
ಗ್ಯಾಸ್ ಗೀಸರ್ನಿಂದ ಕಾರ್ಬನ್ ಮಾನಾಕ್ಸೆಡ್ ಸೋರಿಕೆಯಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಪಿರಿಯಾಪಟ್ಟಣದ ಕಾವಾಡಗೇರಿಯಲ್ಲಿ ನಡೆದಿರುವ ಘಟನೆ. ಗುಲ್ಬರ್ಮ್ ತಾಜ್ (23), ಸಿಮ್ರಾನ್ ತಾಜ್ (20) ಮೃತ ದುರ್ದೈವಿಗಳು. ಗುಲ್ಬಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನದ ಕೋಣೆಗೆ ಹೋದಾಗ ಘಟನೆ ಸಂಭವಿಸಿದೆ.

ಸ್ನಾನದ ಕೋಣೆಗೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿಲ್ಲ. ಅನುಮಾನಗೊಂಡ ತಂದೆ ಅಲ್ತಾಫ್ ಬಾಗಿಲು ಬಡಿದಿದ್ದಾರೆ. ಆಗಲೂ ಬಾಗಿಲು ತೆಗೆದಿಲ್ಲ ತೆರೆದು ನೋಡಿದಾಗ ಮಕ್ಕಳಿಬ್ಬರು ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿರೋದು ಗೊತ್ತಾಗಿದೆ. ತಕ್ಷಣ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಕೋಣೆಯಲ್ಲಿ ಕಿಟಕಿ ಇರಲಿಲ್ಲ ಎನ್ನಲಾಗಿದೆ, ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.




