ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ವಂಚಿಸಿದ ಬೆಂಗಳೂರಿನ ಮಹಿಳೆ.

ಮಂಗಳೂರು : ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ನ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.

ದೂರುದಾರ ರಾಜೇಶ್ ವೃತ್ತಿಯಲ್ಲಿ ಗಾಯಕರಾಗಿದ್ದು, ಅರವಿಂದ್ ವಿವೇಕ್ ಎಂಬ ಫೇಸ್ಬುಕ್ ಪೇಜ್ನಲ್ಲಿ ರಾಜೇಶ್ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ರಾಜೇಶ್ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್ಬುಕ್ ಮೂಲಕ ಪರಿಚಯವಾಗಿದ್ದಾಳೆ. ಸೌಜನ್ಯ ಹೆಲ್ಪ್ಲೈನ್ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವು ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಬಗೆಹರಿಸಿದ್ದೇನೆ ಅಂತ ರಾಜೇಶ್ ಅವರಿಗೆ ನಂಬಿಸಿದ್ದಾಳೆ.

ಆಗ, ರಾಜೇಶ್ ಅವರು ಬಂಟ್ವಾಳ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾ ಪವಿತ್ರ ನಾಗರಾಜ್ಗೆ ತಿಳಿಸಿದ್ದಾರೆ. ಆಗ, ಸಂಧ್ಯಾ ಹೈಕೋರ್ಟ್ನಲ್ಲಿ ಕೇಸ್ ಬಗೆಹರಿಸುತ್ತೇನೆ, ಆದರೆ, ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ. ನಂತರ, ರಾಜೇಶ್ ಅವರಿಂದ ಸಂಧ್ಯಾ ಹಂತ ಹಂತವಾಗಿ 3.20 ಲಕ್ಷ ರೂ. ಪಡೆದಿದ್ದಾಳೆ. ಹಣ ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ರಾಜೇಶ್ ಅವರು ಸಂಧ್ಯಾಗೆ ಪ್ರಶ್ನಸಿದ್ದಾರೆ.

ಆಗ, ಸಂಧ್ಯಾ ಇನ್ನೂ ಹೆಚ್ಚಿನ ಹಣ ನೀಡುವಂತೆ ಸಂಧ್ಯಾ ಹೇಳಿದ್ದಾಳೆ. ಸಂಧ್ಯಾ ಮಾತು ಕೇಳಿ ಸಂಶಯಗೊಂಡ ರಾಜೇಶ್ ಅವರು ಕೋರ್ಟ್ಗೆ ಸಲ್ಲಿಸಿರುವ ದಾಖಲೆಗಳ ಬಗ್ಗೆ ಕೇಳಿದ್ದಾರೆ. ಸಂಧ್ಯಾ ಕೈಕಾಲು ಮುರಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ಬಳಿಕ ರಾಜೇಶ್ ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಸಿದ್ದಾರೆ. ಬಿಎನ್ಎಸ್ ಕಾಯ್ದೆ 318(4) ಮತ್ತು 351(2) ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!