ಭಾರತ-ಪಾಕ್ ಮ್ಯಾಚ್ ನೋಡಲ್ಲ ಎಂದ ಪ್ರದೀಪ್ ಈಶ್ವರ್, ಕೇಂದ್ರ ಸರ್ಕಾರ ವಿರುದ್ಧ ಕಿಡಿ ಕಾರಿದ MLA ಪ್ರದೀಪ್ ಈಶ್ವರ್

ಬದ್ಧ ವೈರಿಯಾಗಿರುವ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಇವತ್ತು ಏಷ್ಯಾಕಪ್​ ಟಿ20 ಪಂದ್ಯವಾಡಲಿದೆ. ಈಗಾಗಲೇ ಎರಡು ತಂಡಗಳು ಭಾರೀ ಸಿದ್ಧತೆ ನಡೆಸಿದ್ದು ಇನ್ನೇನು ಕೆಲವೇ ಗಂಟೆಗಳಲ್ಲಿ ಪಂದ್ಯ ಆರಂಭವಾಗಲಿದೆ.

ಬೆಂಗಳೂರು: ಬದ್ಧ ವೈರಿಯಾಗಿರುವ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಇವತ್ತು ಏಷ್ಯಾಕಪ್​ ಟಿ20 ಪಂದ್ಯವಾಡಲಿದೆ. ಈಗಾಗಲೇ ಎರಡು ತಂಡಗಳು ಭಾರೀ ಸಿದ್ಧತೆ ನಡೆಸಿದ್ದು ಇನ್ನೇನು ಕೆಲವೇ ಗಂಟೆಗಳಲ್ಲಿ ಪಂದ್ಯ ಆರಂಭವಾಗಲಿದೆ. ಪಾಕ್ ವಿರುದ್ಧ ಭಾರತ ಅಖಾಡಕ್ಕೆ ಇಳಿಯಬಾರದು ಎಂದು ಹಲವೆಡೆ ವಿರೋಧ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಈ ಸಂಬಂಧ ಶಾಸಕ ಪ್ರದೀಪ್ ಈಶ್ವರ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಭಾರತ ಹಾಗೂ ಪಾಕಿಸ್ತಾನದ ನಡುವಿನ ಪಂದ್ಯವನ್ನು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ನಿಲ್ಲಿಸಬಹುದಿತ್ತು. ಇವರು ಯಾವ ಮುಖ ಇಟ್ಟುಕೊಂಡು ಮ್ಯಾಚ್ ಆಡಿಸುತ್ತಿದ್ದಾರೆ. ಈ ಪಂದ್ಯವನ್ನು ರದ್ದು ಮಾಡಬೇಕಿತ್ತು. ಪಹಲ್ಗಾಮ್ ಘಟನೆಯ ನೋವು ನಮ್ಮಲ್ಲಿ ಇನ್ನು ಹಾಗೇ ಇದೆ ಎಂದು ಹೇಳಿದ್ದಾರೆ.
ಕೇಂದ್ರದ ಗೃಹ ಮಂತ್ರಿ ಅಮಿತ್ ಶಾ ಮಗ ಜೈಶಾಗೆ ಬ್ಯುಸಿನೆಸ್​ ಮುಖ್ಯ. ಇಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಬಿ.ವೈ ವಿಜಯೇಂದ್ರ, ಶಾಸಕ ಬಸನಗೌಡ ಯತ್ನಾಳ್ ಅವರು ಪಾಕಿಸ್ತಾನ ಅಂತ ಬೊಬ್ಬೆ ಹಾಕುತ್ತಾರೆ. ಇವರಿಗೆ ಅದೇ ಧಮ್ಮು, ತಾಕತ್ ಇದ್ದರೇ ಕೇಂದ್ರ ಸರ್ಕಾರಕ್ಕೆ ಹೇಳಿ ಮ್ಯಾಚ್ ರದ್ದು ಮಾಡಿಸಲಿ. ಒಂದು ವೇಳೆ ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಿದ್ರೆ ಪಂದ್ಯ ರದ್ದು ಮಾಡಿಸುತ್ತಿದ್ದೇವು. ಪಹಲ್ಗಾಮ್ ಘಟನೆ ಇನ್ನೂ ಮರೆತಿಲ್ಲ, ನೋವಿದೆ. ಅದಕ್ಕಾಗಿ ಇಂದಿನ ಮ್ಯಾಚ್ ನೋಡಲ್ಲ ಎಂದು ಎಂಎಲ್​ಎ ಪ್ರದೀಪ್ ಈಶ್ವರ್​ ಅವರು ಹೇಳಿದ್ದಾರೆ.

ಕಳೆದ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದರು. ಇದರಲ್ಲಿ ಕರ್ನಾಟಕದವರು ಸೇರಿದ್ದಾರೆ. ಪಹಲ್ಗಾಮ್ ದಾಳಿಗೆ ಪಾಕಿಸ್ತಾನವೇ ಕಾರಣ. ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಕೂಡ ನಡೆದಿತ್ತು. ಈ ಎಲ್ಲಾ ಬೆಳವಣಿಗಳ ನಡುವೆ ಪಾಕ್ ವಿರುದ್ಧ ಭಾರತ ಪಂದ್ಯವಾಡುತ್ತಿರುವುದಕ್ಕೆ ವಿರೋಧ ಕೇಳಿ ಬರುತ್ತಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!