಡಿದ್ದು, ಕೂಡಲೇ ಪಾವತಿ ಮಾಡುವಂತೆ ಸೂಚಿಸಿದೆ. ಇಲ್ಲವಾದಲ್ಲಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ಚರ ಮತ್ತು ಸ್ಥಿರ ಆಸ್ತಿಗಳ ತುರ್ತು ಮಾರಾಟ ಮಾಡುವುದು ಸೇರಿದಂತೆ ವಸೂಲಿ ಮಾಡಲು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ. ಒಟ್ಟಾರೆಯಾಗಿ ಬೆಂಗಳೂರಿನಲ್ಲಿ 2.75 ಲಕ್ಷ ಆಸ್ತಿ ಮಾಲೀಕರು ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಅವರಿಗೆ ನೋಟಿಸ್ ನೀಡಲಾಗಿದೆ. ತೆರಿಗೆ ಪಾವತಿ ಮಾಡದವರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಆದೇಶ ಹೊರಡಿಸಿದ್ದಾರೆ.ಆಸ್ತಿ ತೆರಿಗೆ ಪಾವತಿಸುವುದನ್ನು ಬಾಕಿ ಇರಿಸಿಕೊಂಡವರು BBMPtax.karnataka.gov.in ವೆಬ್​ಸೈಟ್​​ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸುವಂತೆ ಬಿಬಿಎಂಪಿ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

 

ತೆರಿಗೆ ಬಾಕಿ ಇರುವ ಏರಿಯಾಗಳು:
ಬೆಂಗಳೂರು ಮಹಾನಗರ ಪಾಲಿಕೆಯ ವಿವಿಧ ಏರಿಯಾಗಳಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿರುವ ಆಸ್ತಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಮಹದೇವಪುರ ವಲಯದಲ್ಲೇ ಅತ್ಯಧಿಕ ಆಸ್ತಿಗಳು ತೆರಿಗೆ ಕಟ್ಟದೆ ಬಾಕಿ ಉಳಿಸಿವೆ. ಈ ವಲಯದಲ್ಲಿ 65,040 ಸುಸ್ತಿದಾರರು ಇದ್ದು, 197.90 ಕೋಟಿ ರೂ. ತೆರಿಗೆ ಪಾವತಿಗೆ ಬಾಕಿ ಇದೆ. ದಕ್ಷಿಣ ವಲಯದಲ್ಲೂ ದೊಡ್ಡ ಪ್ರಮಾಣದ ತೆರಿಗೆ ಬಾಕಿ ಇದ್ದು, 25,162 ಸುಸ್ತಿದಾರರಿದ್ದಾರೆ. 116.81 ಕೋಟಿ ರೂ. ತೆರಿಗೆ ಬಾಕಿ ಇದೆ. ಪೂರ್ವ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿಯೂ ಸಹ ಗಣನೀಯ ಸಂಖ್ಯೆಯ ಆಸ್ತಿ ಮಾಲೀಕರು ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿದ್ದಾರೆ. ಇದೇ ರೀತಿ ಯಲಹಂಕ ಮತ್ತು ಪಶ್ಚಿಮ ವಲಯಗಳಲ್ಲಿ ಕೂಡ ತೆರಿಗೆ ಬಾಕಿದಾರರ ಸಂಖ್ಯೆ ಹೆಚ್ಚಾಗಿದೆ. ರಾಜರಾಜೇಶ್ವರಿ ನಗರ ಮತ್ತು ದಸರಹಳ್ಳಿ ವಲಯಗಳಲ್ಲಿಯೂ ಸಹ ಸಾಕಷ್ಟು ಆಸ್ತಿಗಳು ತೆರಿಗೆ ಕಟ್ಟದೆ ಬಿಬಿಎಂಪಿಗೆ ಭಾರೀ ನಷ್ಟ ಉಂಟುಮಾಡಿವೆ. ಒಟ್ಟಾರೆಯಾಗಿ, ಬೆಂಗಳೂರು ನಗರದ ಎಲ್ಲಾ ವಲಯಗಳನ್ನು ಸೇರಿಸಿದಾಗ 786.86 ಕೋಟಿ ರೂ. ತೆರಿಗೆ ಕಟ್ಟದೆ ಬಿಬಿಎಂಪಿಗೆ ಭಾರಿ ನಷ್ಟವಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!